September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹಾಲಿ ಇರುವ 5 MVA ಶಕ್ತಿ ಪರಿವರ್ತಕವನ್ನು 12.5 MVA ಸಾಮರ್ಥ್ಯಕ್ಕೆ ಬದಲಾವಣೆ: ಸಾರ್ವಜನಿಕರಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ

ಬೆಳ್ತಂಗಡಿ: ವೇಣೂರು ಸಬ್ ಸ್ಕ್ರೆಷನ್ ಎರಡು ವಿದ್ಯುತ್ ಫೀಡರ್ಗಳಿದ್ದು ಕಳೆದ ಬಾರಿ ಒಂದು ವಿದ್ಯುತ್ ಫೀಡರನ್ನು 5 ಮೆಗಾವೋಲ್ಟ್ ನಿಂದ 8 ಮೆಗಾ ವೋಲ್ಟ್ ಗೆ ಪರಿವರ್ತಿಸಿ ವೇಣೂರು ಮತ್ತು ಸುತ್ತ ಮುತ್ತಲಿನ ಗ್ರಾಮದ ರೈತರು ಮತ್ತು ಗ್ರಾಮಸ್ಥರಿಗೆ ತುಂಬಾ ಅನುಕೂಲವಾಗಿದೆ.

ಇದೀಗ ಆಗಾಗ ವಿದ್ಯುತ್ ಕಡಿತವಾಗುವುದರಿಂದ ಈಗ ಬಾಕಿ ಇರುವ ವಿದ್ಯುತ್ ಫೀಡರನ್ನು ಸಹ ಐದು ಮೆಗಾ ವೋಲ್ಟ್ ನಿಂದ 12.5 MVA ಮೆಗಾ ವೋಲ್ಟ್ ಪರಿವರ್ತಿಸಿ ವಿದ್ಯುತ್ ಸಮಸ್ಯೆಯನ್ನು ಪರಿಹರಿಸುವಂತೆ ಸರ್ಕಾರದ ಗಮನವನ್ನು ಸೆಳೆಯಬೇಕೆಂದು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರ ಮೂಲಕ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಿದರು. ಮನವಿಗೆ ಸರ್ಕಾರವು ಪೂರಕವಾಗಿ ಸ್ಪಂದಿಸಿ ಇಂದು ಇಲಾಖೆಯು ವೇಣೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹಾಲಿ ಇರುವ 5 MVA ಶಕ್ತಿ ಪರಿವರ್ತಕವನ್ನು 12.5 MVA ಸಾಮರ್ಥ್ಯಕ್ಕೆ ಬದಲಾವಣೆ ಮಾಡಿ ಅಳವಡಿಸಲಾಯಿತು.

ಈ ಮೂಲಕ ಈ ಭಾಗದ ಬಹು ಕಾಲದ ರೈತರ ಸಾರ್ವಜನಿಕರ ಬೇಡಿಕೆ ಈಡೇದಂತಾಯಿತು ಎಂದು ಸಾರ್ವಜನಿಕರು ಸರ್ಕಾರಕ್ಕೆ ಮತ್ತು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆಯನ್ನು ಸಲ್ಲಿಸಿದರು.

Related posts

ಆ.8: ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಕೃಷ್ಣ ಶೆಟ್ಟಿರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಕುವೆಟ್ಟು: ಮಹಮ್ಮಾಯಿ ದೇವಿಯ ಮಾರಿ ಪೂಜೆ ಹಾಗೂ ಗುಳಿಗ ದೈವದ ನೇಮೋತ್ಸವ

Suddi Udaya

ಬೆಳ್ತಂಗಡಿ: ತಾಲೂಕು ಯುವಜನ ಒಕ್ಕೂಟದ ಸಭೆ

Suddi Udaya

ಜ.30: ಲಾಯಿಲ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀ ಗುರುಪಾದುಕಾ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya

ಧರ್ಮಸ್ಥಳ ನೇರ್ತನೆಯಲ್ಲಿ ಕಾಡಾನೆ ದಾಳಿ :ಕೃಷಿಗೆ ಹಾನಿ   

Suddi Udaya

ಕುವೆಟ್ಟು; ವಿಕಲಚೇತನರ ಸಮನ್ವಯ ಗ್ರಾಮಸಭೆ : ವಿಕಲಚೇತನರಿಗೆ ರೂ.2.15 ಲಕ್ಷ ನೆರವಿನ ಚೆಕ್ ವಿತರಣೆ

Suddi Udaya
error: Content is protected !!