July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಛಂದಸ್ಸು: ಪರಿಚಯಾತ್ಮಕ ಕಾರ್ಯಗಾರ

ಪಟ್ಟೂರು: ಕನ್ನಡ ಭಾಷೆಯಲ್ಲಿ ಪದ್ಯಗಳನ್ನು ರಚಿಸುವಾಗ ಅದರದೇ ಆದ ಕೆಲವು ನಿಯಮಗಳಿದ್ದು, ಪದ್ಯದ ರಚನಾ ನಿಯಮಗಳನ್ನು ತಿಳಿಸುವ ಶಾಸ್ತ್ರ ಛಂದಸ್ಸಾಗಿದೆ. ವಿದ್ಯಾರ್ಥಿಗಳು ಪದ್ಯವನ್ನು ರಚಿಸುವಾಗ ಛಂದಸ್ಸಿನಲ್ಲಿ ಬರುವಂತಹ ಪ್ರಾಸಗಳು, ಗಣಗಳು ಸೇರಿದಂತೆ ಇತರ ವಿಚಾರಗಳನ್ನು ಅಳವಡಿಸಿಕೊಂಡಾಗ ಅಂತಹ ಪದ್ಯಗಳು ವಿಶೇಷ ಮಹತ್ವವನ್ನು ಪಡೆಯುತ್ತವೆ ಎಂದು ಪಟ್ಟೂರಿನ ಶ್ರೀರಾಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಚಂದ್ರಶೇಖರ ಶೇಟ್ ನುಡಿದರು.


ಪಟ್ರಮೆ ಗ್ರಾಮದ ಪಟ್ಟೂರಿನ ಶ್ರೀರಾಮ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ಛಂದಸ್ಸು: ಪರಿಚಯಾತ್ಮಕ ವಿವರ ಎಂಬ ಎಂಬ ವಿಷಯದ ಕುರಿತು ನಡೆದ ಕಾರ್ಯಗಾರವನ್ನು ಉದ್ದೇಶಿಸಿ ಮಾತನಾಡಿದರು.
ಭಿನ್ನ ತರಗತಿಯ ವಿದ್ಯಾರ್ಥಿಗಳನ್ನು ಒಂದೆಡೆ ಸೇರಿಸಿ ಕಾರ್ಯಗಾರಗಳ ಮೂಲಕ ಬೋಧಿಸಿದರೆ ಮಕ್ಕಳು ಅದನ್ನು ಬೇಗನೆ ಕಲಿತುಕೊಳ್ಳುತ್ತಾರೆ ಎಂದರು.


ಕನ್ನಡ ವಿಭಾಗದ ಶಿಕ್ಷಕಿ ಸುಪ್ರೀತಾ ಎ. ಮತ್ತು ಸ್ವಾತಿ ಕೆ.ವಿ. ವಿದ್ಯಾರ್ಥಿಗಳಿಗೆ ಛಂದಸ್ಸು, ಮಾತ್ರಗಣ ಹಾಗೂ ಕಂದ ಪದ್ಯಗಳ ಬಗ್ಗೆ ಚಟುವಟಿಕೆ ಮೂಲಕ ಕಾರ್ಯಗಾರವನ್ನು ನಡೆಸಿಕೊಟ್ಟರು.
ಪ್ರಾಥಮಿಕ ಮತ್ತು ಪ್ರೌಢಶಾಲೆಯ ವಿದ್ಯಾರ್ಥಿಗಳು ಕಾರ್ಯಗಾರದಲ್ಲಿ ಪಾಲ್ಗೊಂಡರು.

Related posts

ಲಾಯಿಲ: ಕನ್ನಾಜೆ ಅಂಗನವಾಡಿ ಕೇಂದ್ರದಲ್ಲಿ ಹಣ್ಣಿನ ಗಿಡಗಳ ನಾಟಿ ಹಾಗೂ ಶಾಲಾ ಕೈತೋಟ ರಚನೆ

Suddi Udaya

ಉಜಿರೆ: ಮಿತ್ರ ಯುವಕ ಮಂಡಲದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕೊಕ್ಕಡ ಗ್ರಾ.ಪಂ.ನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಹಿಂತೆಗೆತ: ಶಿಸ್ತು ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ ತಾ.ಪಂ. ವ್ಯವಸ್ಥಾಪಕ ಪ್ರಶಾಂತ್

Suddi Udaya

ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಬೆಳ್ತಂಗಡಿ ಮಂಡಲ ಬಿಜೆಪಿ ಯುವ ಮೋರ್ಚಾ ವತಿಯಿಂದ ಗುರುವಾಯನಕೆರೆ ಹುತಾತ್ಮ ವೀರ ಯೋಧ ಏಕನಾಥ್ ಶೆಟ್ಟಿಯವರ ಪುತ್ಥಳಿಗೆ ಗೌರವ ನಮನ

Suddi Udaya

ಬೆಳ್ತಂಗಡಿ ಎಸ್‌.ಐ.ಟಿ ಕಚೇರಿಗೆ ಹಾಜರಾದ ಜಯಂತ್.ಟಿ

Suddi Udaya

ಧರ್ಮಸ್ಥಳ: ಡಿ ಹರ್ಷೇಂದ್ರ ಕುಮಾರ್ ರವರಿಗೆ ಹುಟ್ಟುಹಬ್ಬದ ಸಂಭ್ರಮ,ಶಾಂತಿವನ ಟ್ರಸ್ಟ್ ನಿಂದ ಗೌರವ

Suddi Udaya
error: Content is protected !!