March 13, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸಹಾಯಕ ಇಂಜಿನಿಯರ್ ಗಂಗಾಧರ ಬಳಂಜರವರಿಗೆ ಸೇವಾ ನಿವೃತ್ತಿ

ಬೆಳ್ತಂಗಡಿ: ಸುದೀರ್ಘ 36 ವರ್ಷಗಳ ಕಾಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸಹಾಯಕ ಇಂಜಿನಿಯರ್ ಆಗಿ ಸೇವೆ ಸಲ್ಲಿಸಿದ ಗಂಗಾಧರ ಬಳಂಜರವರು ಸೇವೆಯಿಂದ ಫೆ.28 ರಂದು ನಿವೃತ್ತಿ ಹೊಂದಿದ್ದಾರೆ.1989 ರಲ್ಲಿ ಗಂಗಾಧರ ಅವರು ಕರ್ತವ್ಯಕ್ಕೆ ಹಾಜರಾಗಿ ಪ್ರಾರಂಭದಲ್ಲಿ ಮಂಗಳೂರು ವಿಭಾಗಕ್ಕೆ ನಿಯೋಜನೆಗೊಂಡರು.

ನಂತರ ಹಾಸನ ವಿಭಾಗ, ಮೈಸೂರು ನಗರ ಸಾರಿಗೆ ವಿಭಾಗ ಮಂಗಳೂರು ವಿಭಾಗದಲ್ಲಿ ಸೇವೆ ಸಲ್ಲಿಸಿ ಕಳೆದ ಏಳು ತಿಂಗಳ ಹಿಂದೆ ಭಡ್ತಿ ಗೊಂಡು ಪುತ್ತೂರು ವಿಭಾಗಕ್ಕೆ ನಿಯೋಜನೆಗೊಂಡಿರುತ್ತಾರೆ.ಮೈಸೂರು ನಗರದಲ್ಲಿ ಗ್ರಾಮಾಂತರ ಬಸ್ ನಿಲ್ದಾಣ,ಕುವೆಂಪುನಗರ ಬಸ್ ನಿಲ್ದಾಣ ಮತ್ತು ನಗರ ಸಾರಿಗೆ ಬಸ್ ನಿಲ್ದಾಣಗಳು ಇವರ ಮೇಲ್ವಿಚಾರಣೆಯಲ್ಲಿ ನಿರ್ಮಾಣವಾಗಿರುತದೆ.

ಹಾಸನದಲ್ಲಿ ಹೈಟೆಕ್ ನಗರ ಸಾರಿಗೆ ಬಸ್ ನಿಲ್ದಾಣ, ಸುಬ್ರಮಣ್ಯ, ಸುಳ್ಯ, ವಿಟ್ಲ, ಉಡುಪಿ ಹಾಗೂ ಬೈಂದೂರುನಲ್ಲಿ ಇವರ ಮಲ್ವಿಚಾರಣೆಯಲ್ಲಿ ಬಸ್ ನಿಲ್ದಾಣಗಳು ನಿರ್ಮಾಣವಾಗಿರುತದೆ. ಇವರು ಬಳಂಜ ಗ್ರಾಮದ ಪರಾರಿ ನಿವಾಸಿಯಾಗಿದ್ದು,ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಸದಸ್ಯ. ಪ್ರಸ್ತುತ ಮಂಗಳೂರಿನಲ್ಲಿ ಪತ್ನಿ ವಿಜಯಲಕ್ಷ್ಮಿ, ಪುತ್ರ ಚಿರಂತ್ ರವರೊಂದಿಗೆ ವಾಸವಾಗಿದ್ದಾರೆ.

Related posts

ಯಕ್ಷ ಪ್ರಣವ -2023 ಅಂತರ್ ಕಾಲೇಜು ಮಟ್ಟದ ಯಕ್ಷಗಾನ ಸ್ಪರ್ಧೆ: ಎಸ್.ಡಿ.ಎಮ್. ಕಾಲೇಜಿಗೆ ತೃತೀಯ ಸ್ಥಾನ

Suddi Udaya

ಸುಲ್ಕೇರಿಮೊಗ್ರು: ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆಯಿಂದ ಬಿರ್ವೆರೆ ಕೆಸರ್ದ ಗೊಬ್ಬು ಕಾರ್ಯಕ್ರಮ

Suddi Udaya

ಮದರಂಗಿ ಶಾಸ್ತ್ರದ ನಡುವೆ ಮತಚಲಾಯಿಸಿದ ಮದುಮಗಳು: ಮಲವಂತಿಗೆ ಗ್ರಾಮದ ಮೋಹಿನಿಯವರು ಮತಚಲಾಯಿಸಿ ಎಲ್ಲರ ಗಮನ ಸೆಳೆದರು

Suddi Udaya

ಬೆಳ್ತಂಗಡಿ: ಪ.ಪಂ. ಮಾಜಿ ನಾಮನಿರ್ದೇಶನ ಸದಸ್ಯ ಪ್ರಕಾಶ್ ಆಚಾರ್ಯ ರವರ ಮನೆಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

Suddi Udaya

ಉಜಿರೆಯ ಪಾಕತಜ್ಞ ಶ್ರೀನಿವಾಸ ಕಾರಂತ ನಿಧನ 

Suddi Udaya

ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದಿಂದ ಹೊಗೆ ಮನೆಗೆ ಬೆಂಕಿ‌ ಬಿದ್ದು ನಷ್ಟ ಅನುಭವಿಸಿದ ಕಿನ್ನಿ ಗೌಡರಿಗೆ ಪರಿಹಾರ ನಿಧಿ ಹಸ್ತಾಂತರ

Suddi Udaya
error: Content is protected !!