ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶುಭಾರಂಭ

ಬೆಳ್ತಂಗಡಿ: ಎಸ್.ಎನ್. ಕಂಪ್ಯೂಟರ್ಸ್ ಮತ್ತು ಸೈಬರ್ ಕೇಂದ್ರ ಸ್ಥಳಾಂತರಗೊಂಡು ಪುನರಾರಂಭ

ಬೆಳ್ತಂಗಡಿ: ಬೆಳ್ತಂಗಡಿಯ ಬಸ್ ಸ್ಟ್ಯಾಂಡ್ ಎದುರಿನ ನೂತನ್ ಡ್ರೆಸ್ಸಸ್ ನ ಮೊದಲ ಮಹಡಿಯಲ್ಲಿ ದಯಾನಂದ ನಾಯಕ್ ಮಾಲಕತ್ವದ ಎಸ್. ಎನ್. ಕಂಪ್ಯೂಟರ್ಸ್ ಮತ್ತು ಸೈಬರ್ ಕೇಂದ್ರವು ಮಾ.6 ರಂದು ಪುನರಾರಂಭಗೊಂಡಿದೆ.

ಪುರೋಹಿತರು ಹಾಗೂ ಜ್ಯೋತಿಷಿಗಳಾದ ಪ್ರಭಾಕರ ಭಟ್ ಇಡ್ಯಾ ದೀಪ ಪ್ರಜ್ವಲಿಸಿ ಆಶೀರ್ವಚನ ನೀಡಿ ಕಳೆದ 27 ವರ್ಷಗಳಿಂದ ಕಾರ್ಯಾಚರಿಸುತ್ತಿದ್ದ ಈ ಸಂಸ್ಥೆಯು ಇದೀಗ ಸ್ಥಳಾಂತರಗೊಂಡು ಮತ್ತೊಮ್ಮೆ ಯಶಸ್ಸಿನ ದಾರಿಯಲ್ಲಿ ಸಾಗಲಿ ಎಂದು ಶುಭಾಶೀರ್ವಾದ ಮಾಡಿದರು.

ಮುಖ್ಯ ಅತಿಥಿ ಪ್ರೊಫೆಸರ್ ಮಧೂರು ಮೋಹನ ಕಲ್ಲೂರಾಯರು ಶುಭವನ್ನು ಹಾರೈಸುತ್ತಾ ಸಹೃದಯತೆ, ಪ್ರೀತಿ, ಸೇವೆ ಮತ್ತು ವಿಶ್ವಾಸ ಬೆಲೆ ಕಟ್ಟಲಾಗದ ಸಂಗತಿಗಳು, ಈ ನಾಲ್ಕು ಸಂಗತಿಗಳನ್ನು ಮುಂದಿಟ್ಟುಕೊಂಡು ಮಾಡಿದ ಸೇವೆ ಜನತಾ ಸೇವೆಯಲ್ಲಿ ಜನಾರ್ಧನನನ್ನು ಕಾಣುವುದು ಸತ್ಯವಾದ ಸಂಗತಿಯಾಗಿದೆ. ಎಸ್ ಎನ್ ಕಂಪ್ಯೂಟರ್ಸ್ ಎಲ್ಲರ ಸೇವೆಗೆ ಅನನ್ಯವಾಗಿ ಲಭ್ಯವಾಗಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಶಾರದಾ ದಯಾನಂದ್ ನಾಯಕ್, ನಿಧೀಶ್ ನಾಯಕ್, ಸದಾನಂದ ಪ್ರಭು ಹೀರ್ತೊಟ್ಟು, ಸುಧಾಕರ ಪ್ರಭು ಪರ್ಮರೋಡಿ ದಂಪತಿಗಳು, ಸುಧಾಕರ ಪ್ರಭು ಇಡ್ಯಾ, ಕಟ್ಟಡದ ಮಾಲೀಕರಾದ ಶ್ರೀಮತಿ ಸೆಲಿನ್ ನೋರೋನ್ಹ , ಶ್ರೀಮತಿ ನ್ಯಾನ್ಸಿ ಡಿ’ಸೋಜ, ಶ್ರೀಮತಿ ಭಾರತಿ ಜೈನ್, ಅಂಬ್ರೊಸ್ ಡಿ’ಸೋಜ ದಂಪತಿಗಳು, ಬಾಲಕೃಷ್ಣ ಶೆನಾಯ್, ಯಶವಂತ ನಾಯಕ್ ಮುಂತಾದ ಗಣ್ಯರು ಉಪಸ್ಥಿತರಿದ್ದರು.

ಸಂಸ್ಥೆಯಲ್ಲಿ ಕಂಪ್ಯೂಟರ್ ಸೇಲ್ಸ್ ಮತ್ತು ಸರ್ವಿಸ್, ಆಧಾರ್ ಕಾರ್ಡ್, ಪಾನ್ ಕಾರ್ಡ್, ರೇಷನ್ ಕಾರ್ಡ್, ಪಾಸ್ ಪೋರ್ಟ್, ವೋಟರ್ ಐಡಿ, RTC, XEROX, ಕಲರ್ XEROX ಮತ್ತು ಪ್ರಿಂಟ್ ಹಾಗೂ ಎಲ್ಲಾ ತರಹದ ಆನ್ಲೈನ್ ಸೇವೆಗಳು ಲಭ್ಯವಿದೆ ಎಂದು ಮಾಲಕರಾದ ದಯಾನಂದ ನಾಯಕ್ ತಿಳಿಸಿದ್ದಾರೆ.

Related posts

ಹೊಸ್ಮಾರು ಉದ್ಯಮಿ ಪ್ರೇಮ್ ಕುಮಾರ್ ಅನಾರೋಗ್ಯದಿಂದ ನಿಧನ

Suddi Udaya

ಕನ್ಯಾಡಿ ಗ್ರಾಮದ ಪಾಲೆದಡಿ ನಿವಾಸಿ ಜಯಾನಂದ ಪೂಜಾರಿ ನಿಧನ

Suddi Udaya

ಅಳದಂಗಡಿ: ಜೋಪಡಿಯಲ್ಲಿ ವಾಸಿಸುತ್ತಿದ್ದ ಕುಟುಂಬಕ್ಕೆ ಆಸರೆಯಾದ ಅಳದಂಗಡಿ ಗ್ರಾ.ಪಂ ಪ್ರೇಮರವರ ಮನೆ ದುರಸ್ಥಿ, ಮೇಲ್ಛಾವಣಿಗೆ ಶೀಟ್ ಅಳವಡಿಕೆ, ಸುದ್ದಿ ಉದಯ ಪತ್ರಿಕೆಯ ವರದಿಗೆ ಸಾರ್ವಜನಿಕರಿಂದ ಮೆಚ್ಚುಗೆ

Suddi Udaya

ನಡ ಗೌಡರ ಯಾನೆ ಒಕ್ಕಲಿಗರ ಸೇವಾ ಮಹಿಳಾ ಘಟಕ, ಯುವ ವೇದಿಕೆ “ಆಟಿಡೊಂಜಿ ದಿನ” ಹಾಗೂ “ಪ್ರತಿಭಾ ಪುರಸ್ಕಾರ”

Suddi Udaya

ಎಕ್ಸೆಲ್ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ ರಿಂದ ರೋಟರಿ ಕುಟುಂಬದ ಶಿಕ್ಷಕ ಸದಸ್ಯರ ಸನ್ಮಾನ

Suddi Udaya

ತಾಲೂಕು ಶಾಮಿಯಾನ ಮಾಲಕರ ಸಂಘದ ಮಹಾಸಭೆ: ನೂತನ ಸಮಿತಿ ರಚನೆ

Suddi Udaya
error: Content is protected !!