23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರಕ್ಷಿತ್ ಶಿವರಾಂ ಮನವಿಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳ ಸ್ಪಂದನೆ : ಅರಸಿನಮಕ್ಕಿ ಶಾಲೆಗೆ ಶಿಕ್ಷಕರ ನೇಮಕ

ಬೆಳ್ತಂಗಡಿ:ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅನುದಾನಿತ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ ಏಕೈಕ ಶಿಕ್ಷಕರು ಫೆ.28 ರಂದು ಸೇವಾ ನಿವೃತ್ತಿ ಹೊಂದಿದ್ದು,ಶಾಲೆಯಲ್ಲಿದ್ದ ಓರ್ವ ಶಿಕ್ಷಕರು ಇಲ್ಲದೆ ಶಾಲೆ ಮುಚ್ಚುವು ಪರಿಸ್ಥಿತಿ ನಿರ್ಮಾಣವಾಗಿತ್ತು.

ಶಾಲೆಯ ಆಟದ ಮೈದಾನದಲ್ಲಿ ಇತ್ತೀಚೆಗೆ ನಡೆದ ಅಶ್ವಮೇಧ ಫ್ರೆಂಡ್ಸ್ ಅಯೋಜನೆ ಮಾಡಿದ ವಾಲಿಬಾಲ್ ಪಂದ್ಯಾಟದ ವೇದಿಕೆಯಲ್ಲಿ ಶಾಲೆಯ ಶಿಕ್ಷಕರ ಕೊರತೆಯ ಬಗ್ಗೆ ಶಾಲೆಯ ಸಂಚಾಲಕರಾದ ವಾಮನ್ ತಾಮನ್ಕರ್ ರವರು ಮತ್ತು ಧರ್ಮರಾಜ್ ಅಡಕ್ಕಾಡಿ ರವರು ಈ ವಿಷಯವನ್ನು ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿಗಳಾದ ರಕ್ಷಿತ್ ಶಿವರಾಮ್ ರವರ ಗಮನಕ್ಕೆ ತಂದುಶಾಲೆಗೆ ಶಿಕ್ಷಕರ ನೇಮಕ ಅಗತ್ಯವಾಗಿದ್ದು, ಸರ್ಕಾರದ ಗಮನ ಸೆಳೆಯಬೇಕೆಂದು ಮನವಿ ಮಾಡಿದರು.

ಮರುದಿನದಿಂದ ಕಾರ್ಯಪ್ರವೃತರಾದ ರಕ್ಷಿತ್ ಶಿವರಾಮ್ ರವರು ತಾಲ್ಲೂಕಿನ ಶಿಕ್ಷಣ ಅಧಿಕಾರಿ, ಜಿಲ್ಲೆಯ ಮತ್ತು ರಾಜ್ಯ ಶಿಕ್ಷಣ ಅಧಿಕಾರಿಗಳಿಗೆ ಮನವಿ ಮಾಡಿ ಶಾಲೆಗೆ ಶಿಕ್ಷಕರನ್ನು ನೇಮಿಸಿ ಅವರು ಬಂದು ಶಾಲೆಯಲ್ಲಿ ಅಧಿಕಾರವಹಿಸುವ ತನಕ ಶ್ರಮಿಸಿದರು. ಇದರಿಂದ ಮಕ್ಕಳು, ಪೋಷಕರು ಮತ್ತು ಗ್ರಾಮಸ್ಥರು ಶ್ಲಾಘನೆ ವ್ಯಕ್ತಪಡಿಸಿದರು.

Related posts

ನ.11-13: ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಕೌಶಲ್ಯ ಜ್ಞಾನದ ಉಚಿತ ತರಬೇತಿ

Suddi Udaya

ತಿಮರೋಡಿ ಮನೆಗೆ ಮೂರನೇ ಅಂತಿಮ ನೋಟಿಸ್ ಜಾರಿ ಮಾಡಿದ ಬೆಳ್ತಂಗಡಿ ಪೊಲೀಸರು

Suddi Udaya

ಗುಡ್ಡೆ ಜರಿದು ಶೌಚಾಲಯ ಹಾಗೂ ಮನೆಯ ಮೇಲೆ ಬಿದ್ದು ಸಂಪೂರ್ಣಹಾನಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮ

Suddi Udaya

ನನ್ನ ವಿರುದ್ಧ ಹಿಂದೂಗಳನ್ನು ಎತ್ತಿಕಟ್ಟುವ ಕೆಲಸ ಮಾಡಿದ್ದಾರೆನಾನು ತಪ್ಪು ಮಾಡಿದ್ದರೆ ಸುರುವಿಗೆ ಮಾರಿಗುಡಿ ಅಮ್ಮ ನನಗೆ ಪ್ರಾಯಶ್ಚಿತ ಮಾಡಲಿ,

Suddi Udaya

ಬಂದಾರು-ಕುರಾಯ ಶ್ರೀ ಸದಾಶಿವ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ ಆರಂಭ

Suddi Udaya
error: Content is protected !!