September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಿತ್ತಬಾಗಿಲು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

ಮಿತ್ತಬಾಗಿಲು: ಮಿತ್ತಬಾಗಿಲು ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷ ವಿನಯಚಂದ್ರ ರವರ ಅಧ್ಯಕ್ಷತೆಯಲ್ಲಿ ಮಾ.5ರಂದು ಪಂಚಾಯತ್ ಸಭಾಂಗಣದಲ್ಲಿ ಜರುಗಿತು.

ಮಾರ್ಗದರ್ಶಕ ಅಧಿಕಾರಿಯಾಗಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಧನಂಜಯ್ ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು.

ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.

ಗ್ರಾಮ ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಗ್ರಾ.ಪಂ. ಸದಸ್ಯರಾದ ಅಹಮ್ಮದ್ ಕಬೀರ್, ಚಂದ್ರಶೇಖರ್ ಗೌಡ, ಶ್ರೀಮತಿ ಚೇತನಾ, ಶ್ರೀಮತಿ ಮೋಹಿನಿ, ಶ್ರೀಮತಿ ಶಾಂಭವಿ, ರಾಮಣ್ಣ, ಶ್ರೀಮತಿ ಲತಾ, ಶಾಹುಲ್ ಹಮೀದ್,
ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸದಸ್ಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂ. ಅಭಿವೃದ್ಧಿ ಅಧಿಕಾರಿ ಮೋಹನ್ ಬಂಗೇರ ಸ್ವಾಗತಿಸಿದರು. ಪಂ. ಗುಮಾಸ್ತ ಮಧುಕರ್ ಪ್ರಭು ಅನುಪಾಲನ ವರದಿ ವಾಚಿಸಿದರು.

Related posts

ಎಸ್‌ಡಿಎಂ ಪಾಲಿಟೆಕ್ನಿಕ್‌ನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಮನೋಜ್ ಕಟ್ಟೆಮಾರ್‌ರವರ ಹುಟ್ಟುಹಬ್ಬದ ಪ್ರಯುಕ್ತ ತಾಲೂಕು ಆಸ್ಪತ್ರೆಯ ಬಡ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನೂತನ ಕೇಂದ್ರ ಕಛೇರಿ ಶ್ರೀ ಗುರುಸಾನಿಧ್ಯ ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ ಮತ್ತು ಆಡಳಿತ ಕಛೇರಿಯ ಉದ್ಘಾಟನೆ

Suddi Udaya

ಶಾಸಕರುಗಳ ಹಕ್ಕುಗಳಿಗೆ ಚ್ಯುತಿಯನ್ನು ಮಾಡಿದ ಅರಣ್ಯಾಧಿಕಾರಿಗಳ ವಿರುದ್ಧ ಬೆಳಗಾವಿ ಅಧಿವೇಶನದಲ್ಲಿ ಶಾಸಕರಿಂದ ಹಕ್ಕು ಚ್ಯುತಿ ಮಂಡನೆ

Suddi Udaya

ದಿಡುಪೆ- ಕಜಕೆ ಕೆಎಸ್ಸಾರ್ಟಿಸಿ ಬಸ್ ಸಂಚಾರಕ್ಕೆ ಚಾಲನೆ: ಬಸ್ ನ್ನು ಸ್ವಾಗತಿಸಿದ, ಮಲವಂತಿಗೆ, ಕಜಕೆ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು

Suddi Udaya

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್: ವಸಂತ ಗಿಳಿಯಾರ್ ವಿರುದ್ದ ಕಾನೂನು ಕ್ರಮಕ್ಕೆ ವಸಂತ ಬಂಗೇರ ಅಭಿಮಾನಿ ಬಳಗದಿಂದ ಒತ್ತಾಯ: ಸೌಜನ್ಯ ಆತ್ಯಚಾರ ಮತ್ತು ಕೊಲೆ ಪ್ರಕರಣಕ್ಕೆ ನ್ಯಾಯ ಸಿಗಬೇಕೆಂಬುದು ವಸಂತ ಬಂಗೇರ ಅಭಿಮಾನಿ ಬಳಗದ ನಿಲುವು

Suddi Udaya
error: Content is protected !!