March 13, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಮಾ.8: ಗುರುವಾಯನಕೆರೆ ಶಶಿಧರ ಶೆಟ್ಟಿಯವರ ನೇತೃತ್ವದಲ್ಲಿ ಭಾರತೀಯರ ಹೃದಯ ಸಾಮ್ರಾಟ್ “ಛತ್ರಪತಿ ಶಿವಾಜಿ” ಪ್ರಥಮ ನಾಟಕ : ನವಶಕ್ತಿ ಕ್ರೀಡಾಂಗಣದಲ್ಲಿ ಪ್ರದರ್ಶನ

ಬೆಳ್ತಂಗಡಿ: ಶಿವದೂತೆ ಗುಳಿಗೆ ಯಶಸ್ವಿ ನಾಟಕದ ನಂತರ, ಹೊಸತನದ ಟ್ರೆಂಡ್ ಆಗಿ ಹೊರಹೊಮ್ಮುತ್ತಿರುವ ವಿಜಯ್ ಕುಮಾರ್ ಕೊಡಿಯಸಲ್ ಬೈಲ್ ಅವರ ವಿನೂತನ ಪರಿಕಲ್ಪನೆಯ ತುಳು ಚಾರಿತ್ರಿಕ ನಾಟಕ “ಛತ್ರಪತಿ ಶಿವಾಜಿ ” ಅಧ್ಬುತ ರಂಗ ವಿನ್ಯಾಸ ಹಾಗೂ ವಸ್ತ್ರ ವಿನ್ಯಾಸದೊಂದಿಗೆ ಸುಪ್ರಸಿದ್ಧ ಉದ್ಯಮಿ ಶಶಿಧರ ಶೆಟ್ಟಿ ಬರೋಡ ನವಶಕ್ತಿ ಇವರ ನೇತೃತ್ವದಲ್ಲಿ ಗುರುವಾಯನಕೆರೆ ನವಶಕ್ತಿ ಕ್ರೀಡಾಂಗಣದಲ್ಲಿ ಮಾ. 8 ಶನಿವಾರ ಸಂಜೆ ಗಂಟೆ 7.30 ರಿಂದ ಪ್ರದರ್ಶನಗೊಳ್ಳಲಿದೆ.

ಭಾಷೆ ಮತ್ತು ಧರ್ಮ ವೈಷಮ್ಯದ ಗಡಿಗಳನ್ನು ಮೀರಿ ರೂಪುಗೊಂಡ ಹೊಸತನದ ಟ್ರೆಂಡ್ ಛತ್ರಪತಿ ಶಿವಾಜಿ ನಾಟಕದ ಪೂರ್ವ ಸಿದ್ದತೆಗಳು ಪೂರ್ಣಗೊಂಡಿದ್ದು ಮೊದಲ ಪ್ರಯೋಗ ಗುರುವಾಯನಕೆರೆ ನವಶಕ್ತಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಶಶಿರಾಜ್ ಕಾವೂರು ಅವರ ಅಧ್ಯಯನಾತ್ಮಕ ಆಧರಿಸಿ ಮರಾಠಿ ವಾತಾವರಣದ ಕಥೆಯನ್ನು ತುಳು ಭಾಷೆಯಲ್ಲಿ ಸಿನಿಮಾ ಶೈಲಿಯ ಡಬ್ಬಿಂಗ್,ಅದ್ಬುತ ರಂಗವಿನ್ಯಾಸದೊಂದಿಗೆ ರೂಪುಗೊಂಡಿದೆ. ಸುಮಾರು ಎರಡೂವರೆ ಗಂಟೆಯ ನಾಟಕವಾಗಿದ್ದು, ೧೩ ದೃಶ್ಯಗಳಲ್ಲಿ ಸಂಯೋಜನೆಗೊಂಡು,18 ಪ್ರಬುದ್ದ ಕಲಾವಿದರು ಕಥೆಗೆ ಜೀವ ತುಂಬಿದ್ದಾರೆ.
ಉದ್ಯಮಿ,ಸಮಾಜ ಸೇವಕ, ಧಾರ್ಮಿಕ ಚಿಂತಕ ಶಶಿಧರ ಶೆಟ್ಟಿಯವರ ಮುಂದಾಳತ್ವದಲ್ಲಿ ಗುರುವಾಯನಕೆರೆಯಲ್ಲಿ ಪ್ರದರ್ಶನಗೊಳ್ಳುತ್ತಿರುವ ಛತ್ರಪತಿ ಶಿವಾಜಿ ನಾಟಕಕ್ಕೆ ಜನ ಸಾಗರ ಹರಿದು ಬರುವ ನಿರೀಕ್ಷೆಯಿದೆ.

ರಾಷ್ಟ್ರಭಕ್ತಿ ಸಾರುವ “ಛತ್ರಪತಿ ಶಿವಾಜಿ” ನಾಟಕ : ಶಶಿಧರ ಶೆಟ್ಟಿ
ಈ ದೇಶವನ್ನು ವಿದೇಶಿಯರ ಕಪಿಮುಷ್ಟಿಯಿಂದ ಬಿಡಿಸಿ,ಹಿಂದುಗಳ ಸ್ವರಾಜ್ಯ ಸ್ಥಾಪನೆಯಾಗಬೇಕೆಂದು ಕನಸು ಕಂಡಿದ್ದ ಹಿಂದೂಸ್ಥಾನದ ಮೊದಲ ರಾಷ್ಟ್ರೀಯವಾದಿ,ಭಾರತೀಯರ ಹೃದಯ ಸಾಮ್ರಾಟ್, ಪರಾಕ್ರಮಿ ಶಿವಾಜಿ ಮಹಾರಾಜ್ ಅವರ ನಾಟಕ ನವಶಕ್ತಿ ಕ್ರೀಡಾಂಗಣದಲ್ಲಿ ಪ್ರದರ್ಶನಗೊಳ್ಳುತ್ತಿರುವುದು ಸಂತಸ ತಂದಿದೆ.ನಾಟಕಕ್ಕೆ ಬೇಕಾದ ಸಿದ್ದತೆಗಳನ್ನು ಈಗಾಗಲೇ ಮಾಡಲಾಗಿದೆ. ಸಾವಿರಾರು ಸಂಖ್ಯೆಯಲ್ಲಿ ಯುವ ಮನಸ್ಸುಗಳು ಸೇರುವ ನೀರಿಕ್ಷೆಯಿದೆ.ಬೆಳ್ತಂಗಡಿಯಲ್ಲಿ ಬೇರೆ ಬೇರೆ ಮಾದರಿಯ ನಾಟಕವನ್ನು ವೀಕ್ಷಣೆ ಮಾಡಿದ್ದೇವೆ. ಶಿವಾಜಿಯ ಪರಾಕ್ರಮ, ರಾಷ್ಟ್ರ ಪ್ರೇಮ, ಮತ್ತು ದೇಶ ಭಕ್ತಿಯನ್ನು ಇಂದಿನ ಯುವ ಸಮಾಜಕ್ಕೆ ತಿಳಿಸುವ ಅನಿವಾರ್ಯತೆಯಿದೆ ಎಂದು ಪ್ರಸಿದ್ದ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ತಿಳಿಸಿದ್ದಾರೆ.

Related posts

ಅ.18 ರಂದು ನಡೆಯಲಿರುವ ರಾಜ್ಯಸಭಾ ಸದಸ್ಯ ಡಾ. ನಾಸಿರ್ ಹುಸೈನ್, ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ಸಲೀಮ್ ಅಹಮ್ಮದ್ ರವರಿಗೆ ಅಭಿನಂದನಾ ಸಮಾರಂಭ ಹಾಗೂ ಅಲ್ಪಸಂಖ್ಯಾತರ ಸಮಾವೇಶ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಹಾಗೂ ಸಚಿವರುಗಳಿಗೆ ಆಹ್ವಾನ

Suddi Udaya

ಶಿಶಿಲ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಹೊಲಿಗೆ ತರಬೇತಿ ಕೇಂದ್ರ ಉದ್ಘಾಟನೆ

Suddi Udaya

ಚಂದ್ರಯಾನ -3 ಯಶಸ್ವಿಗಾಗಿ ಕಳೆಂಜ ಶ್ರೀ ಸದಾಶಿವೇಶ್ವರ ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಕಳೆಂಜ ಗ್ರಾಮದ ಕಾಯ೯ತ್ತಡ್ಕದಲ್ಲಿ ತಾಯಿ ಪುಟ್ಟ ಮಗುವಿನೊಂದಿಗೆ ನಾಪತ್ತೆ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಕೆಟ್ಟು ನಿಂತ ಎರಡು ಕೆ ಎಸ್ ಆರ್ ಟಿ ಸಿ ಬಸ್ಸುಗಳು: ಗಂಟೆಗಟ್ಟಲೇ ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ

Suddi Udaya

ಗುರುವಾಯನಕೆರೆ: ಶ್ರೀ ಭ್ರಾಮರಿ ಕುಣಿತ ಭಜನಾ ತಂಡದ ಎರಡನೇ ವರ್ಷದ ‘ಭಕ್ತಿಹೆಜ್ಜೆ’ ಕಾರ್ಯಕ್ರಮ

Suddi Udaya
error: Content is protected !!