April 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂಟರ ಮಹಿಳಾ ವಿಭಾಗದಿಂದ “ಸ್ಪರ್ಶ” ಹೆಣ್ಣು ಮಕ್ಕಳ ಜಾಗೃತಿ ವಿಶೇಷ ಕಾರ್ಯಕ್ರಮ

ಬೆಳ್ತಂಗಡಿ : ಬಂಟರ ಮಹಿಳಾ ವಿಭಾಗದಿಂದ ಮಹಿಳಾ ದಿನಾಚರಣೆ ಅಂಗವಾಗಿ ಧರ್ಮಸ್ಥಳದ ಉನ್ನತೀಕರಿಸಿದ ಹಿ.ಪ್ರಾ.ಶಾಲೆಯಲ್ಲಿ ಮಾ.5 ರಂದು ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಪ್ರಸ್ತುತ ಕಾಲಮಾನದಲ್ಲಿ ಹೆಣ್ಣು ಮಕ್ಕಳು ದುರಿಸುತ್ತಿರುವ ಲೈಂಗಿಕ ಹಾಗೂ ದೈಹಿಕ ದೌರ್ಜನ್ಯದ ಬಗ್ಗೆ ಹೆಣ್ಣು ಮಕ್ಕಳಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ʼಸ್ಪರ್ಶʼ ಹೆಣ್ಣು ಮಕ್ಕಳ ಜಾಗೃತಿ ಅನ್ನುವ ಕಾರ್ಯಕ್ರಮ ಜರುಗಿತು.

ಆಳ್ವಾಸ್‌ ವೆಲ್‌ ನೆಸ್‌ ಸೆಂಟರ್‌ನ ನಿರ್ದೇಶಕರಾದ ಡಾ.ದೀಪಾ ಕೊಠಾರಿ ಅವರು ಮಕ್ಕಳಿಗೆ ಒಳ್ಳೆಯ ಸ್ಪರ್ಶ, ಅಪಾಯದ ಸ್ಪರ್ಶದ ಕುರಿತಾಗಿ ಮಾಹಿತಿಯನ್ನು ನೀಡಿದರು.

ಕಾರ್ಯಕ್ರಮ ಉದ್ಘಾಟನಾ ಸಮಾರಂಭದಲ್ಲಿ ಧರ್ಮಸ್ಥಳದ ಉನ್ನತೀಕರಿಸಿದ ಹಿ.ಪ್ರಾ.ಶಾಲೆ ಮುಖ್ಯ ಶಿಕ್ಷಕಿ ಪುಷ್ಪಾ ಎನ್‌, ಶಾಲಾ ಎಸ್ ಡಿ ಎಂ ಸಿ ಉಪಾಧ್ಯಕ್ಷೆ ಚಂದ್ರಾವತಿ ಗೌಡ, ಉಜಿರೆ ವಲಯ ಬಂಟರ ಸಂಘದ ಅಧ್ಯಕ್ಷೆ ವನಿತಾ ಶೆಟ್ಟಿ , ಬಂಟರ ಮಹಿಳಾ ವಿಭಾಗದ ಉಪಾಧ್ಯಕ್ಷೆ ಸಂಗೀತಾ ಶೆಟ್ಟಿ, ಕಾರ್ಯದರ್ಶಿ ಶ್ರೇಯಾ ಶೆಟ್ಟಿ, ಕೋಶಾಧಿಕಾರಿ ರಕ್ಷಿತಾ ಶೆಟ್ಟಿ, ನಿರ್ದೇಶಕರುಗಳಾದ ಸಂಸ್ಕೃತಿ ಶೆಟ್ಟಿ, ವಿಂದ್ಯಾ ಶೆಟ್ಟಿ, ಪವಿತ್ರಾ ಶೆಟ್ಟಿ, ಉಪಸ್ಥಿತರಿದ್ದರು.

ಬಂಟರ ಮಹಿಳಾ ವಿಭಾಗ ಅಧ್ಯಕ್ಷೆ ಜಯಲಕ್ಷ್ಮಿ ನವೀನ್‌ ಸಾಮಾನಿ ಅತಿಥಿ ಗಣ್ಯರನ್ನು ಸ್ವಾಗತಿಸಿ ಪ್ರಾಸ್ತಾವಿಕ ಮಾತನ್ನಾಡಿದರು. ನಿರ್ದೇಶಕಿ ಉಷಾ ಶೆಟ್ಟಿ ಕಾರ್ಯಕ್ರಮ ನಿರೂಪಣೆ ಮಾಡಿದರು.

Related posts

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಫೆ.19: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜಾತ್ರೋತ್ಸವದ ಮಹಾರಥೋತ್ಸವದ ಪ್ರಯುಕ್ತ ‘ಬೆಳ್ತಂಗಡಿ ಮ್ಯೂಸಿಕಲ್ ನೈಟ್ಸ್’ ಹಾಗೂ ಬೀಟ್ ರಾಕರ್ಸ್ ಡ್ಯಾನ್ಸ್ ಇವರಿಂದ ಡಾನ್ಸ್ ಫ್ಲೇಮ್

Suddi Udaya

ಗುರುವಾಯನಕೆರೆ: ಅನಾರೋಗ್ಯದಿಂದ ಬಳಲುತ್ತಿರುವ ಆಟೋ ಚಾಲಕ ರಾಜೇಶ್ ಪೂಜಾರಿಯವರಿಗೆ ಕುವೆಟ್ಟು ಬಿಜೆಪಿ ಶಕ್ತಿ ಕೇಂದ್ರ ಹಾಗೂ ಸಾಯಿರಾಮ್ ಫ್ರೆಂಡ್ಸ್ ಶಕ್ತಿನಗರ ವತಿಯಿಂದ ರೂ. 25 ಸಾವಿರ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ನಾಳ ದೇವಸ್ಥಾನದಲ್ಲಿ ಮಾತೃ ಮಂಡಳಿ ರಚನೆ: ಅಧ್ಯಕ್ಷರಾಗಿ ಮಮತ ವಿ‌.ಆಳ್ವ, ಕಾರ್ಯದರ್ಶಿಯಾಗಿ ವಿನೋದ ಕೆ.ಆಯ್ಕೆ

Suddi Udaya

ಪುಂಜಾಲಕಟ್ಟೆ ಸ್ಪಂದನ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆ: ಪದಾಧಿಕಾರಿಗಳ ಆಯ್ಕೆ

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!