March 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ, ನಿವೃತ್ತ ಡಿಎಫ್ ಓ, ಎನ್.ಪದ್ಮನಾಭ ಮಾಣಿಂಜ ವಿಧಿವಶ

ಬೆಳ್ತಂಗಡಿ: ಕುಕ್ಕಿನಡ್ಡ ಕುಟುಂಬ ಮನೆತನದ ಹಿರಿಯ ತಲೆ, ನಿವೃತ್ತ ಡಿಎಫ್ ಓ, ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್ ಪದ್ಮನಾಭ ಮಾಣಿಂಜ (87) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಾಗಿ ಆಸ್ಪತ್ರೆಯಲ್ಲಿ ಮಾ.6ರಂದು ಬೆಳಿಗ್ಗೆ ವಿಧಿವಶರಾದರು.

ಮಾಜಿ ಶಾಸಕ ಕೆ.ವಸಂತ ಬಂಗೇರರೊಂದಿಗೆ ಉತ್ತಮ ಸಂಬಂಧ ಹೊಂದಿದ ಇವರು, ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ ಸಂಘದ ಸರ್ವತೋಮುಖ ಬೆಳವಣಿಗೆಗೆ ಸಹಕರಿಸಿದ್ದರು. ಬೆಳ್ತಂಗಡಿ ಶ್ರೀ ಗುರುದೇವ ವಿವಿದೋದ್ದೇಶ ಸಹಕಾರಿ ಸಂಘದ ಪ್ರಗತಿಯ ಹಿಂದೆ ಪದ್ಮನಾಭ ಮಾಣಿಂಜರವರ ದೂರದೃಷ್ಟಿ ಚಿಂತನೆ ಮಹತ್ತರವಾದದು.

ಉಜಿರೆ ರಬ್ಬರ್ ಸೊಸೈಟಿಯ ಉಪಾಧ್ಯಕ್ಷ, ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದರು. ಸರಳ, ನೇರ ನಿಷ್ಟುರವಾದಿ ವ್ಯಕ್ತಿತ್ವವನ್ನು ಹೊಂದಿದ್ದ ಇವರು ಪತ್ನಿ ಇಂದಿರಾ, ಪುತ್ರರಾದ ಸೂರಜ್, ಸುಧೀರ್, ಸುಜಿತ್, ಸೊಸೆಯಂದಿರಾದ ಸ್ನೇಹ, ಟೀನಾ, ದಿವ್ಯ ಮತ್ತು ಮೊಮ್ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಪದ್ಮನಾಭ ಮಾಣಿಂಜ ರವರ ಪಾರ್ಥೀವ ಶರೀರದ ಅಂತಿಮ ದರ್ಶನ 12 ಗಂಟೆಯ ತನಕ ಬಲ್ಮಠದ “ಇಂದುಪದ್ಮ” ನಿವಾಸದಲ್ಲಿ ನಡೆಯಲಿದ್ದು, ತದನಂತರ ಪುಂಜಾಲಕಟ್ಟೆ ಮಾಣಿಂಜದ ಸ್ವಗೃಹದಲ್ಲಿ 4 ಗಂಟೆಯ ತನಕ ಅಂತಿಮ ದರ್ಶನ ನಡೆದು ಅಂತಿಮ ವಿಧಿ ವಿಧಾನಗಳು ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ

Related posts

ಬೆಳ್ತಂಗಡಿ ಕ್ಷೇತ್ರದ ವಿವಿಧೆಡೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಮತ ಯಾಚನೆ

Suddi Udaya

ಕಬಡ್ಡಿ ಪಂದ್ಯಾಟ: ತೋಟತ್ತಾಡಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಪೃಥ್ವಿನಿ ಶೆಟ್ಟಿಗೆ ಆಲ್ ರೌಂಡರ್ ಪ್ರಶಸ್ತಿ

Suddi Udaya

ಉಜಿರೆ: ಶಿಕ್ಷಕರ ದಿನಾಚರಣೆಯ ಅಂಗವಾಗಿ ನಡೆದ ಹಲವು ಸ್ಪರ್ಧೆಗಳಲ್ಲಿ ಎಸ್.ಡಿ.ಎಮ್ ಅನುದಾನಿತ ಸೆಕೆಂಡರಿ ಶಾಲೆಗೆ ಪ್ರಶಸ್ತಿ

Suddi Udaya

ಉಜಿರೆ ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಾಳೆಯಿಂದ ಉಚಿತ ಡಯಾಲಿಸಿಸ್ ಸೇವೆ

Suddi Udaya

ಉಜಿರೆ: ಜೋಸೆಫ್ ಮೇಲಟ್ ಹೃದಯಾಘಾತದಿಂದ ನಿಧನ

Suddi Udaya

ಗುರುವಾಯನಕೆರೆ: ಮಳೆಯ ಆರ್ಭಟ, ಚರಂಡಿ ಮುಚ್ಚಿದ ಪರಿಣಾಮ ರಸ್ತೆಯಲ್ಲೆ ಹರಿಯುತ್ತಿದೆ ನೀರು,ಬಂಟರ ಭವನ, ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ನುಗ್ಗಿದ ನೀರು, ಶೀಘ್ರ ದುರಸ್ಥಿಗೆ ಒತ್ತಾಯ

Suddi Udaya
error: Content is protected !!