23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸಹಾಯಕ ಇಂಜಿನಿಯರ್ ಗಂಗಾಧರ ಬಳಂಜರವರಿಗೆ ಸೇವಾ ನಿವೃತ್ತಿ

ಬೆಳ್ತಂಗಡಿ: ಸುದೀರ್ಘ 36 ವರ್ಷಗಳ ಕಾಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸಹಾಯಕ ಇಂಜಿನಿಯರ್ ಆಗಿ ಸೇವೆ ಸಲ್ಲಿಸಿದ ಗಂಗಾಧರ ಬಳಂಜರವರು ಸೇವೆಯಿಂದ ಫೆ.28 ರಂದು ನಿವೃತ್ತಿ ಹೊಂದಿದ್ದಾರೆ.1989 ರಲ್ಲಿ ಗಂಗಾಧರ ಅವರು ಕರ್ತವ್ಯಕ್ಕೆ ಹಾಜರಾಗಿ ಪ್ರಾರಂಭದಲ್ಲಿ ಮಂಗಳೂರು ವಿಭಾಗಕ್ಕೆ ನಿಯೋಜನೆಗೊಂಡರು.

ನಂತರ ಹಾಸನ ವಿಭಾಗ, ಮೈಸೂರು ನಗರ ಸಾರಿಗೆ ವಿಭಾಗ ಮಂಗಳೂರು ವಿಭಾಗದಲ್ಲಿ ಸೇವೆ ಸಲ್ಲಿಸಿ ಕಳೆದ ಏಳು ತಿಂಗಳ ಹಿಂದೆ ಭಡ್ತಿ ಗೊಂಡು ಪುತ್ತೂರು ವಿಭಾಗಕ್ಕೆ ನಿಯೋಜನೆಗೊಂಡಿರುತ್ತಾರೆ.ಮೈಸೂರು ನಗರದಲ್ಲಿ ಗ್ರಾಮಾಂತರ ಬಸ್ ನಿಲ್ದಾಣ,ಕುವೆಂಪುನಗರ ಬಸ್ ನಿಲ್ದಾಣ ಮತ್ತು ನಗರ ಸಾರಿಗೆ ಬಸ್ ನಿಲ್ದಾಣಗಳು ಇವರ ಮೇಲ್ವಿಚಾರಣೆಯಲ್ಲಿ ನಿರ್ಮಾಣವಾಗಿರುತದೆ.

ಹಾಸನದಲ್ಲಿ ಹೈಟೆಕ್ ನಗರ ಸಾರಿಗೆ ಬಸ್ ನಿಲ್ದಾಣ, ಸುಬ್ರಮಣ್ಯ, ಸುಳ್ಯ, ವಿಟ್ಲ, ಉಡುಪಿ ಹಾಗೂ ಬೈಂದೂರುನಲ್ಲಿ ಇವರ ಮಲ್ವಿಚಾರಣೆಯಲ್ಲಿ ಬಸ್ ನಿಲ್ದಾಣಗಳು ನಿರ್ಮಾಣವಾಗಿರುತದೆ. ಇವರು ಬಳಂಜ ಗ್ರಾಮದ ಪರಾರಿ ನಿವಾಸಿಯಾಗಿದ್ದು,ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಸದಸ್ಯ. ಪ್ರಸ್ತುತ ಮಂಗಳೂರಿನಲ್ಲಿ ಪತ್ನಿ ವಿಜಯಲಕ್ಷ್ಮಿ, ಪುತ್ರ ಚಿರಂತ್ ರವರೊಂದಿಗೆ ವಾಸವಾಗಿದ್ದಾರೆ.

Related posts

ಜ 29 :ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ ಬೃಹತ್ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ: ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ:ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾಗಿ ಕೆ. ಹರೀಶ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಗಂಗಾಧರ ಮಿತ್ತಮಾರು ಅವಿರೋಧ ಆಯ್ಕೆ

Suddi Udaya

ಬೆಳ್ತಂಗಡಿ ಪವರ್ ಆನ್ ಸಂಸ್ಥೆಗೆ ದಶಕದ ಸಂಭ್ರಮ: ಲಕ್ಕೀ ಸ್ಕೀಂ ಬಂಪರ್ ಡ್ರಾ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಬಿಸಿಎ ವಿಭಾಗದಿಂದ ಎನಿಗ್ಮಾ- 2024

Suddi Udaya

ಗೇರುಕಟ್ಟೆ ಸರ್ಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಮೇಲಂತಬೆಟ್ಟು : ಪ್ರೇಮಾ ಅವರಿಗೆ “ವಾತ್ಸಲ್ಯ” ಮನೆ ಹಸ್ತಾಂತರ

Suddi Udaya
error: Content is protected !!