July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂಟರ ಮಹಿಳಾ ವಿಭಾಗದಿಂದ “ಸ್ಪರ್ಶ” ಹೆಣ್ಣು ಮಕ್ಕಳ ಜಾಗೃತಿ ವಿಶೇಷ ಕಾರ್ಯಕ್ರಮ

ಬೆಳ್ತಂಗಡಿ : ಬಂಟರ ಮಹಿಳಾ ವಿಭಾಗದಿಂದ ಮಹಿಳಾ ದಿನಾಚರಣೆ ಅಂಗವಾಗಿ ಧರ್ಮಸ್ಥಳದ ಉನ್ನತೀಕರಿಸಿದ ಹಿ.ಪ್ರಾ.ಶಾಲೆಯಲ್ಲಿ ಮಾ.5 ರಂದು ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಪ್ರಸ್ತುತ ಕಾಲಮಾನದಲ್ಲಿ ಹೆಣ್ಣು ಮಕ್ಕಳು ದುರಿಸುತ್ತಿರುವ ಲೈಂಗಿಕ ಹಾಗೂ ದೈಹಿಕ ದೌರ್ಜನ್ಯದ ಬಗ್ಗೆ ಹೆಣ್ಣು ಮಕ್ಕಳಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ʼಸ್ಪರ್ಶʼ ಹೆಣ್ಣು ಮಕ್ಕಳ ಜಾಗೃತಿ ಅನ್ನುವ ಕಾರ್ಯಕ್ರಮ ಜರುಗಿತು.

ಆಳ್ವಾಸ್‌ ವೆಲ್‌ ನೆಸ್‌ ಸೆಂಟರ್‌ನ ನಿರ್ದೇಶಕರಾದ ಡಾ.ದೀಪಾ ಕೊಠಾರಿ ಅವರು ಮಕ್ಕಳಿಗೆ ಒಳ್ಳೆಯ ಸ್ಪರ್ಶ, ಅಪಾಯದ ಸ್ಪರ್ಶದ ಕುರಿತಾಗಿ ಮಾಹಿತಿಯನ್ನು ನೀಡಿದರು.

ಕಾರ್ಯಕ್ರಮ ಉದ್ಘಾಟನಾ ಸಮಾರಂಭದಲ್ಲಿ ಧರ್ಮಸ್ಥಳದ ಉನ್ನತೀಕರಿಸಿದ ಹಿ.ಪ್ರಾ.ಶಾಲೆ ಮುಖ್ಯ ಶಿಕ್ಷಕಿ ಪುಷ್ಪಾ ಎನ್‌, ಶಾಲಾ ಎಸ್ ಡಿ ಎಂ ಸಿ ಉಪಾಧ್ಯಕ್ಷೆ ಚಂದ್ರಾವತಿ ಗೌಡ, ಉಜಿರೆ ವಲಯ ಬಂಟರ ಸಂಘದ ಅಧ್ಯಕ್ಷೆ ವನಿತಾ ಶೆಟ್ಟಿ , ಬಂಟರ ಮಹಿಳಾ ವಿಭಾಗದ ಉಪಾಧ್ಯಕ್ಷೆ ಸಂಗೀತಾ ಶೆಟ್ಟಿ, ಕಾರ್ಯದರ್ಶಿ ಶ್ರೇಯಾ ಶೆಟ್ಟಿ, ಕೋಶಾಧಿಕಾರಿ ರಕ್ಷಿತಾ ಶೆಟ್ಟಿ, ನಿರ್ದೇಶಕರುಗಳಾದ ಸಂಸ್ಕೃತಿ ಶೆಟ್ಟಿ, ವಿಂದ್ಯಾ ಶೆಟ್ಟಿ, ಪವಿತ್ರಾ ಶೆಟ್ಟಿ, ಉಪಸ್ಥಿತರಿದ್ದರು.

ಬಂಟರ ಮಹಿಳಾ ವಿಭಾಗ ಅಧ್ಯಕ್ಷೆ ಜಯಲಕ್ಷ್ಮಿ ನವೀನ್‌ ಸಾಮಾನಿ ಅತಿಥಿ ಗಣ್ಯರನ್ನು ಸ್ವಾಗತಿಸಿ ಪ್ರಾಸ್ತಾವಿಕ ಮಾತನ್ನಾಡಿದರು. ನಿರ್ದೇಶಕಿ ಉಷಾ ಶೆಟ್ಟಿ ಕಾರ್ಯಕ್ರಮ ನಿರೂಪಣೆ ಮಾಡಿದರು.

Related posts

ಶಿಬಾಜೆ ಬರ್ಗುಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವತಿ ಸಾವು: ರೂ.25 ಲಕ್ಷ ಪರಿಹಾರ ನೀಡುವಂತೆ ಮೆಸ್ಕಾಂ ಇಲಾಖೆಗೆ ಶಾಸಕ ಹರೀಶ್ ಪೂಂಜಾ ಆಗ್ರಹ

Suddi Udaya

ಮರೋಡಿ ಗ್ರಾಮ‌ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ‌ ಸುತ್ತಿನ ಗ್ರಾಮಸಭೆ

Suddi Udaya

ಸಿರಿ ಸಂಸ್ಥೆಯಲ್ಲಿ ವಿಜಯವಾಣಿ ವಿಜಯೋತ್ಸವ ಕೂಪನ್ ಬಿಡುಗಡೆ

Suddi Udaya

ಗರ್ಡಾಡಿ: ಸತ್ಯ ಶೋಧಕ ವೇದಿಕೆಯಿಂದ ಹಚ್ಚಾಡಿ ಅಂಗನವಾಡಿ ಕೇಂದ್ರದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಜಿಲ್ಲಾಮಟ್ಟದ ಐಟಿ ಕ್ವಿಜ್‌ ಸ್ಪರ್ಧೆ: ಉಜಿರೆಯ ಎಸ್‌.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya

ಬಂಗ್ಲೆಗುಡ್ಡಕ್ಕೆ ಮತ್ತೆ ಎಂಟ್ರಿ ಕೊಟ್ಟ ಎಸ್.ಐ.ಟಿ ಅಧಿಕಾರಿಗಳು

Suddi Udaya
error: Content is protected !!