23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸಹಾಯಕ ಇಂಜಿನಿಯರ್ ಗಂಗಾಧರ ಬಳಂಜರವರಿಗೆ ಸೇವಾ ನಿವೃತ್ತಿ

ಬೆಳ್ತಂಗಡಿ: ಸುದೀರ್ಘ 36 ವರ್ಷಗಳ ಕಾಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸಹಾಯಕ ಇಂಜಿನಿಯರ್ ಆಗಿ ಸೇವೆ ಸಲ್ಲಿಸಿದ ಗಂಗಾಧರ ಬಳಂಜರವರು ಸೇವೆಯಿಂದ ಫೆ.28 ರಂದು ನಿವೃತ್ತಿ ಹೊಂದಿದ್ದಾರೆ.1989 ರಲ್ಲಿ ಗಂಗಾಧರ ಅವರು ಕರ್ತವ್ಯಕ್ಕೆ ಹಾಜರಾಗಿ ಪ್ರಾರಂಭದಲ್ಲಿ ಮಂಗಳೂರು ವಿಭಾಗಕ್ಕೆ ನಿಯೋಜನೆಗೊಂಡರು.

ನಂತರ ಹಾಸನ ವಿಭಾಗ, ಮೈಸೂರು ನಗರ ಸಾರಿಗೆ ವಿಭಾಗ ಮಂಗಳೂರು ವಿಭಾಗದಲ್ಲಿ ಸೇವೆ ಸಲ್ಲಿಸಿ ಕಳೆದ ಏಳು ತಿಂಗಳ ಹಿಂದೆ ಭಡ್ತಿ ಗೊಂಡು ಪುತ್ತೂರು ವಿಭಾಗಕ್ಕೆ ನಿಯೋಜನೆಗೊಂಡಿರುತ್ತಾರೆ.ಮೈಸೂರು ನಗರದಲ್ಲಿ ಗ್ರಾಮಾಂತರ ಬಸ್ ನಿಲ್ದಾಣ,ಕುವೆಂಪುನಗರ ಬಸ್ ನಿಲ್ದಾಣ ಮತ್ತು ನಗರ ಸಾರಿಗೆ ಬಸ್ ನಿಲ್ದಾಣಗಳು ಇವರ ಮೇಲ್ವಿಚಾರಣೆಯಲ್ಲಿ ನಿರ್ಮಾಣವಾಗಿರುತದೆ.

ಹಾಸನದಲ್ಲಿ ಹೈಟೆಕ್ ನಗರ ಸಾರಿಗೆ ಬಸ್ ನಿಲ್ದಾಣ, ಸುಬ್ರಮಣ್ಯ, ಸುಳ್ಯ, ವಿಟ್ಲ, ಉಡುಪಿ ಹಾಗೂ ಬೈಂದೂರುನಲ್ಲಿ ಇವರ ಮಲ್ವಿಚಾರಣೆಯಲ್ಲಿ ಬಸ್ ನಿಲ್ದಾಣಗಳು ನಿರ್ಮಾಣವಾಗಿರುತದೆ. ಇವರು ಬಳಂಜ ಗ್ರಾಮದ ಪರಾರಿ ನಿವಾಸಿಯಾಗಿದ್ದು,ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಸದಸ್ಯ. ಪ್ರಸ್ತುತ ಮಂಗಳೂರಿನಲ್ಲಿ ಪತ್ನಿ ವಿಜಯಲಕ್ಷ್ಮಿ, ಪುತ್ರ ಚಿರಂತ್ ರವರೊಂದಿಗೆ ವಾಸವಾಗಿದ್ದಾರೆ.

Related posts

ಬಂದಾರು: ಕುಂಟಾಲಪಲ್ಕೆಯಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ಹಾನಿ

Suddi Udaya

ಬಿ.ಸಿ. ರೋಡ್‌-ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್ದಾರಿ 73 ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ರೂ.64 ಕೋಟಿ ಮಂಜೂರು: ಸಂಸದ ಕ್ಯಾ. ಚೌಟ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನಲ್ಲಿ ಅಕ್ಷರೋತ್ಸವ

Suddi Udaya

ಶಿಶಿಲ : 9 ವರ್ಷದ ಬಾಲಕ ಅಶ್ವಿನ್ ನಿಧನ

Suddi Udaya

ತೋಟತ್ತಾಡಿ: ಬಾಬು ಗೌಡ ನೇಣುಬಿಗಿದು ಆತ್ಮಹತ್ಯೆ

Suddi Udaya

ಅ.28 : ಈ ವರ್ಷದ ಕೊನೆಯ ‘ಚಂದ್ರಗ್ರಹಣ’ : 30 ವರ್ಷಗಳಿಗೊಮ್ಮೆ ಸಂಭವಿಸುವ ಅಪರೂಪದ ಗ್ರಹಣ

Suddi Udaya
error: Content is protected !!