22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸಹಾಯಕ ಇಂಜಿನಿಯರ್ ಗಂಗಾಧರ ಬಳಂಜರವರಿಗೆ ಸೇವಾ ನಿವೃತ್ತಿ

ಬೆಳ್ತಂಗಡಿ: ಸುದೀರ್ಘ 36 ವರ್ಷಗಳ ಕಾಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸಹಾಯಕ ಇಂಜಿನಿಯರ್ ಆಗಿ ಸೇವೆ ಸಲ್ಲಿಸಿದ ಗಂಗಾಧರ ಬಳಂಜರವರು ಸೇವೆಯಿಂದ ಫೆ.28 ರಂದು ನಿವೃತ್ತಿ ಹೊಂದಿದ್ದಾರೆ.1989 ರಲ್ಲಿ ಗಂಗಾಧರ ಅವರು ಕರ್ತವ್ಯಕ್ಕೆ ಹಾಜರಾಗಿ ಪ್ರಾರಂಭದಲ್ಲಿ ಮಂಗಳೂರು ವಿಭಾಗಕ್ಕೆ ನಿಯೋಜನೆಗೊಂಡರು.

ನಂತರ ಹಾಸನ ವಿಭಾಗ, ಮೈಸೂರು ನಗರ ಸಾರಿಗೆ ವಿಭಾಗ ಮಂಗಳೂರು ವಿಭಾಗದಲ್ಲಿ ಸೇವೆ ಸಲ್ಲಿಸಿ ಕಳೆದ ಏಳು ತಿಂಗಳ ಹಿಂದೆ ಭಡ್ತಿ ಗೊಂಡು ಪುತ್ತೂರು ವಿಭಾಗಕ್ಕೆ ನಿಯೋಜನೆಗೊಂಡಿರುತ್ತಾರೆ.ಮೈಸೂರು ನಗರದಲ್ಲಿ ಗ್ರಾಮಾಂತರ ಬಸ್ ನಿಲ್ದಾಣ,ಕುವೆಂಪುನಗರ ಬಸ್ ನಿಲ್ದಾಣ ಮತ್ತು ನಗರ ಸಾರಿಗೆ ಬಸ್ ನಿಲ್ದಾಣಗಳು ಇವರ ಮೇಲ್ವಿಚಾರಣೆಯಲ್ಲಿ ನಿರ್ಮಾಣವಾಗಿರುತದೆ.

ಹಾಸನದಲ್ಲಿ ಹೈಟೆಕ್ ನಗರ ಸಾರಿಗೆ ಬಸ್ ನಿಲ್ದಾಣ, ಸುಬ್ರಮಣ್ಯ, ಸುಳ್ಯ, ವಿಟ್ಲ, ಉಡುಪಿ ಹಾಗೂ ಬೈಂದೂರುನಲ್ಲಿ ಇವರ ಮಲ್ವಿಚಾರಣೆಯಲ್ಲಿ ಬಸ್ ನಿಲ್ದಾಣಗಳು ನಿರ್ಮಾಣವಾಗಿರುತದೆ. ಇವರು ಬಳಂಜ ಗ್ರಾಮದ ಪರಾರಿ ನಿವಾಸಿಯಾಗಿದ್ದು,ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಸದಸ್ಯ. ಪ್ರಸ್ತುತ ಮಂಗಳೂರಿನಲ್ಲಿ ಪತ್ನಿ ವಿಜಯಲಕ್ಷ್ಮಿ, ಪುತ್ರ ಚಿರಂತ್ ರವರೊಂದಿಗೆ ವಾಸವಾಗಿದ್ದಾರೆ.

Related posts

ಅಂಡಿಂಜೆ: ಕಾರು ಡಿಕ್ಕಿ ಹೊಡೆದು 5 ವರ್ಷದ ಬಾಲಕ ಸಾವು

Suddi Udaya

ಜೂ.19: ದರ್ಭೆತಡ್ಕ ಸುದೆಗಂಡಿಯಲ್ಲಿ ಕಿರು ಸೇತುವೆಯ ದುರಸ್ತಿ ಕಾರ್ಯ ನಡೆಸಲು ಗ್ರಾಮಸ್ಥರ ಸಭೆ

Suddi Udaya

ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಆದೂರು ಪೇರಲ್ ನ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ದೇವರಿಗೆ ವಿಶೇಷ ಭಜನಾ ಕಾರ್ಯಕ್ರಮ

Suddi Udaya

ಮಹಿಳಾ ವಾಲಿಬಾಲ್ ಪಂದ್ಯಾಟ: ಉಜಿರೆ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ಕಾರ್ಯತಂತ್ರ ಯೋಜನೆ ತರಬೇತಿ ಕಾರ್ಯಾಗಾರ

Suddi Udaya

ಶ್ರೀರಾಮ ಕ್ಷೇತ್ರ ಕನ್ಯಾಡಿಯ ಅಯೋಧ್ಯೆ ಶಾಖಾ ಮಠ ನಿರ್ಮಾಣ ಸಮಿತಿಯ ಅಧ್ಯಕ್ಷರಾಗಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ನೇಮಕ

Suddi Udaya
error: Content is protected !!