27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸಹಾಯಕ ಇಂಜಿನಿಯರ್ ಗಂಗಾಧರ ಬಳಂಜರವರಿಗೆ ಸೇವಾ ನಿವೃತ್ತಿ

ಬೆಳ್ತಂಗಡಿ: ಸುದೀರ್ಘ 36 ವರ್ಷಗಳ ಕಾಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸಹಾಯಕ ಇಂಜಿನಿಯರ್ ಆಗಿ ಸೇವೆ ಸಲ್ಲಿಸಿದ ಗಂಗಾಧರ ಬಳಂಜರವರು ಸೇವೆಯಿಂದ ಫೆ.28 ರಂದು ನಿವೃತ್ತಿ ಹೊಂದಿದ್ದಾರೆ.1989 ರಲ್ಲಿ ಗಂಗಾಧರ ಅವರು ಕರ್ತವ್ಯಕ್ಕೆ ಹಾಜರಾಗಿ ಪ್ರಾರಂಭದಲ್ಲಿ ಮಂಗಳೂರು ವಿಭಾಗಕ್ಕೆ ನಿಯೋಜನೆಗೊಂಡರು.

ನಂತರ ಹಾಸನ ವಿಭಾಗ, ಮೈಸೂರು ನಗರ ಸಾರಿಗೆ ವಿಭಾಗ ಮಂಗಳೂರು ವಿಭಾಗದಲ್ಲಿ ಸೇವೆ ಸಲ್ಲಿಸಿ ಕಳೆದ ಏಳು ತಿಂಗಳ ಹಿಂದೆ ಭಡ್ತಿ ಗೊಂಡು ಪುತ್ತೂರು ವಿಭಾಗಕ್ಕೆ ನಿಯೋಜನೆಗೊಂಡಿರುತ್ತಾರೆ.ಮೈಸೂರು ನಗರದಲ್ಲಿ ಗ್ರಾಮಾಂತರ ಬಸ್ ನಿಲ್ದಾಣ,ಕುವೆಂಪುನಗರ ಬಸ್ ನಿಲ್ದಾಣ ಮತ್ತು ನಗರ ಸಾರಿಗೆ ಬಸ್ ನಿಲ್ದಾಣಗಳು ಇವರ ಮೇಲ್ವಿಚಾರಣೆಯಲ್ಲಿ ನಿರ್ಮಾಣವಾಗಿರುತದೆ.

ಹಾಸನದಲ್ಲಿ ಹೈಟೆಕ್ ನಗರ ಸಾರಿಗೆ ಬಸ್ ನಿಲ್ದಾಣ, ಸುಬ್ರಮಣ್ಯ, ಸುಳ್ಯ, ವಿಟ್ಲ, ಉಡುಪಿ ಹಾಗೂ ಬೈಂದೂರುನಲ್ಲಿ ಇವರ ಮಲ್ವಿಚಾರಣೆಯಲ್ಲಿ ಬಸ್ ನಿಲ್ದಾಣಗಳು ನಿರ್ಮಾಣವಾಗಿರುತದೆ. ಇವರು ಬಳಂಜ ಗ್ರಾಮದ ಪರಾರಿ ನಿವಾಸಿಯಾಗಿದ್ದು,ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಸದಸ್ಯ. ಪ್ರಸ್ತುತ ಮಂಗಳೂರಿನಲ್ಲಿ ಪತ್ನಿ ವಿಜಯಲಕ್ಷ್ಮಿ, ಪುತ್ರ ಚಿರಂತ್ ರವರೊಂದಿಗೆ ವಾಸವಾಗಿದ್ದಾರೆ.

Related posts

ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದಿಂದ ವಿದ್ಯಾರ್ಥಿಗಳಿಗೆ ವಿಜಯವಾಣಿ ವಿದ್ಯಾರ್ಥಿ ಮಿತ್ರ ಕೊಡುಗೆ

Suddi Udaya

ಜು.13: ಗುರುವಾಯನಕೆರೆ ವಿದ್ಯುತ್ ನಿಲುಗಡೆ

Suddi Udaya

ಲಾಯಿಲ: ಬೆರ್ಕೆ ರಸ್ತೆಯಲ್ಲಿ ಕಸ ಎಸೆದವರಿಂದಲೇ ವಿಲೇವಾರಿ ಮಾಡಿ ದಂಡ ವಿಧಿಸಿದ ಲಾಯಿಲ ಗ್ರಾ.ಪಂ.

Suddi Udaya

ಕಡಿರುದ್ಯಾವರ: ಹೇಡ್ಯದಲ್ಲಿ ಪಿಕಪ್ ಮತ್ತು ಕಾರು ಡಿಕ್ಕಿ

Suddi Udaya

ಪದ್ಮುಂಜ ಪ್ರಾ.ಕೃ.ಪ.ಸ. ಸಂಘದಲ್ಲಿ ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ ಪ್ರಯುಕ್ತ “ಏಕ್ ಪೇಡ್ ಮಾ ಕೇ ನಾಮ್ ” ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಪ್ರತಿಭಾ ಕಾರಂಜಿ ಸ್ಪರ್ಧೆ: ವಾಣಿ ಆಂ.ಮಾ. ಪ್ರಾ. ಶಾಲೆಗೆ ಹಲವು ಪ್ರಶಸ್ತಿ

Suddi Udaya
error: Content is protected !!