March 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸಹಾಯಕ ಇಂಜಿನಿಯರ್ ಗಂಗಾಧರ ಬಳಂಜರವರಿಗೆ ಸೇವಾ ನಿವೃತ್ತಿ

ಬೆಳ್ತಂಗಡಿ: ಸುದೀರ್ಘ 36 ವರ್ಷಗಳ ಕಾಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸಹಾಯಕ ಇಂಜಿನಿಯರ್ ಆಗಿ ಸೇವೆ ಸಲ್ಲಿಸಿದ ಗಂಗಾಧರ ಬಳಂಜರವರು ಸೇವೆಯಿಂದ ಫೆ.28 ರಂದು ನಿವೃತ್ತಿ ಹೊಂದಿದ್ದಾರೆ.1989 ರಲ್ಲಿ ಗಂಗಾಧರ ಅವರು ಕರ್ತವ್ಯಕ್ಕೆ ಹಾಜರಾಗಿ ಪ್ರಾರಂಭದಲ್ಲಿ ಮಂಗಳೂರು ವಿಭಾಗಕ್ಕೆ ನಿಯೋಜನೆಗೊಂಡರು.

ನಂತರ ಹಾಸನ ವಿಭಾಗ, ಮೈಸೂರು ನಗರ ಸಾರಿಗೆ ವಿಭಾಗ ಮಂಗಳೂರು ವಿಭಾಗದಲ್ಲಿ ಸೇವೆ ಸಲ್ಲಿಸಿ ಕಳೆದ ಏಳು ತಿಂಗಳ ಹಿಂದೆ ಭಡ್ತಿ ಗೊಂಡು ಪುತ್ತೂರು ವಿಭಾಗಕ್ಕೆ ನಿಯೋಜನೆಗೊಂಡಿರುತ್ತಾರೆ.ಮೈಸೂರು ನಗರದಲ್ಲಿ ಗ್ರಾಮಾಂತರ ಬಸ್ ನಿಲ್ದಾಣ,ಕುವೆಂಪುನಗರ ಬಸ್ ನಿಲ್ದಾಣ ಮತ್ತು ನಗರ ಸಾರಿಗೆ ಬಸ್ ನಿಲ್ದಾಣಗಳು ಇವರ ಮೇಲ್ವಿಚಾರಣೆಯಲ್ಲಿ ನಿರ್ಮಾಣವಾಗಿರುತದೆ.

ಹಾಸನದಲ್ಲಿ ಹೈಟೆಕ್ ನಗರ ಸಾರಿಗೆ ಬಸ್ ನಿಲ್ದಾಣ, ಸುಬ್ರಮಣ್ಯ, ಸುಳ್ಯ, ವಿಟ್ಲ, ಉಡುಪಿ ಹಾಗೂ ಬೈಂದೂರುನಲ್ಲಿ ಇವರ ಮಲ್ವಿಚಾರಣೆಯಲ್ಲಿ ಬಸ್ ನಿಲ್ದಾಣಗಳು ನಿರ್ಮಾಣವಾಗಿರುತದೆ. ಇವರು ಬಳಂಜ ಗ್ರಾಮದ ಪರಾರಿ ನಿವಾಸಿಯಾಗಿದ್ದು,ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಸದಸ್ಯ. ಪ್ರಸ್ತುತ ಮಂಗಳೂರಿನಲ್ಲಿ ಪತ್ನಿ ವಿಜಯಲಕ್ಷ್ಮಿ, ಪುತ್ರ ಚಿರಂತ್ ರವರೊಂದಿಗೆ ವಾಸವಾಗಿದ್ದಾರೆ.

Related posts

ಶಾಸಕರು ತಮ್ಮ ಅಪ್ತರ ಮೂಲಕ ಅಕ್ರಮ ಮರ ಸಾಗಾಟ, ಅಕ್ರಮ ಮರಳುಗಾರಿಕೆಯಲ್ಲಿ ತೊಡಗಿ ಚುಣಾವಣೆಗೆ ಹಣ ಖರ್ಚು ಮಾಡಿದ್ದಾರೆ: ಮನೋಹರ ಕುಮಾರ್ ಆರೋಪ ; ಬ್ಲಾಕ್ ಕಾಂಗ್ರೆಸ್ ನಿಂದ ಪತ್ರಿಕಾಗೋಷ್ಠಿ

Suddi Udaya

ರಾಷ್ಟ್ರಮಟ್ಟದ ಇಂಡಿಯನ್ ಸೈನ್ಸ್ ಅಂಡ್ ಇಂಜಿನಿಯರಿಂಗ್ ಫೇರ್ (INSEF): ಉಜಿರೆ ಎಸ್.ಡಿ.ಎಮ್ ಶಾಲೆ, (ರಾಜ್ಯ ಪಠ್ಯಕ್ರಮ)ಯ ವಿದ್ಯಾರ್ಥಿಗಳಾದ ಅಧಿಶ್ ಬಿ.ಸಿ ಮತ್ತು ಆಲಾಪ್ ಎಂ ವಿಜ್ಞಾನದ ಸಂಶೋಧನೆ ಮಂಡಣೆ – ಗೌರವಾನ್ವಿತ ಪುರಸ್ಕಾರ

Suddi Udaya

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯಿಂದ ದ್ವಿತೀಯ ಸೋಪಾನ, ಗರಿ, ಚರಣ ಪರೀಕ್ಷೆ

Suddi Udaya

ಭಾರೀ ಮಳೆಗೆ : ಕೊಕ್ಕಡ ಎಲ್ಯಣ್ಣ ಗೌಡರವರ ಬಾವಿ ಕುಸಿತ: ಅಪಾರ ನಷ್ಟ

Suddi Udaya

ಕೊಯ್ಯೂರು ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಸುನ್ನೀ ಮ್ಯಾನೇಜ್ ಮೆಂಟ್ ಅಸೋಶಿಯೇಷನ್ ನ ಬೆಳ್ತಂಗಡಿ ರೀಜಿನಲ್ ಇದರ ವಾರ್ಷಿಕ ಕೌನ್ಸಿಲ್

Suddi Udaya
error: Content is protected !!