25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶುಭಾರಂಭ

ಬೆಳ್ತಂಗಡಿ: ಎಸ್.ಎನ್. ಕಂಪ್ಯೂಟರ್ಸ್ ಮತ್ತು ಸೈಬರ್ ಕೇಂದ್ರ ಸ್ಥಳಾಂತರಗೊಂಡು ಪುನರಾರಂಭ

ಬೆಳ್ತಂಗಡಿ: ಬೆಳ್ತಂಗಡಿಯ ಬಸ್ ಸ್ಟ್ಯಾಂಡ್ ಎದುರಿನ ನೂತನ್ ಡ್ರೆಸ್ಸಸ್ ನ ಮೊದಲ ಮಹಡಿಯಲ್ಲಿ ದಯಾನಂದ ನಾಯಕ್ ಮಾಲಕತ್ವದ ಎಸ್. ಎನ್. ಕಂಪ್ಯೂಟರ್ಸ್ ಮತ್ತು ಸೈಬರ್ ಕೇಂದ್ರವು ಮಾ.6 ರಂದು ಪುನರಾರಂಭಗೊಂಡಿದೆ.

ಪುರೋಹಿತರು ಹಾಗೂ ಜ್ಯೋತಿಷಿಗಳಾದ ಪ್ರಭಾಕರ ಭಟ್ ಇಡ್ಯಾ ದೀಪ ಪ್ರಜ್ವಲಿಸಿ ಆಶೀರ್ವಚನ ನೀಡಿ ಕಳೆದ 27 ವರ್ಷಗಳಿಂದ ಕಾರ್ಯಾಚರಿಸುತ್ತಿದ್ದ ಈ ಸಂಸ್ಥೆಯು ಇದೀಗ ಸ್ಥಳಾಂತರಗೊಂಡು ಮತ್ತೊಮ್ಮೆ ಯಶಸ್ಸಿನ ದಾರಿಯಲ್ಲಿ ಸಾಗಲಿ ಎಂದು ಶುಭಾಶೀರ್ವಾದ ಮಾಡಿದರು.

ಮುಖ್ಯ ಅತಿಥಿ ಪ್ರೊಫೆಸರ್ ಮಧೂರು ಮೋಹನ ಕಲ್ಲೂರಾಯರು ಶುಭವನ್ನು ಹಾರೈಸುತ್ತಾ ಸಹೃದಯತೆ, ಪ್ರೀತಿ, ಸೇವೆ ಮತ್ತು ವಿಶ್ವಾಸ ಬೆಲೆ ಕಟ್ಟಲಾಗದ ಸಂಗತಿಗಳು, ಈ ನಾಲ್ಕು ಸಂಗತಿಗಳನ್ನು ಮುಂದಿಟ್ಟುಕೊಂಡು ಮಾಡಿದ ಸೇವೆ ಜನತಾ ಸೇವೆಯಲ್ಲಿ ಜನಾರ್ಧನನನ್ನು ಕಾಣುವುದು ಸತ್ಯವಾದ ಸಂಗತಿಯಾಗಿದೆ. ಎಸ್ ಎನ್ ಕಂಪ್ಯೂಟರ್ಸ್ ಎಲ್ಲರ ಸೇವೆಗೆ ಅನನ್ಯವಾಗಿ ಲಭ್ಯವಾಗಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಶಾರದಾ ದಯಾನಂದ್ ನಾಯಕ್, ನಿಧೀಶ್ ನಾಯಕ್, ಸದಾನಂದ ಪ್ರಭು ಹೀರ್ತೊಟ್ಟು, ಸುಧಾಕರ ಪ್ರಭು ಪರ್ಮರೋಡಿ ದಂಪತಿಗಳು, ಸುಧಾಕರ ಪ್ರಭು ಇಡ್ಯಾ, ಕಟ್ಟಡದ ಮಾಲೀಕರಾದ ಶ್ರೀಮತಿ ಸೆಲಿನ್ ನೋರೋನ್ಹ , ಶ್ರೀಮತಿ ನ್ಯಾನ್ಸಿ ಡಿ’ಸೋಜ, ಶ್ರೀಮತಿ ಭಾರತಿ ಜೈನ್, ಅಂಬ್ರೊಸ್ ಡಿ’ಸೋಜ ದಂಪತಿಗಳು, ಬಾಲಕೃಷ್ಣ ಶೆನಾಯ್, ಯಶವಂತ ನಾಯಕ್ ಮುಂತಾದ ಗಣ್ಯರು ಉಪಸ್ಥಿತರಿದ್ದರು.

ಸಂಸ್ಥೆಯಲ್ಲಿ ಕಂಪ್ಯೂಟರ್ ಸೇಲ್ಸ್ ಮತ್ತು ಸರ್ವಿಸ್, ಆಧಾರ್ ಕಾರ್ಡ್, ಪಾನ್ ಕಾರ್ಡ್, ರೇಷನ್ ಕಾರ್ಡ್, ಪಾಸ್ ಪೋರ್ಟ್, ವೋಟರ್ ಐಡಿ, RTC, XEROX, ಕಲರ್ XEROX ಮತ್ತು ಪ್ರಿಂಟ್ ಹಾಗೂ ಎಲ್ಲಾ ತರಹದ ಆನ್ಲೈನ್ ಸೇವೆಗಳು ಲಭ್ಯವಿದೆ ಎಂದು ಮಾಲಕರಾದ ದಯಾನಂದ ನಾಯಕ್ ತಿಳಿಸಿದ್ದಾರೆ.

Related posts

ವಿಶೇಷ ಚೇತನ ಮಕ್ಕಳಿಗೆ ನಲ್ಮೆ, ಸಂಯಮದಿಂದ ವಿಶೇಷ ಭವಿಷ್ಯ ರೂಪಿಸೋಣ: ಡಿ. ವೀರೇಂದ್ರ ಹೆಗ್ಗಡೆ

Suddi Udaya

ಬೆಳ್ತಂಗಡಿ ಗ್ರಾಹಕರ ವಿವಿದೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಮಹಾವೀರ ಅರಿಗ, ಉಪಾಧ್ಯಕ್ಷರಾಗಿ ತುಕಾರಾಮ್ ಬಿ.

Suddi Udaya

ಹತ್ಯಡ್ಕ: ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಮಹೋತ್ಸವ: ಮಹಾಪೂಜೆ, ದರ್ಶನ ಬಲಿ ನಂತರ ಬಟ್ಟಲು ಕಾಣಿಕೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಉಪಾಧ್ಯಕ್ಷರಾಗಿ ಜೋಯಲ್ ಮೆಂಡೋನ್ಸ ಆಯ್ಕೆ

Suddi Udaya

ಜಿಲ್ಲಾಮಟ್ಟದ ಕರಾಟೆ ಪಂದ್ಯಾಟ: ಬೆಳ್ತಂಗಡಿ ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya
error: Content is protected !!