April 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಿತ್ತಬಾಗಿಲು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

ಮಿತ್ತಬಾಗಿಲು: ಮಿತ್ತಬಾಗಿಲು ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷ ವಿನಯಚಂದ್ರ ರವರ ಅಧ್ಯಕ್ಷತೆಯಲ್ಲಿ ಮಾ.5ರಂದು ಪಂಚಾಯತ್ ಸಭಾಂಗಣದಲ್ಲಿ ಜರುಗಿತು.

ಮಾರ್ಗದರ್ಶಕ ಅಧಿಕಾರಿಯಾಗಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಧನಂಜಯ್ ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು.

ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.

ಗ್ರಾಮ ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಗ್ರಾ.ಪಂ. ಸದಸ್ಯರಾದ ಅಹಮ್ಮದ್ ಕಬೀರ್, ಚಂದ್ರಶೇಖರ್ ಗೌಡ, ಶ್ರೀಮತಿ ಚೇತನಾ, ಶ್ರೀಮತಿ ಮೋಹಿನಿ, ಶ್ರೀಮತಿ ಶಾಂಭವಿ, ರಾಮಣ್ಣ, ಶ್ರೀಮತಿ ಲತಾ, ಶಾಹುಲ್ ಹಮೀದ್,
ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸದಸ್ಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂ. ಅಭಿವೃದ್ಧಿ ಅಧಿಕಾರಿ ಮೋಹನ್ ಬಂಗೇರ ಸ್ವಾಗತಿಸಿದರು. ಪಂ. ಗುಮಾಸ್ತ ಮಧುಕರ್ ಪ್ರಭು ಅನುಪಾಲನ ವರದಿ ವಾಚಿಸಿದರು.

Related posts

ಕೊಕ್ಕಡ: ಕಾರು ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ಸವಾರರಿಗೆ ಗಾಯ

Suddi Udaya

ಕ್ಷೌರಿಕ ವೃತ್ತಿಯಲ್ಲಿರುವಾಗಲೇ ಹೃದಯಾಘಾತದಿಂದ ರಾಧಾಕೃಷ್ಣ ಭಂಡಾರಿ ನಿಧನ

Suddi Udaya

ಆ. 27: ಬೆಳ್ತಂಗಡಿ ಎಸ್‌ಸಿಡಿಸಿಸಿ ಬ್ಯಾಂಕ್ ಬೆಳ್ತಂಗಡಿ ಶಾಖಾ ಕಟ್ಟಡದಲ್ಲಿ ಹೊಸ ಎಟಿಎಂ ಉದ್ಘಾಟನೆ ಹಾಗೂ ನೂತನ ಲಿಪ್ಟ್ ಉದ್ಘಾಟನಾ ಕಾರ್ಯಕ್ರಮ

Suddi Udaya

ರಾಜ್ಯದಲ್ಲಿ ವಚನಭ್ರಷ್ಟ ಕಾಂಗ್ರೆಸ್ ಸರಕಾರ: ಪ್ರತಾಪಸಿಂಹ ನಾಯಕ್

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ ಶಾಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ತಂಡದಿಂದ ಕಮ್ಮಟ – ಬೀದಿ ನಾಟಕ ಪ್ರದರ್ಶನ

Suddi Udaya

ಧರ್ಮಸ್ಥಳ: ಟಾಟಾ ಸುಮೋ ಹಾಗೂ ಸ್ಕೂಟಿ ನಡುವೆ ರಸ್ತೆ ಅಪಘಾತ: ಸ್ಕೂಟಿ ಸವಾರ ಗಂಭೀರ ಗಾಯ

Suddi Udaya
error: Content is protected !!