25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶುಭಾರಂಭ

ಬೆಳ್ತಂಗಡಿ: ಎಸ್.ಎನ್. ಕಂಪ್ಯೂಟರ್ಸ್ ಮತ್ತು ಸೈಬರ್ ಕೇಂದ್ರ ಸ್ಥಳಾಂತರಗೊಂಡು ಪುನರಾರಂಭ

ಬೆಳ್ತಂಗಡಿ: ಬೆಳ್ತಂಗಡಿಯ ಬಸ್ ಸ್ಟ್ಯಾಂಡ್ ಎದುರಿನ ನೂತನ್ ಡ್ರೆಸ್ಸಸ್ ನ ಮೊದಲ ಮಹಡಿಯಲ್ಲಿ ದಯಾನಂದ ನಾಯಕ್ ಮಾಲಕತ್ವದ ಎಸ್. ಎನ್. ಕಂಪ್ಯೂಟರ್ಸ್ ಮತ್ತು ಸೈಬರ್ ಕೇಂದ್ರವು ಮಾ.6 ರಂದು ಪುನರಾರಂಭಗೊಂಡಿದೆ.

ಪುರೋಹಿತರು ಹಾಗೂ ಜ್ಯೋತಿಷಿಗಳಾದ ಪ್ರಭಾಕರ ಭಟ್ ಇಡ್ಯಾ ದೀಪ ಪ್ರಜ್ವಲಿಸಿ ಆಶೀರ್ವಚನ ನೀಡಿ ಕಳೆದ 27 ವರ್ಷಗಳಿಂದ ಕಾರ್ಯಾಚರಿಸುತ್ತಿದ್ದ ಈ ಸಂಸ್ಥೆಯು ಇದೀಗ ಸ್ಥಳಾಂತರಗೊಂಡು ಮತ್ತೊಮ್ಮೆ ಯಶಸ್ಸಿನ ದಾರಿಯಲ್ಲಿ ಸಾಗಲಿ ಎಂದು ಶುಭಾಶೀರ್ವಾದ ಮಾಡಿದರು.

ಮುಖ್ಯ ಅತಿಥಿ ಪ್ರೊಫೆಸರ್ ಮಧೂರು ಮೋಹನ ಕಲ್ಲೂರಾಯರು ಶುಭವನ್ನು ಹಾರೈಸುತ್ತಾ ಸಹೃದಯತೆ, ಪ್ರೀತಿ, ಸೇವೆ ಮತ್ತು ವಿಶ್ವಾಸ ಬೆಲೆ ಕಟ್ಟಲಾಗದ ಸಂಗತಿಗಳು, ಈ ನಾಲ್ಕು ಸಂಗತಿಗಳನ್ನು ಮುಂದಿಟ್ಟುಕೊಂಡು ಮಾಡಿದ ಸೇವೆ ಜನತಾ ಸೇವೆಯಲ್ಲಿ ಜನಾರ್ಧನನನ್ನು ಕಾಣುವುದು ಸತ್ಯವಾದ ಸಂಗತಿಯಾಗಿದೆ. ಎಸ್ ಎನ್ ಕಂಪ್ಯೂಟರ್ಸ್ ಎಲ್ಲರ ಸೇವೆಗೆ ಅನನ್ಯವಾಗಿ ಲಭ್ಯವಾಗಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಶಾರದಾ ದಯಾನಂದ್ ನಾಯಕ್, ನಿಧೀಶ್ ನಾಯಕ್, ಸದಾನಂದ ಪ್ರಭು ಹೀರ್ತೊಟ್ಟು, ಸುಧಾಕರ ಪ್ರಭು ಪರ್ಮರೋಡಿ ದಂಪತಿಗಳು, ಸುಧಾಕರ ಪ್ರಭು ಇಡ್ಯಾ, ಕಟ್ಟಡದ ಮಾಲೀಕರಾದ ಶ್ರೀಮತಿ ಸೆಲಿನ್ ನೋರೋನ್ಹ , ಶ್ರೀಮತಿ ನ್ಯಾನ್ಸಿ ಡಿ’ಸೋಜ, ಶ್ರೀಮತಿ ಭಾರತಿ ಜೈನ್, ಅಂಬ್ರೊಸ್ ಡಿ’ಸೋಜ ದಂಪತಿಗಳು, ಬಾಲಕೃಷ್ಣ ಶೆನಾಯ್, ಯಶವಂತ ನಾಯಕ್ ಮುಂತಾದ ಗಣ್ಯರು ಉಪಸ್ಥಿತರಿದ್ದರು.

ಸಂಸ್ಥೆಯಲ್ಲಿ ಕಂಪ್ಯೂಟರ್ ಸೇಲ್ಸ್ ಮತ್ತು ಸರ್ವಿಸ್, ಆಧಾರ್ ಕಾರ್ಡ್, ಪಾನ್ ಕಾರ್ಡ್, ರೇಷನ್ ಕಾರ್ಡ್, ಪಾಸ್ ಪೋರ್ಟ್, ವೋಟರ್ ಐಡಿ, RTC, XEROX, ಕಲರ್ XEROX ಮತ್ತು ಪ್ರಿಂಟ್ ಹಾಗೂ ಎಲ್ಲಾ ತರಹದ ಆನ್ಲೈನ್ ಸೇವೆಗಳು ಲಭ್ಯವಿದೆ ಎಂದು ಮಾಲಕರಾದ ದಯಾನಂದ ನಾಯಕ್ ತಿಳಿಸಿದ್ದಾರೆ.

Related posts

ನಡ: ಕೇಲ್ತಾಜೆ ಸುರ್‍ಯ ರಸ್ತೆಗೆ ದಿ| ಸುಭಾಶ್ಚಂದ್ರ ಜೈನ್ ಸುರ್ಯಗುತ್ತು ಹೆಸರು ನಾಮಕರಣ ಮಾಡಲು ಪಿ.ಡಿ.ಒ ರವರಿಗೆ ಮನವಿ

Suddi Udaya

ಜೂ.15-29: ಶಿಶಿಲ ಗ್ರಾ.ಪಂ. ನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಕಡಿರುದ್ಯಾವಾರ ಗ್ರಾಮ ಸಭೆ: ದಾರಿದೀಪ ವಿಸ್ತರಣೆಯ ಬಗ್ಗೆ ಗ್ರಾಮಸ್ಥರಿಂದ ಪರ-ವಿರೋಧ ಚರ್ಚೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನ ವತಿಯಿಂದ 20 ನೇ ವರ್ಷದ ಪುಸ್ತಕ ವಿತರಣೆ : ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ – ನಿವೃತ್ತ ಯೋಧರಿಗೆ ಗೌರವಾರ್ಪಣೆ

Suddi Udaya

ಮಚ್ಚಿನ ಅನಂತೇಶ್ವರ ಸಂಜೀವಿನಿ ಮಹಿಳಾ ಒಕ್ಕೂಟದ ವತಿಯಿಂದ ಸ್ವಸಹಾಯ ಸಂಘದ ಸದಸ್ಯರಿಗೆ ಫಿನೈಲ್ ಹಾಗೂ ಸೋಪ್ ಆಯಿಲ್ ತರಬೇತಿ

Suddi Udaya

ಬೆಳ್ತಂಗಡಿ : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ : ಬೆಳ್ತಂಗಡಿ ಪೊಲೀಸರಿಂದ ಆರೋಪಿ ಬಂಧನ

Suddi Udaya
error: Content is protected !!