April 28, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಛಂದಸ್ಸು: ಪರಿಚಯಾತ್ಮಕ ಕಾರ್ಯಗಾರ

ಪಟ್ಟೂರು: ಕನ್ನಡ ಭಾಷೆಯಲ್ಲಿ ಪದ್ಯಗಳನ್ನು ರಚಿಸುವಾಗ ಅದರದೇ ಆದ ಕೆಲವು ನಿಯಮಗಳಿದ್ದು, ಪದ್ಯದ ರಚನಾ ನಿಯಮಗಳನ್ನು ತಿಳಿಸುವ ಶಾಸ್ತ್ರ ಛಂದಸ್ಸಾಗಿದೆ. ವಿದ್ಯಾರ್ಥಿಗಳು ಪದ್ಯವನ್ನು ರಚಿಸುವಾಗ ಛಂದಸ್ಸಿನಲ್ಲಿ ಬರುವಂತಹ ಪ್ರಾಸಗಳು, ಗಣಗಳು ಸೇರಿದಂತೆ ಇತರ ವಿಚಾರಗಳನ್ನು ಅಳವಡಿಸಿಕೊಂಡಾಗ ಅಂತಹ ಪದ್ಯಗಳು ವಿಶೇಷ ಮಹತ್ವವನ್ನು ಪಡೆಯುತ್ತವೆ ಎಂದು ಪಟ್ಟೂರಿನ ಶ್ರೀರಾಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಚಂದ್ರಶೇಖರ ಶೇಟ್ ನುಡಿದರು.


ಪಟ್ರಮೆ ಗ್ರಾಮದ ಪಟ್ಟೂರಿನ ಶ್ರೀರಾಮ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ಛಂದಸ್ಸು: ಪರಿಚಯಾತ್ಮಕ ವಿವರ ಎಂಬ ಎಂಬ ವಿಷಯದ ಕುರಿತು ನಡೆದ ಕಾರ್ಯಗಾರವನ್ನು ಉದ್ದೇಶಿಸಿ ಮಾತನಾಡಿದರು.
ಭಿನ್ನ ತರಗತಿಯ ವಿದ್ಯಾರ್ಥಿಗಳನ್ನು ಒಂದೆಡೆ ಸೇರಿಸಿ ಕಾರ್ಯಗಾರಗಳ ಮೂಲಕ ಬೋಧಿಸಿದರೆ ಮಕ್ಕಳು ಅದನ್ನು ಬೇಗನೆ ಕಲಿತುಕೊಳ್ಳುತ್ತಾರೆ ಎಂದರು.


ಕನ್ನಡ ವಿಭಾಗದ ಶಿಕ್ಷಕಿ ಸುಪ್ರೀತಾ ಎ. ಮತ್ತು ಸ್ವಾತಿ ಕೆ.ವಿ. ವಿದ್ಯಾರ್ಥಿಗಳಿಗೆ ಛಂದಸ್ಸು, ಮಾತ್ರಗಣ ಹಾಗೂ ಕಂದ ಪದ್ಯಗಳ ಬಗ್ಗೆ ಚಟುವಟಿಕೆ ಮೂಲಕ ಕಾರ್ಯಗಾರವನ್ನು ನಡೆಸಿಕೊಟ್ಟರು.
ಪ್ರಾಥಮಿಕ ಮತ್ತು ಪ್ರೌಢಶಾಲೆಯ ವಿದ್ಯಾರ್ಥಿಗಳು ಕಾರ್ಯಗಾರದಲ್ಲಿ ಪಾಲ್ಗೊಂಡರು.

Related posts

ಉರುವಾಲು: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯಲ್ಲಿ “ಶುಚಿ ಜೀವನ ದರ್ಶನ” ವಿಷಯದ ಕುರಿತು ಚಿಂತನ ಕಾರ್ಯಕ್ರಮ

Suddi Udaya

ಬ್ಲಾಕ್ ಕಾಂಗ್ರೆಸ್ ನಗರ ಸಮಿತಿ ಉಪಾಧ್ಯಕ್ಷರಾಗಿ ಲೋಕೇಶ್ ಗೌಡ

Suddi Udaya

ಎಕ್ಸೆಲ್ ಪಿಯು ಕಾಲೇಜಿನಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯ ಜಯಂತಿ ಆಚರಣೆ ಹಾಗೂ ಎಕ್ಸೆಲ್ ಸ್ವಚ್ಛತಾ ಅಭಿಯಾನ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ಮಾನವಿಕ ಸಂಘ ಹಾಗೂ ಐಕ್ಯುಎಸಿ ಆಶ್ರಯದಲ್ಲಿ ‘ವಿಶ್ರುತಿ 2k24’ ಹಬ್ಬ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆಲಂಗಾಣ ರಾಜ್ಯದ ಸಾರಿಗೆ ಸಚಿವ ಪೊಣ್ಣಂ ಪ್ರಭಾಕರ್ ಭೇಟಿ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಓಡಿಲ್ನಾಳ ಮತ್ತು ಕುವೆಟ್ಟು ಗ್ರಾಮ ಸಮಿತಿಯ ತ್ರೈಮಾಸಿಕ ಸಭೆ ಹಾಗೂ ವನಮಹೋತ್ಸವ

Suddi Udaya
error: Content is protected !!