23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರಕ್ಷಿತ್ ಶಿವರಾಂ ಮನವಿಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳ ಸ್ಪಂದನೆ : ಅರಸಿನಮಕ್ಕಿ ಶಾಲೆಗೆ ಶಿಕ್ಷಕರ ನೇಮಕ

ಬೆಳ್ತಂಗಡಿ:ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅನುದಾನಿತ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ ಏಕೈಕ ಶಿಕ್ಷಕರು ಫೆ.28 ರಂದು ಸೇವಾ ನಿವೃತ್ತಿ ಹೊಂದಿದ್ದು,ಶಾಲೆಯಲ್ಲಿದ್ದ ಓರ್ವ ಶಿಕ್ಷಕರು ಇಲ್ಲದೆ ಶಾಲೆ ಮುಚ್ಚುವು ಪರಿಸ್ಥಿತಿ ನಿರ್ಮಾಣವಾಗಿತ್ತು.

ಶಾಲೆಯ ಆಟದ ಮೈದಾನದಲ್ಲಿ ಇತ್ತೀಚೆಗೆ ನಡೆದ ಅಶ್ವಮೇಧ ಫ್ರೆಂಡ್ಸ್ ಅಯೋಜನೆ ಮಾಡಿದ ವಾಲಿಬಾಲ್ ಪಂದ್ಯಾಟದ ವೇದಿಕೆಯಲ್ಲಿ ಶಾಲೆಯ ಶಿಕ್ಷಕರ ಕೊರತೆಯ ಬಗ್ಗೆ ಶಾಲೆಯ ಸಂಚಾಲಕರಾದ ವಾಮನ್ ತಾಮನ್ಕರ್ ರವರು ಮತ್ತು ಧರ್ಮರಾಜ್ ಅಡಕ್ಕಾಡಿ ರವರು ಈ ವಿಷಯವನ್ನು ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿಗಳಾದ ರಕ್ಷಿತ್ ಶಿವರಾಮ್ ರವರ ಗಮನಕ್ಕೆ ತಂದುಶಾಲೆಗೆ ಶಿಕ್ಷಕರ ನೇಮಕ ಅಗತ್ಯವಾಗಿದ್ದು, ಸರ್ಕಾರದ ಗಮನ ಸೆಳೆಯಬೇಕೆಂದು ಮನವಿ ಮಾಡಿದರು.

ಮರುದಿನದಿಂದ ಕಾರ್ಯಪ್ರವೃತರಾದ ರಕ್ಷಿತ್ ಶಿವರಾಮ್ ರವರು ತಾಲ್ಲೂಕಿನ ಶಿಕ್ಷಣ ಅಧಿಕಾರಿ, ಜಿಲ್ಲೆಯ ಮತ್ತು ರಾಜ್ಯ ಶಿಕ್ಷಣ ಅಧಿಕಾರಿಗಳಿಗೆ ಮನವಿ ಮಾಡಿ ಶಾಲೆಗೆ ಶಿಕ್ಷಕರನ್ನು ನೇಮಿಸಿ ಅವರು ಬಂದು ಶಾಲೆಯಲ್ಲಿ ಅಧಿಕಾರವಹಿಸುವ ತನಕ ಶ್ರಮಿಸಿದರು. ಇದರಿಂದ ಮಕ್ಕಳು, ಪೋಷಕರು ಮತ್ತು ಗ್ರಾಮಸ್ಥರು ಶ್ಲಾಘನೆ ವ್ಯಕ್ತಪಡಿಸಿದರು.

Related posts

ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹುಟ್ಟುಹಬ್ಬ: ನಾಗೇಶ್ ಕುಮಾರ್ ಅಭಿಮಾನಿ ಬಳಗದ ವತಿಯಿಂದ ಕೊಕ್ಕಡ ಎಂಡೋ ಸಲ್ಫಾನ್ ಪಾಲನಾ ಕೇಂದ್ರ ಹಾಗೂ ಕೊಕ್ಕಡ ಅಂಗನವಾಡಿ ಕೇಂದ್ರದಲ್ಲಿ ಆಚರಣೆ

Suddi Udaya

ಆರತಕ್ಷತೆ ಊಟ ಸೇವಿಸಿದ ಮಂದಿ ಅಸ್ವಸ್ಥ – ಆಸ್ಪತ್ರೆಗೆ ದಾಖಲು: ಓರ್ವೆ ಮಹಿಳೆ ಸಾವು-ಮತ್ತೋರ್ವೆ ಗಂಭೀರ

Suddi Udaya

ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷರಾಗಿ ರಾಘವ ಹೆಚ್ ಗೇರುಕಟ್ಟೆ ನೇಮಕ

Suddi Udaya

ಅಶ್ರಫ್ ಆಲಿಕುಂಞಿ (ಅಚ್ಚು) ಮುಂಡಾಜೆ ಅವರಿಗೆ ಲಯನ್ಸ್ ಜಿಲ್ಲಾ “ಗೋಲ್ಡನ್ ಅಸಿಸ್ಟೆಂಟ್ ಡಿಸ್ಟ್ರಿಕ್ಟ್ ಕಾರ್ಡಿನೇಟರ್” ಪುರಸ್ಕಾರ

Suddi Udaya

ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಟ: ಉಜಿರೆಯ ಮೋಹನ್ ರಿಗೆ ಪ್ರಶಸ್ತಿ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ದೀಪಾವಳಿ ಆಚರಣೆ

Suddi Udaya
error: Content is protected !!