23.7 C
ಪುತ್ತೂರು, ಬೆಳ್ತಂಗಡಿ
June 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರಕ್ಷಿತ್ ಶಿವರಾಂ ಮನವಿಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳ ಸ್ಪಂದನೆ : ಅರಸಿನಮಕ್ಕಿ ಶಾಲೆಗೆ ಶಿಕ್ಷಕರ ನೇಮಕ

ಬೆಳ್ತಂಗಡಿ:ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅನುದಾನಿತ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ ಏಕೈಕ ಶಿಕ್ಷಕರು ಫೆ.28 ರಂದು ಸೇವಾ ನಿವೃತ್ತಿ ಹೊಂದಿದ್ದು,ಶಾಲೆಯಲ್ಲಿದ್ದ ಓರ್ವ ಶಿಕ್ಷಕರು ಇಲ್ಲದೆ ಶಾಲೆ ಮುಚ್ಚುವು ಪರಿಸ್ಥಿತಿ ನಿರ್ಮಾಣವಾಗಿತ್ತು.

ಶಾಲೆಯ ಆಟದ ಮೈದಾನದಲ್ಲಿ ಇತ್ತೀಚೆಗೆ ನಡೆದ ಅಶ್ವಮೇಧ ಫ್ರೆಂಡ್ಸ್ ಅಯೋಜನೆ ಮಾಡಿದ ವಾಲಿಬಾಲ್ ಪಂದ್ಯಾಟದ ವೇದಿಕೆಯಲ್ಲಿ ಶಾಲೆಯ ಶಿಕ್ಷಕರ ಕೊರತೆಯ ಬಗ್ಗೆ ಶಾಲೆಯ ಸಂಚಾಲಕರಾದ ವಾಮನ್ ತಾಮನ್ಕರ್ ರವರು ಮತ್ತು ಧರ್ಮರಾಜ್ ಅಡಕ್ಕಾಡಿ ರವರು ಈ ವಿಷಯವನ್ನು ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿಗಳಾದ ರಕ್ಷಿತ್ ಶಿವರಾಮ್ ರವರ ಗಮನಕ್ಕೆ ತಂದುಶಾಲೆಗೆ ಶಿಕ್ಷಕರ ನೇಮಕ ಅಗತ್ಯವಾಗಿದ್ದು, ಸರ್ಕಾರದ ಗಮನ ಸೆಳೆಯಬೇಕೆಂದು ಮನವಿ ಮಾಡಿದರು.

ಮರುದಿನದಿಂದ ಕಾರ್ಯಪ್ರವೃತರಾದ ರಕ್ಷಿತ್ ಶಿವರಾಮ್ ರವರು ತಾಲ್ಲೂಕಿನ ಶಿಕ್ಷಣ ಅಧಿಕಾರಿ, ಜಿಲ್ಲೆಯ ಮತ್ತು ರಾಜ್ಯ ಶಿಕ್ಷಣ ಅಧಿಕಾರಿಗಳಿಗೆ ಮನವಿ ಮಾಡಿ ಶಾಲೆಗೆ ಶಿಕ್ಷಕರನ್ನು ನೇಮಿಸಿ ಅವರು ಬಂದು ಶಾಲೆಯಲ್ಲಿ ಅಧಿಕಾರವಹಿಸುವ ತನಕ ಶ್ರಮಿಸಿದರು. ಇದರಿಂದ ಮಕ್ಕಳು, ಪೋಷಕರು ಮತ್ತು ಗ್ರಾಮಸ್ಥರು ಶ್ಲಾಘನೆ ವ್ಯಕ್ತಪಡಿಸಿದರು.

Related posts

ಪದ್ಮುಂಜ: ರವಿಚಂದ್ರ ಶೆಟ್ಟಿರವರ ಗೃಹಪ್ರವೇಶದ ಕಾರ್ಯಕ್ರಮದಲ್ಲಿ ಮುಸ್ಲಿಂ ಬಾಂಧವರಿಗೆ ಇಫ್ತಾರ್ ಕೂಟ

Suddi Udaya

ಬೆಳ್ತಂಗಡಿ: ಕ್ಯಾಂಪ್ಕೊ ಸಂಸ್ಥೆಯ ‘ಸಾಂತ್ವನ’ ಯೋಜನೆಯಡಿಯಲ್ಲಿ ಸಹಾಯಧನ ವಿತರಣೆ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ.ಯೋಜನೆ, ನಾಲ್ಕೂರು ಎ.ಬಿ ಒಕ್ಕೂಟದ ಪದಗ್ರಹಣ ಸಮಾರಂಭ: ನವಜೀವನ ಸಮಿತಿ ಸದಸ್ಯರಿಗೆ ಹಾಗೂ ಹಿರಿಯ ಸದಸ್ಯರಿಗೆ ಸನ್ಮಾನ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಗೆ ಶೇ. 88.2 ಫಲಿತಾಂಶ

Suddi Udaya

ಶುಭೋದಯ ಸಂಜೀವಿನಿ ಗ್ರಾಮ ಪಂಚಾಯತ್‌ ಮಟ್ಟದ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya
error: Content is protected !!