25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸಹಾಯಕ ಇಂಜಿನಿಯರ್ ಗಂಗಾಧರ ಬಳಂಜರವರಿಗೆ ಸೇವಾ ನಿವೃತ್ತಿ

ಬೆಳ್ತಂಗಡಿ: ಸುದೀರ್ಘ 36 ವರ್ಷಗಳ ಕಾಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸಹಾಯಕ ಇಂಜಿನಿಯರ್ ಆಗಿ ಸೇವೆ ಸಲ್ಲಿಸಿದ ಗಂಗಾಧರ ಬಳಂಜರವರು ಸೇವೆಯಿಂದ ಫೆ.28 ರಂದು ನಿವೃತ್ತಿ ಹೊಂದಿದ್ದಾರೆ.1989 ರಲ್ಲಿ ಗಂಗಾಧರ ಅವರು ಕರ್ತವ್ಯಕ್ಕೆ ಹಾಜರಾಗಿ ಪ್ರಾರಂಭದಲ್ಲಿ ಮಂಗಳೂರು ವಿಭಾಗಕ್ಕೆ ನಿಯೋಜನೆಗೊಂಡರು.

ನಂತರ ಹಾಸನ ವಿಭಾಗ, ಮೈಸೂರು ನಗರ ಸಾರಿಗೆ ವಿಭಾಗ ಮಂಗಳೂರು ವಿಭಾಗದಲ್ಲಿ ಸೇವೆ ಸಲ್ಲಿಸಿ ಕಳೆದ ಏಳು ತಿಂಗಳ ಹಿಂದೆ ಭಡ್ತಿ ಗೊಂಡು ಪುತ್ತೂರು ವಿಭಾಗಕ್ಕೆ ನಿಯೋಜನೆಗೊಂಡಿರುತ್ತಾರೆ.ಮೈಸೂರು ನಗರದಲ್ಲಿ ಗ್ರಾಮಾಂತರ ಬಸ್ ನಿಲ್ದಾಣ,ಕುವೆಂಪುನಗರ ಬಸ್ ನಿಲ್ದಾಣ ಮತ್ತು ನಗರ ಸಾರಿಗೆ ಬಸ್ ನಿಲ್ದಾಣಗಳು ಇವರ ಮೇಲ್ವಿಚಾರಣೆಯಲ್ಲಿ ನಿರ್ಮಾಣವಾಗಿರುತದೆ.

ಹಾಸನದಲ್ಲಿ ಹೈಟೆಕ್ ನಗರ ಸಾರಿಗೆ ಬಸ್ ನಿಲ್ದಾಣ, ಸುಬ್ರಮಣ್ಯ, ಸುಳ್ಯ, ವಿಟ್ಲ, ಉಡುಪಿ ಹಾಗೂ ಬೈಂದೂರುನಲ್ಲಿ ಇವರ ಮಲ್ವಿಚಾರಣೆಯಲ್ಲಿ ಬಸ್ ನಿಲ್ದಾಣಗಳು ನಿರ್ಮಾಣವಾಗಿರುತದೆ. ಇವರು ಬಳಂಜ ಗ್ರಾಮದ ಪರಾರಿ ನಿವಾಸಿಯಾಗಿದ್ದು,ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಸದಸ್ಯ. ಪ್ರಸ್ತುತ ಮಂಗಳೂರಿನಲ್ಲಿ ಪತ್ನಿ ವಿಜಯಲಕ್ಷ್ಮಿ, ಪುತ್ರ ಚಿರಂತ್ ರವರೊಂದಿಗೆ ವಾಸವಾಗಿದ್ದಾರೆ.

Related posts

ಅನಾರೋಗ್ಯದಿಂದ ಬಳಲುತ್ತಿದ್ದ ಮೂರು ವರ್ಷದ ಹೆಣ್ಣು ಮಗು ಸಾವು

Suddi Udaya

ಕನ್ಯಾಡಿಯಲ್ಲಿ ಜನಾರ್ದನ ರೆಸಿಡೆನ್ಸಿ ಉದ್ಘಾಟನೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಅಶಕ್ತ ಕುಟುಂಬಗಳಿಗೆ ರೂ.46 ಸಾವಿರ ಆರ್ಥಿಕ ನರೆವು

Suddi Udaya

ಪುಂಜಾಲಕಟ್ಟೆ ಸ.ಪ್ರ.ದ.‌ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ನ ಏಳು ವಿದ್ಯಾರ್ಥಿಗಳಿಗೆ ನಿಪುಣ್ ಪ್ರಶಸ್ತಿ: ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ರವರಿಂದ ಪ್ರಶಸ್ತಿ ಪ್ರದಾನ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿ ವಿಷ್ಣುಪ್ರಕಾಶ್ ಅಧಿಕಾರ ಸ್ವೀಕಾರ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿಂದಿ ದಿವಸ ಆಚರಣೆ

Suddi Udaya
error: Content is protected !!