23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರಕ್ಷಿತ್ ಶಿವರಾಂ ಮನವಿಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳ ಸ್ಪಂದನೆ : ಅರಸಿನಮಕ್ಕಿ ಶಾಲೆಗೆ ಶಿಕ್ಷಕರ ನೇಮಕ

ಬೆಳ್ತಂಗಡಿ:ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅನುದಾನಿತ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ ಏಕೈಕ ಶಿಕ್ಷಕರು ಫೆ.28 ರಂದು ಸೇವಾ ನಿವೃತ್ತಿ ಹೊಂದಿದ್ದು,ಶಾಲೆಯಲ್ಲಿದ್ದ ಓರ್ವ ಶಿಕ್ಷಕರು ಇಲ್ಲದೆ ಶಾಲೆ ಮುಚ್ಚುವು ಪರಿಸ್ಥಿತಿ ನಿರ್ಮಾಣವಾಗಿತ್ತು.

ಶಾಲೆಯ ಆಟದ ಮೈದಾನದಲ್ಲಿ ಇತ್ತೀಚೆಗೆ ನಡೆದ ಅಶ್ವಮೇಧ ಫ್ರೆಂಡ್ಸ್ ಅಯೋಜನೆ ಮಾಡಿದ ವಾಲಿಬಾಲ್ ಪಂದ್ಯಾಟದ ವೇದಿಕೆಯಲ್ಲಿ ಶಾಲೆಯ ಶಿಕ್ಷಕರ ಕೊರತೆಯ ಬಗ್ಗೆ ಶಾಲೆಯ ಸಂಚಾಲಕರಾದ ವಾಮನ್ ತಾಮನ್ಕರ್ ರವರು ಮತ್ತು ಧರ್ಮರಾಜ್ ಅಡಕ್ಕಾಡಿ ರವರು ಈ ವಿಷಯವನ್ನು ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿಗಳಾದ ರಕ್ಷಿತ್ ಶಿವರಾಮ್ ರವರ ಗಮನಕ್ಕೆ ತಂದುಶಾಲೆಗೆ ಶಿಕ್ಷಕರ ನೇಮಕ ಅಗತ್ಯವಾಗಿದ್ದು, ಸರ್ಕಾರದ ಗಮನ ಸೆಳೆಯಬೇಕೆಂದು ಮನವಿ ಮಾಡಿದರು.

ಮರುದಿನದಿಂದ ಕಾರ್ಯಪ್ರವೃತರಾದ ರಕ್ಷಿತ್ ಶಿವರಾಮ್ ರವರು ತಾಲ್ಲೂಕಿನ ಶಿಕ್ಷಣ ಅಧಿಕಾರಿ, ಜಿಲ್ಲೆಯ ಮತ್ತು ರಾಜ್ಯ ಶಿಕ್ಷಣ ಅಧಿಕಾರಿಗಳಿಗೆ ಮನವಿ ಮಾಡಿ ಶಾಲೆಗೆ ಶಿಕ್ಷಕರನ್ನು ನೇಮಿಸಿ ಅವರು ಬಂದು ಶಾಲೆಯಲ್ಲಿ ಅಧಿಕಾರವಹಿಸುವ ತನಕ ಶ್ರಮಿಸಿದರು. ಇದರಿಂದ ಮಕ್ಕಳು, ಪೋಷಕರು ಮತ್ತು ಗ್ರಾಮಸ್ಥರು ಶ್ಲಾಘನೆ ವ್ಯಕ್ತಪಡಿಸಿದರು.

Related posts

ಸೌತಡ್ಕ ಮಹಾಗಣಪತಿ ದೇವಸ್ಥಾನ: ವ್ಯವಸ್ಥಾಪನಾ ಸಮಿತಿಯ 9 ಸದಸ್ಯ ಸ್ಥಾನಕ್ಕೆ 28 ಮಂದಿ ಅರ್ಜಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ನಟಿ ರಕ್ಷಿತಾ ಪ್ರೇಮ್ ದಂಪತಿ ಭೇಟಿ

Suddi Udaya

ವಿಶ್ವಹಿಂದೂ ಪರಿಷತ್ ಭಜರಂಗದಳ ವೇಣೂರು ಪ್ರಖಂಡದಿಂದ ವೇಣೂರು ಪೋಲೀಸ್ ಠಾಣೆಗೆ ದೂರು

Suddi Udaya

ಬೆಳ್ತಂಗಡಿ: ಸ.ಪ.ಪೂ. ಕಾಲೇಜಿನ ಪ್ರಾಚಾರ್ಯ ಸುಕುಮಾರ್ ರವರಿಗೆ ರಾಜ್ಯ ಮಟ್ಟದ ಅತ್ಯುತ್ತಮ ಪ್ರಾಂಶುಪಾಲ ಪ್ರಶಸ್ತಿ

Suddi Udaya

ಸೆ. 3: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕದ 16ನೇ ವರ್ಧಂತ್ಯುತ್ಸವ

Suddi Udaya

ನೆರಿಯ: ಕಡವೆ ಬೇಟೆ, ಬಂದೂಕು ಸಹಿತ ಆರೋಪಿ ವಶಕ್ಕೆ

Suddi Udaya
error: Content is protected !!