25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಛಂದಸ್ಸು: ಪರಿಚಯಾತ್ಮಕ ಕಾರ್ಯಗಾರ

ಪಟ್ಟೂರು: ಕನ್ನಡ ಭಾಷೆಯಲ್ಲಿ ಪದ್ಯಗಳನ್ನು ರಚಿಸುವಾಗ ಅದರದೇ ಆದ ಕೆಲವು ನಿಯಮಗಳಿದ್ದು, ಪದ್ಯದ ರಚನಾ ನಿಯಮಗಳನ್ನು ತಿಳಿಸುವ ಶಾಸ್ತ್ರ ಛಂದಸ್ಸಾಗಿದೆ. ವಿದ್ಯಾರ್ಥಿಗಳು ಪದ್ಯವನ್ನು ರಚಿಸುವಾಗ ಛಂದಸ್ಸಿನಲ್ಲಿ ಬರುವಂತಹ ಪ್ರಾಸಗಳು, ಗಣಗಳು ಸೇರಿದಂತೆ ಇತರ ವಿಚಾರಗಳನ್ನು ಅಳವಡಿಸಿಕೊಂಡಾಗ ಅಂತಹ ಪದ್ಯಗಳು ವಿಶೇಷ ಮಹತ್ವವನ್ನು ಪಡೆಯುತ್ತವೆ ಎಂದು ಪಟ್ಟೂರಿನ ಶ್ರೀರಾಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಚಂದ್ರಶೇಖರ ಶೇಟ್ ನುಡಿದರು.


ಪಟ್ರಮೆ ಗ್ರಾಮದ ಪಟ್ಟೂರಿನ ಶ್ರೀರಾಮ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ಛಂದಸ್ಸು: ಪರಿಚಯಾತ್ಮಕ ವಿವರ ಎಂಬ ಎಂಬ ವಿಷಯದ ಕುರಿತು ನಡೆದ ಕಾರ್ಯಗಾರವನ್ನು ಉದ್ದೇಶಿಸಿ ಮಾತನಾಡಿದರು.
ಭಿನ್ನ ತರಗತಿಯ ವಿದ್ಯಾರ್ಥಿಗಳನ್ನು ಒಂದೆಡೆ ಸೇರಿಸಿ ಕಾರ್ಯಗಾರಗಳ ಮೂಲಕ ಬೋಧಿಸಿದರೆ ಮಕ್ಕಳು ಅದನ್ನು ಬೇಗನೆ ಕಲಿತುಕೊಳ್ಳುತ್ತಾರೆ ಎಂದರು.


ಕನ್ನಡ ವಿಭಾಗದ ಶಿಕ್ಷಕಿ ಸುಪ್ರೀತಾ ಎ. ಮತ್ತು ಸ್ವಾತಿ ಕೆ.ವಿ. ವಿದ್ಯಾರ್ಥಿಗಳಿಗೆ ಛಂದಸ್ಸು, ಮಾತ್ರಗಣ ಹಾಗೂ ಕಂದ ಪದ್ಯಗಳ ಬಗ್ಗೆ ಚಟುವಟಿಕೆ ಮೂಲಕ ಕಾರ್ಯಗಾರವನ್ನು ನಡೆಸಿಕೊಟ್ಟರು.
ಪ್ರಾಥಮಿಕ ಮತ್ತು ಪ್ರೌಢಶಾಲೆಯ ವಿದ್ಯಾರ್ಥಿಗಳು ಕಾರ್ಯಗಾರದಲ್ಲಿ ಪಾಲ್ಗೊಂಡರು.

Related posts

ಇಂದಬೆಟ್ಟು: ಗೋಮಾಂಸ ಮಾಡುತ್ತಿದ್ದ ಶೆಡ್ ಮೇಲೆ ಪೊಲೀಸ್ ದಾಳಿ: ಇಬ್ಬರು ಆರೋಪಿಗಳ ಬಂಧನ

Suddi Udaya

ನಿಡ್ಲೆ: ಬರೆಂಗಾಯದಲ್ಲಿ ವನದುರ್ಗಾರಾಧನೆ, ವರ್ಷಾವಧಿ ನೇಮೋತ್ಸವ

Suddi Udaya

ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ ನೋಂದಣಿ ಕಛೇರಿ ಉದ್ಘಾಟನೆ

Suddi Udaya

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ತೆನೆ ಹಬ್ಬ

Suddi Udaya

ರೆಖ್ಯ : ಶೌರ್ಯ ವಿಪತ್ತು ಸ್ವಯಂ ಸೇವಕ ತಂಡದಿಂದ ನೆಲ್ಯಡ್ಕ ಶಾಲೆಯಲ್ಲಿ ಕೈತೋಟ ನಿರ್ಮಾಣ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ

Suddi Udaya
error: Content is protected !!