July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರಕ್ಷಿತ್ ಶಿವರಾಂ ಮನವಿಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳ ಸ್ಪಂದನೆ : ಅರಸಿನಮಕ್ಕಿ ಶಾಲೆಗೆ ಶಿಕ್ಷಕರ ನೇಮಕ

ಬೆಳ್ತಂಗಡಿ:ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅನುದಾನಿತ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ ಏಕೈಕ ಶಿಕ್ಷಕರು ಫೆ.28 ರಂದು ಸೇವಾ ನಿವೃತ್ತಿ ಹೊಂದಿದ್ದು,ಶಾಲೆಯಲ್ಲಿದ್ದ ಓರ್ವ ಶಿಕ್ಷಕರು ಇಲ್ಲದೆ ಶಾಲೆ ಮುಚ್ಚುವು ಪರಿಸ್ಥಿತಿ ನಿರ್ಮಾಣವಾಗಿತ್ತು.

ಶಾಲೆಯ ಆಟದ ಮೈದಾನದಲ್ಲಿ ಇತ್ತೀಚೆಗೆ ನಡೆದ ಅಶ್ವಮೇಧ ಫ್ರೆಂಡ್ಸ್ ಅಯೋಜನೆ ಮಾಡಿದ ವಾಲಿಬಾಲ್ ಪಂದ್ಯಾಟದ ವೇದಿಕೆಯಲ್ಲಿ ಶಾಲೆಯ ಶಿಕ್ಷಕರ ಕೊರತೆಯ ಬಗ್ಗೆ ಶಾಲೆಯ ಸಂಚಾಲಕರಾದ ವಾಮನ್ ತಾಮನ್ಕರ್ ರವರು ಮತ್ತು ಧರ್ಮರಾಜ್ ಅಡಕ್ಕಾಡಿ ರವರು ಈ ವಿಷಯವನ್ನು ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿಗಳಾದ ರಕ್ಷಿತ್ ಶಿವರಾಮ್ ರವರ ಗಮನಕ್ಕೆ ತಂದುಶಾಲೆಗೆ ಶಿಕ್ಷಕರ ನೇಮಕ ಅಗತ್ಯವಾಗಿದ್ದು, ಸರ್ಕಾರದ ಗಮನ ಸೆಳೆಯಬೇಕೆಂದು ಮನವಿ ಮಾಡಿದರು.

ಮರುದಿನದಿಂದ ಕಾರ್ಯಪ್ರವೃತರಾದ ರಕ್ಷಿತ್ ಶಿವರಾಮ್ ರವರು ತಾಲ್ಲೂಕಿನ ಶಿಕ್ಷಣ ಅಧಿಕಾರಿ, ಜಿಲ್ಲೆಯ ಮತ್ತು ರಾಜ್ಯ ಶಿಕ್ಷಣ ಅಧಿಕಾರಿಗಳಿಗೆ ಮನವಿ ಮಾಡಿ ಶಾಲೆಗೆ ಶಿಕ್ಷಕರನ್ನು ನೇಮಿಸಿ ಅವರು ಬಂದು ಶಾಲೆಯಲ್ಲಿ ಅಧಿಕಾರವಹಿಸುವ ತನಕ ಶ್ರಮಿಸಿದರು. ಇದರಿಂದ ಮಕ್ಕಳು, ಪೋಷಕರು ಮತ್ತು ಗ್ರಾಮಸ್ಥರು ಶ್ಲಾಘನೆ ವ್ಯಕ್ತಪಡಿಸಿದರು.

Related posts

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಹರಿದ್ವಾರ-ರಿಷಿಕೇಶ್ ಯಾತ್ರೆಯಲ್ಲಿ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ಮಕ್ಕಳಿಗೆ ಕೃಷ್ಣ ವೇಷ ಸ್ಪರ್ಧೆ ,ಮುದ್ದು ಮಕ್ಕಳಾಟವೇ ಕೃಷ್ಣ ಆಟ: ನೂರಾರು ಕೃಷ್ಣವೇಷ ಸ್ಪರ್ಧಿಗಳು ಭಾಗಿ,

Suddi Udaya

ಅಳದಂಗಡಿ: ಕಾಂಗ್ರೆಸ್ ಪಕ್ಷದ ಕಾರ್ಯಾಲಯ ಹಾಗೂ ಸೇವಾ ಸಿಂಧು ಕೇಂದ್ರದ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ಬಜಿರೆ :ನರದ ಸಮಸ್ಯೆಯಿಂದ ಬಳಲುತ್ತಿರುವ ಮಾಲತಿಯವರಿಗೆ ವೇಣೂರು ಯುವವಾಹಿನಿ ಘಟಕದ ವತಿಯಿಂದ ಮಂಚ ಕೊಡುಗೆ

Suddi Udaya
error: Content is protected !!