23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಛಂದಸ್ಸು: ಪರಿಚಯಾತ್ಮಕ ಕಾರ್ಯಗಾರ

ಪಟ್ಟೂರು: ಕನ್ನಡ ಭಾಷೆಯಲ್ಲಿ ಪದ್ಯಗಳನ್ನು ರಚಿಸುವಾಗ ಅದರದೇ ಆದ ಕೆಲವು ನಿಯಮಗಳಿದ್ದು, ಪದ್ಯದ ರಚನಾ ನಿಯಮಗಳನ್ನು ತಿಳಿಸುವ ಶಾಸ್ತ್ರ ಛಂದಸ್ಸಾಗಿದೆ. ವಿದ್ಯಾರ್ಥಿಗಳು ಪದ್ಯವನ್ನು ರಚಿಸುವಾಗ ಛಂದಸ್ಸಿನಲ್ಲಿ ಬರುವಂತಹ ಪ್ರಾಸಗಳು, ಗಣಗಳು ಸೇರಿದಂತೆ ಇತರ ವಿಚಾರಗಳನ್ನು ಅಳವಡಿಸಿಕೊಂಡಾಗ ಅಂತಹ ಪದ್ಯಗಳು ವಿಶೇಷ ಮಹತ್ವವನ್ನು ಪಡೆಯುತ್ತವೆ ಎಂದು ಪಟ್ಟೂರಿನ ಶ್ರೀರಾಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಚಂದ್ರಶೇಖರ ಶೇಟ್ ನುಡಿದರು.


ಪಟ್ರಮೆ ಗ್ರಾಮದ ಪಟ್ಟೂರಿನ ಶ್ರೀರಾಮ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ಛಂದಸ್ಸು: ಪರಿಚಯಾತ್ಮಕ ವಿವರ ಎಂಬ ಎಂಬ ವಿಷಯದ ಕುರಿತು ನಡೆದ ಕಾರ್ಯಗಾರವನ್ನು ಉದ್ದೇಶಿಸಿ ಮಾತನಾಡಿದರು.
ಭಿನ್ನ ತರಗತಿಯ ವಿದ್ಯಾರ್ಥಿಗಳನ್ನು ಒಂದೆಡೆ ಸೇರಿಸಿ ಕಾರ್ಯಗಾರಗಳ ಮೂಲಕ ಬೋಧಿಸಿದರೆ ಮಕ್ಕಳು ಅದನ್ನು ಬೇಗನೆ ಕಲಿತುಕೊಳ್ಳುತ್ತಾರೆ ಎಂದರು.


ಕನ್ನಡ ವಿಭಾಗದ ಶಿಕ್ಷಕಿ ಸುಪ್ರೀತಾ ಎ. ಮತ್ತು ಸ್ವಾತಿ ಕೆ.ವಿ. ವಿದ್ಯಾರ್ಥಿಗಳಿಗೆ ಛಂದಸ್ಸು, ಮಾತ್ರಗಣ ಹಾಗೂ ಕಂದ ಪದ್ಯಗಳ ಬಗ್ಗೆ ಚಟುವಟಿಕೆ ಮೂಲಕ ಕಾರ್ಯಗಾರವನ್ನು ನಡೆಸಿಕೊಟ್ಟರು.
ಪ್ರಾಥಮಿಕ ಮತ್ತು ಪ್ರೌಢಶಾಲೆಯ ವಿದ್ಯಾರ್ಥಿಗಳು ಕಾರ್ಯಗಾರದಲ್ಲಿ ಪಾಲ್ಗೊಂಡರು.

Related posts

ಪಿಲಿಗೂಡು ಹಾ.ಉ.ಮ.ಸ ಸಂಘದ ಸದಸ್ಯೆ ಜಮೀಲಾ ರವರಿಗೆ ಸಹಕಾರಿ ಸಪ್ತಾಹದಲ್ಲಿ ಕ್ಷೀರ ರತ್ನ ಪ್ರಶಸ್ತಿ

Suddi Udaya

ಆ.24: ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಶ್ರೀ ಕೃಷ್ಣಾ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಅಭಿನಂದನಾ ಕಾರ್ಯಕ್ರಮ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಟಿ.ವಿ ಟೆಕ್ನಿಷಿಯನ್ ತರಬೇತಿ ಸಮಾರೋಪ ಸಮಾರಂಭ

Suddi Udaya

ಪೆರಾಡಿ ಖಾಝಿಯಾಗಿ ತ್ವಾಖಾ ಉಸ್ತಾದ್ ಅಧಿಕಾರ ಸ್ವೀಕಾರ

Suddi Udaya

ದೀಪಾವಳಿ ಗೋ ಪೂಜೆ ಪ್ರಯುಕ್ತ ಡಾ| ಡಿ. ವೀರೇಂದ್ರ ಹೆಗ್ಗಡೆ ದಂಪತಿಯಿಂದ ಗೋವುಗಳಿಗೆ ಉಪಾಹಾರ

Suddi Udaya
error: Content is protected !!