July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರಕ್ಷಿತ್ ಶಿವರಾಂ ಮನವಿಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳ ಸ್ಪಂದನೆ : ಅರಸಿನಮಕ್ಕಿ ಶಾಲೆಗೆ ಶಿಕ್ಷಕರ ನೇಮಕ

ಬೆಳ್ತಂಗಡಿ:ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅನುದಾನಿತ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ ಏಕೈಕ ಶಿಕ್ಷಕರು ಫೆ.28 ರಂದು ಸೇವಾ ನಿವೃತ್ತಿ ಹೊಂದಿದ್ದು,ಶಾಲೆಯಲ್ಲಿದ್ದ ಓರ್ವ ಶಿಕ್ಷಕರು ಇಲ್ಲದೆ ಶಾಲೆ ಮುಚ್ಚುವು ಪರಿಸ್ಥಿತಿ ನಿರ್ಮಾಣವಾಗಿತ್ತು.

ಶಾಲೆಯ ಆಟದ ಮೈದಾನದಲ್ಲಿ ಇತ್ತೀಚೆಗೆ ನಡೆದ ಅಶ್ವಮೇಧ ಫ್ರೆಂಡ್ಸ್ ಅಯೋಜನೆ ಮಾಡಿದ ವಾಲಿಬಾಲ್ ಪಂದ್ಯಾಟದ ವೇದಿಕೆಯಲ್ಲಿ ಶಾಲೆಯ ಶಿಕ್ಷಕರ ಕೊರತೆಯ ಬಗ್ಗೆ ಶಾಲೆಯ ಸಂಚಾಲಕರಾದ ವಾಮನ್ ತಾಮನ್ಕರ್ ರವರು ಮತ್ತು ಧರ್ಮರಾಜ್ ಅಡಕ್ಕಾಡಿ ರವರು ಈ ವಿಷಯವನ್ನು ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿಗಳಾದ ರಕ್ಷಿತ್ ಶಿವರಾಮ್ ರವರ ಗಮನಕ್ಕೆ ತಂದುಶಾಲೆಗೆ ಶಿಕ್ಷಕರ ನೇಮಕ ಅಗತ್ಯವಾಗಿದ್ದು, ಸರ್ಕಾರದ ಗಮನ ಸೆಳೆಯಬೇಕೆಂದು ಮನವಿ ಮಾಡಿದರು.

ಮರುದಿನದಿಂದ ಕಾರ್ಯಪ್ರವೃತರಾದ ರಕ್ಷಿತ್ ಶಿವರಾಮ್ ರವರು ತಾಲ್ಲೂಕಿನ ಶಿಕ್ಷಣ ಅಧಿಕಾರಿ, ಜಿಲ್ಲೆಯ ಮತ್ತು ರಾಜ್ಯ ಶಿಕ್ಷಣ ಅಧಿಕಾರಿಗಳಿಗೆ ಮನವಿ ಮಾಡಿ ಶಾಲೆಗೆ ಶಿಕ್ಷಕರನ್ನು ನೇಮಿಸಿ ಅವರು ಬಂದು ಶಾಲೆಯಲ್ಲಿ ಅಧಿಕಾರವಹಿಸುವ ತನಕ ಶ್ರಮಿಸಿದರು. ಇದರಿಂದ ಮಕ್ಕಳು, ಪೋಷಕರು ಮತ್ತು ಗ್ರಾಮಸ್ಥರು ಶ್ಲಾಘನೆ ವ್ಯಕ್ತಪಡಿಸಿದರು.

Related posts

ಪಾದಯಾತ್ರೆಗೆ ಹೊರಟಿದ್ದ ಯುವಕನಾಪತ್ತೆ

Suddi Udaya

ಹರೀಶ್ ಪೂಂಜ ಗೆಲುವು: ಬೆಳಾಲಿನಲ್ಲಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

Suddi Udaya

ಉಜಿರೆ ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ಸಮಿತಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕನ್ಯಾಡಿ ಶ್ರೀ ರಾಮಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಅಯೋಧ್ಯೆಯ ಸಂಸದರು, ಮೇಯರ್ ಹಾಗೂ ಶಾಸಕರಿಗೆ ಅಯೋಧ್ಯೆ ಶಾಖಾ ಮಠದ ಶಿಲಾನ್ಯಾಸಕ್ಕೆ ಆಹ್ವಾನ

Suddi Udaya

ಯೋಧ ಎ ಸಿ ಪಿ ಹವಾಲ್ದಾರ್ ದೇವಪ್ರಸಾದ್ ಗೌಡರವರಿಗೆ ಮೊಗ್ರು ಒಕ್ಕೂಟದ ವತಿಯಿಂದ ಅಭಿನಂದನೆ

Suddi Udaya

ರಾಜ್ಯ ಅಂತರ್ ಜಿಲ್ಲಾ ಅಥ್ಲೆಟಿಕ್ ಕ್ರೀಡಾಕೂಟ: ಮುಂಡಾಜೆಯ ತೇಜಲ್ ಕೆ.ಆರ್. ರವರಿಗೆ 110 ಮೀ. ಹರ್ಡಲ್ಸ್‌ನಲ್ಲಿ ಚಿನ್ನದ ಪದಕ

Suddi Udaya
error: Content is protected !!