24.8 C
ಪುತ್ತೂರು, ಬೆಳ್ತಂಗಡಿ
April 30, 2025
Uncategorized

ಪ್ರೇರಣಾ ಹೆಗ್ಗಡೆ ವಾಹಿನಿ ಅಸ್ತಿತ್ವಕ್ಕೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲಿ ತನ್ನದೇ ಆದ ವಿಶಿಷ್ಟ ಕೊಡುಗೆ ನೀಡಿದ ಇಂದಿಗೂ ಸಾಮಾಜಿಕ ಸಾಂಸ್ಕೃತಿಕ ಮತ್ತು ಧಾರ್ಮಿಕ ಕ್ಷೇತ್ರಗಳಲ್ಲಿ ಕೊಡುಗೆ ಸಲ್ಲಿಸುತ್ತಿರುವ ಹೆಗ್ಗಡೆ ಸಮಾಜದ ಜನತೆಗಾಗಿ ಪ್ರಪ್ರಥಮ ಬಾರಿಗೆ ಮಾಸಿಕ ಪತ್ರಿಕೆಯೊಂದು ಪ್ರಾರಂಭವಾಗಿ ಉತ್ತಮ ಪ್ರತಿಕ್ರೀಯೆ ಪಡೆಯುತ್ತಿದೆ.

ಹೆಗ್ಗಡೆ ವೆಲ್ಫೇರ್ ಫೋರಮ್ ಮತ್ತು ಅಶ್ವಥ್ ಹೆಗ್ಡೆ ಫೌಂಡೇಶನ್ ಬಳಂಜ ಮೂಲಕ ಮೂಡಿಬಂದಿರುವ ಪ್ರಸ್ತುತ ಮಾಸಿಕದಲ್ಲಿ ಕಲಾಜಗತ್ತು ಚಿಣ್ಣರ ಬಿಂಬದ ರೂವಾರಿ ಡಾ ಸುರೇಂದ್ರ ಕುಮಾರ್ ಹೆಗ್ಡೆ , ಆಳ್ವಾಸ್ ಸಾಂಸ್ಕೃತಿಕ ಪ್ರತಿಷ್ಠಾನದ ಉಪನ್ಯಾಸಕಿ ಡಾ. ಸುಲತಾ ಹೆಗ್ಡೆ, ಕಾರ್ಕಳ SVT ವಿದ್ಯಾಸಂಸ್ಥೆಯ ನಿಕಟಪೂರ್ವ ಪ್ರಾಂಶುಪಾಲೆ ಶ್ರೀಮತಿ ಮಿತ್ರಪ್ರಭಾ ಹೆಗ್ಡೆ, ಹಿರಿಯಡ್ಕ ಮೇಳದ ಹಿರಿಯ ಪ್ರಧಾನ ಭಾಗವತ ಸುಜಯ್ ಹೆಗ್ಡೆ ಕುತ್ಲೂರು, ಮುಂಬೈ ಕನ್ನಡ ಸಂಘಟನೆಯ ರವಿ ಹೆಗ್ಡೆ ಹೆರ್ಮುಂಡೆ, ಕನ್ನಡ ಚಲನಚಿತ್ರ ನಿರ್ದೇಶಕ ಕಿಶೋರ್ ಮೂಡುಬಿದಿರೆ ಸೇರಿದಂತೆ ಅನೇಕ ಖ್ಯಾತನಾಮರ ಲೇಖನದೊಂದಿಗೆ ಆರಂಭಗೊಂಡ ಪ್ರೇರಣಾ ಹೆಗ್ಗಡೆ ವಾಹಿನಿ ಪ್ರಾಯೋಗಿಕ ಸಂಚಿಕೆಯ ಯಶಸ್ಸಿನೊಂದಿಗೆ ಮಾರ್ಚ್ 30ನೇ ತಾರೀಖಿಗೆ ವಿದ್ಯುಕ್ತವಾಗಿ ಚಾಲನೆಗೊಳ್ಳಲಿದೆ.

ಹೆಗ್ಗಡೆ ಸಮಾಜದ ಯುವ ತಂಡದಿಂದ ಪ್ರಾರಂಭಗೊಂಡ ಪ್ರೇರಣಾ ಹೆಗ್ಗಡೆ ವಾಹಿನಿ heggadevahini.com ವೆಬ್ ಸೈಟ್ ಮೂಲಕವೂ ಲಭ್ಯವಿದ್ದು ಮಾರ್ಚ್ 30ರಂದು ಮೊಬೈಲ್ ಅಪ್ಲಿಕೇಶನ್ ಉದ್ಘಾಟನೆಗೊಳ್ಳಲಿದೆ.

Related posts

ಉಜಿರೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಿಂದ ವಿವಿಧ ಕಡೆ ಧಿಡೀರ್ ಭೇಟಿ

Suddi Udaya

ಮಡಂತ್ಯಾರು ವಲಯದ ಮಚ್ಚಿನ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಮದ್ದಡ್ಕದಲ್ಲಿ ಕರಿಂಜೆ ಗ್ರಾಮ ಸಮೃದ್ಧಿ ಸೌಹಾರ್ದ ಸಹಕಾರಿ ಸಂಘದ ಪ್ರಥಮ ಶಾಖೆ ಉದ್ಘಾಟನೆ

Suddi Udaya

ಯಕ್ಷಗಾನ ಕ್ಷೇತ್ರದಲ್ಲಿ ವಿಶೇಷ ಸಾಧನೆ.: ಶಾಂತಿವನ ಟ್ರಸ್ಟ್‌ನ ಕಾರ್ಯದರ್ಶಿ ಸೀತಾರಾಮ ತೋಳ್ಪಾಡಿತ್ತಾಯರಿಗೆ. ರಾಜ್ಯ ರಾಜೋತ್ಸವ ಪ್ರಶಸ್ತಿ

Suddi Udaya

ಕ್ವಿಜ್ ಸ್ಪರ್ಧೆ: ನಾರಾವಿಯ ಸಂತ ಅಂತೋನಿ ಪದವಿ ಕಾಲೇಜಿಗೆ ಪ್ರಶಸ್ತಿ

Suddi Udaya
error: Content is protected !!