July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸಹಾಯಕ ಇಂಜಿನಿಯರ್ ಗಂಗಾಧರ ಬಳಂಜರವರಿಗೆ ಸೇವಾ ನಿವೃತ್ತಿ

ಬೆಳ್ತಂಗಡಿ: ಸುದೀರ್ಘ 36 ವರ್ಷಗಳ ಕಾಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸಹಾಯಕ ಇಂಜಿನಿಯರ್ ಆಗಿ ಸೇವೆ ಸಲ್ಲಿಸಿದ ಗಂಗಾಧರ ಬಳಂಜರವರು ಸೇವೆಯಿಂದ ಫೆ.28 ರಂದು ನಿವೃತ್ತಿ ಹೊಂದಿದ್ದಾರೆ.1989 ರಲ್ಲಿ ಗಂಗಾಧರ ಅವರು ಕರ್ತವ್ಯಕ್ಕೆ ಹಾಜರಾಗಿ ಪ್ರಾರಂಭದಲ್ಲಿ ಮಂಗಳೂರು ವಿಭಾಗಕ್ಕೆ ನಿಯೋಜನೆಗೊಂಡರು.

ನಂತರ ಹಾಸನ ವಿಭಾಗ, ಮೈಸೂರು ನಗರ ಸಾರಿಗೆ ವಿಭಾಗ ಮಂಗಳೂರು ವಿಭಾಗದಲ್ಲಿ ಸೇವೆ ಸಲ್ಲಿಸಿ ಕಳೆದ ಏಳು ತಿಂಗಳ ಹಿಂದೆ ಭಡ್ತಿ ಗೊಂಡು ಪುತ್ತೂರು ವಿಭಾಗಕ್ಕೆ ನಿಯೋಜನೆಗೊಂಡಿರುತ್ತಾರೆ.ಮೈಸೂರು ನಗರದಲ್ಲಿ ಗ್ರಾಮಾಂತರ ಬಸ್ ನಿಲ್ದಾಣ,ಕುವೆಂಪುನಗರ ಬಸ್ ನಿಲ್ದಾಣ ಮತ್ತು ನಗರ ಸಾರಿಗೆ ಬಸ್ ನಿಲ್ದಾಣಗಳು ಇವರ ಮೇಲ್ವಿಚಾರಣೆಯಲ್ಲಿ ನಿರ್ಮಾಣವಾಗಿರುತದೆ.

ಹಾಸನದಲ್ಲಿ ಹೈಟೆಕ್ ನಗರ ಸಾರಿಗೆ ಬಸ್ ನಿಲ್ದಾಣ, ಸುಬ್ರಮಣ್ಯ, ಸುಳ್ಯ, ವಿಟ್ಲ, ಉಡುಪಿ ಹಾಗೂ ಬೈಂದೂರುನಲ್ಲಿ ಇವರ ಮಲ್ವಿಚಾರಣೆಯಲ್ಲಿ ಬಸ್ ನಿಲ್ದಾಣಗಳು ನಿರ್ಮಾಣವಾಗಿರುತದೆ. ಇವರು ಬಳಂಜ ಗ್ರಾಮದ ಪರಾರಿ ನಿವಾಸಿಯಾಗಿದ್ದು,ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಸದಸ್ಯ. ಪ್ರಸ್ತುತ ಮಂಗಳೂರಿನಲ್ಲಿ ಪತ್ನಿ ವಿಜಯಲಕ್ಷ್ಮಿ, ಪುತ್ರ ಚಿರಂತ್ ರವರೊಂದಿಗೆ ವಾಸವಾಗಿದ್ದಾರೆ.

Related posts

ಬೆಳ್ತಂಗಡಿ ಎಸ್ ಡಿ ಎಂ ಕಬ್ ಬುಲ್ ಬುಲ್ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿಗಳಿಂದ ಪ್ರಶಸ್ತಿ ಪ್ರಧಾನ

Suddi Udaya

ಡಿ.ಕೆ.ಆರ್‌.ಡಿ.ಎಸ್ ಮಹಿಳಾ ಸ್ವಸಹಾಯ ಸಂಘಗಳ ರಜತ ಮಹೋತ್ಸವ ಹಾಗೂ ವಿಶ್ವ ಮಹಿಳಾ ದಿನಾಚರಣೆ

Suddi Udaya

“ನಾರಿ ಇನ್ ಪಿಂಕ್ ಸಾರಿ” ಕ್ಯಾನ್ಸರ್ ಜಾಗೃತಿ ಜಾಥಾ ಮತ್ತು ಕ್ಯಾನ್ಸರ್ ಮಾಹಿತಿ ಕಾರ್ಯಕ್ರಮಕ್ಕೆ ಜೆಸಿಐ ಭಾರತದಿಂದ ಬೆಳ್ತಂಗಡಿ ಜೆಸಿಐ ಗೆ ವಿಶೇಷ ಮನ್ನಣೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನದ ಆಚರಣೆ

Suddi Udaya

ನಾಳೆ(ಜು.6): ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ : ಎಸ್.ಎಸ್.ಎಲ್.ಸಿ ಸಾಧಕರಿಗೆ ಸನ್ಮಾನ: ದಿತಿ ಸಾಂತ್ವನ ನಿಧಿ ವಿತರಣೆ

Suddi Udaya

ವೇಣೂರು ಶ್ರೀಭಗವಾನ್ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರವರಿಗೆ ಆಹ್ವಾನ

Suddi Udaya
error: Content is protected !!