April 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರಕ್ಷಿತ್ ಶಿವರಾಂ ಮನವಿಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳ ಸ್ಪಂದನೆ : ಅರಸಿನಮಕ್ಕಿ ಶಾಲೆಗೆ ಶಿಕ್ಷಕರ ನೇಮಕ

ಬೆಳ್ತಂಗಡಿ:ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅನುದಾನಿತ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ ಏಕೈಕ ಶಿಕ್ಷಕರು ಫೆ.28 ರಂದು ಸೇವಾ ನಿವೃತ್ತಿ ಹೊಂದಿದ್ದು,ಶಾಲೆಯಲ್ಲಿದ್ದ ಓರ್ವ ಶಿಕ್ಷಕರು ಇಲ್ಲದೆ ಶಾಲೆ ಮುಚ್ಚುವು ಪರಿಸ್ಥಿತಿ ನಿರ್ಮಾಣವಾಗಿತ್ತು.

ಶಾಲೆಯ ಆಟದ ಮೈದಾನದಲ್ಲಿ ಇತ್ತೀಚೆಗೆ ನಡೆದ ಅಶ್ವಮೇಧ ಫ್ರೆಂಡ್ಸ್ ಅಯೋಜನೆ ಮಾಡಿದ ವಾಲಿಬಾಲ್ ಪಂದ್ಯಾಟದ ವೇದಿಕೆಯಲ್ಲಿ ಶಾಲೆಯ ಶಿಕ್ಷಕರ ಕೊರತೆಯ ಬಗ್ಗೆ ಶಾಲೆಯ ಸಂಚಾಲಕರಾದ ವಾಮನ್ ತಾಮನ್ಕರ್ ರವರು ಮತ್ತು ಧರ್ಮರಾಜ್ ಅಡಕ್ಕಾಡಿ ರವರು ಈ ವಿಷಯವನ್ನು ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿಗಳಾದ ರಕ್ಷಿತ್ ಶಿವರಾಮ್ ರವರ ಗಮನಕ್ಕೆ ತಂದುಶಾಲೆಗೆ ಶಿಕ್ಷಕರ ನೇಮಕ ಅಗತ್ಯವಾಗಿದ್ದು, ಸರ್ಕಾರದ ಗಮನ ಸೆಳೆಯಬೇಕೆಂದು ಮನವಿ ಮಾಡಿದರು.

ಮರುದಿನದಿಂದ ಕಾರ್ಯಪ್ರವೃತರಾದ ರಕ್ಷಿತ್ ಶಿವರಾಮ್ ರವರು ತಾಲ್ಲೂಕಿನ ಶಿಕ್ಷಣ ಅಧಿಕಾರಿ, ಜಿಲ್ಲೆಯ ಮತ್ತು ರಾಜ್ಯ ಶಿಕ್ಷಣ ಅಧಿಕಾರಿಗಳಿಗೆ ಮನವಿ ಮಾಡಿ ಶಾಲೆಗೆ ಶಿಕ್ಷಕರನ್ನು ನೇಮಿಸಿ ಅವರು ಬಂದು ಶಾಲೆಯಲ್ಲಿ ಅಧಿಕಾರವಹಿಸುವ ತನಕ ಶ್ರಮಿಸಿದರು. ಇದರಿಂದ ಮಕ್ಕಳು, ಪೋಷಕರು ಮತ್ತು ಗ್ರಾಮಸ್ಥರು ಶ್ಲಾಘನೆ ವ್ಯಕ್ತಪಡಿಸಿದರು.

Related posts

ಹರೀಶ್ ಪೂಂಜ ಬೃಹತ್ ಗೆಲುವು: ನಾರಾವಿಯಲ್ಲಿ ವಿಜಯೋತ್ಸವ

Suddi Udaya

ಧರ್ಮಸ್ಥಳದಲ್ಲಿ ಶಿವರಾತ್ರಿಯ ರಥೋತ್ಸವ

Suddi Udaya

ಉಜಿರೆ ರತ್ನಮಾನಸ ವಸತಿ ನಿಲಯದ ಮಕ್ಕಳಿಗೆ ಭತ್ತದ ಸಸಿ ತಯಾರಿ ಬಗ್ಗೆ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಕಲ್ಮಂಜ ಸ್ಕಂದ ಸಂಜೀವಿನಿ ಗ್ರಾಮ ಪಂಚಾಯತ್ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ 17ನೇ ವರ್ಷದ ಸಾಮೂಹಿಕ ವಿವಾಹ: ಅರ್ಜಿ ಆಹ್ವಾನ

Suddi Udaya

ಬೆಳ್ತಂಗಡಿ ತಾಲೂಕು ಕಛೇರಿಯಲ್ಲಿ ಶಿವಯೋಗಿ ಸಿದ್ಧರಾಮ ಜಯಂತಿ ಆಚರಣೆ

Suddi Udaya
error: Content is protected !!