July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರಕ್ಷಿತ್ ಶಿವರಾಂ ಮನವಿಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳ ಸ್ಪಂದನೆ : ಅರಸಿನಮಕ್ಕಿ ಶಾಲೆಗೆ ಶಿಕ್ಷಕರ ನೇಮಕ

ಬೆಳ್ತಂಗಡಿ:ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅನುದಾನಿತ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ ಏಕೈಕ ಶಿಕ್ಷಕರು ಫೆ.28 ರಂದು ಸೇವಾ ನಿವೃತ್ತಿ ಹೊಂದಿದ್ದು,ಶಾಲೆಯಲ್ಲಿದ್ದ ಓರ್ವ ಶಿಕ್ಷಕರು ಇಲ್ಲದೆ ಶಾಲೆ ಮುಚ್ಚುವು ಪರಿಸ್ಥಿತಿ ನಿರ್ಮಾಣವಾಗಿತ್ತು.

ಶಾಲೆಯ ಆಟದ ಮೈದಾನದಲ್ಲಿ ಇತ್ತೀಚೆಗೆ ನಡೆದ ಅಶ್ವಮೇಧ ಫ್ರೆಂಡ್ಸ್ ಅಯೋಜನೆ ಮಾಡಿದ ವಾಲಿಬಾಲ್ ಪಂದ್ಯಾಟದ ವೇದಿಕೆಯಲ್ಲಿ ಶಾಲೆಯ ಶಿಕ್ಷಕರ ಕೊರತೆಯ ಬಗ್ಗೆ ಶಾಲೆಯ ಸಂಚಾಲಕರಾದ ವಾಮನ್ ತಾಮನ್ಕರ್ ರವರು ಮತ್ತು ಧರ್ಮರಾಜ್ ಅಡಕ್ಕಾಡಿ ರವರು ಈ ವಿಷಯವನ್ನು ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿಗಳಾದ ರಕ್ಷಿತ್ ಶಿವರಾಮ್ ರವರ ಗಮನಕ್ಕೆ ತಂದುಶಾಲೆಗೆ ಶಿಕ್ಷಕರ ನೇಮಕ ಅಗತ್ಯವಾಗಿದ್ದು, ಸರ್ಕಾರದ ಗಮನ ಸೆಳೆಯಬೇಕೆಂದು ಮನವಿ ಮಾಡಿದರು.

ಮರುದಿನದಿಂದ ಕಾರ್ಯಪ್ರವೃತರಾದ ರಕ್ಷಿತ್ ಶಿವರಾಮ್ ರವರು ತಾಲ್ಲೂಕಿನ ಶಿಕ್ಷಣ ಅಧಿಕಾರಿ, ಜಿಲ್ಲೆಯ ಮತ್ತು ರಾಜ್ಯ ಶಿಕ್ಷಣ ಅಧಿಕಾರಿಗಳಿಗೆ ಮನವಿ ಮಾಡಿ ಶಾಲೆಗೆ ಶಿಕ್ಷಕರನ್ನು ನೇಮಿಸಿ ಅವರು ಬಂದು ಶಾಲೆಯಲ್ಲಿ ಅಧಿಕಾರವಹಿಸುವ ತನಕ ಶ್ರಮಿಸಿದರು. ಇದರಿಂದ ಮಕ್ಕಳು, ಪೋಷಕರು ಮತ್ತು ಗ್ರಾಮಸ್ಥರು ಶ್ಲಾಘನೆ ವ್ಯಕ್ತಪಡಿಸಿದರು.

Related posts

ಎಕ್ಸೆಲ್ ಪಿಯು ಕಾಲೇಜಿನ ವಿದ್ಯಾರ್ಥಿಗಳಿಂದ ರಾಷ್ಟ್ರೀಯ ವಿಜ್ಞಾನ ಒಲಿಂಪಿಯಾಡ್‌ನಲ್ಲಿ ಅಭೂತಪೂರ್ವ ಸಾಧನೆ

Suddi Udaya

ರಸ್ತೆ ಬದಿಯಲ್ಲಿ ನಿಂತು ವಾಹನಗಳಿಗೆ ಕೈ ತೋರಿಸುವ ಮಕ್ಕಳು: ಪೋಷಕರ ಆತಂಕ

Suddi Udaya

ಗಾಯಕರಾದ ಕ್ಷಿತಿ ಕೆ.ರೈ ಮತ್ತು ಶ್ರೇಷ್ಠ ಆಳ್ವ ರಿಗೆ ಆಮಂತ್ರಣ ಸತ್ಯಶ್ರೀ ಗೌರವ ಪುರಸ್ಕಾರ

Suddi Udaya

ಪಹಲ್ಗಾಮ್ ನಲ್ಲಿ ಭಯೋತ್ಪಾದಕ ದಾಳಿಯನ್ನು ಖಂಡಿಸಿ ವಿ.ಹಿಂ.ಪ. ಬಜರಂಗದಳ ವತಿಯಿಂದ ಉಜಿರೆಯಲ್ಲಿ ಶ್ರದ್ಧಾಂಜಲಿ ಸಭೆ ಮತ್ತು ಪ್ರತಿಭಟನೆ

Suddi Udaya

ಜಾಗತಿಕ ಯುವ ಶೃಂಗಸಭೆಗೆ ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ವಿದ್ಯಾರ್ಥಿ ಆದಿತ್ಯ ಹೆಚ್.ಎಸ್ ಆಯ್ಕೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ, ಉಜಿರೆ ಸಾನಿದ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!