24.2 C
ಪುತ್ತೂರು, ಬೆಳ್ತಂಗಡಿ
June 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿ ಶ್ರೀ ಕ್ಷೇ.ಧ.ಶೌ.ವಿ.ನಿ. ಘಟಕ ಮತ್ತು ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯ ಸಹಭಾಗಿತ್ವದಲ್ಲಿ ವನ್ಯಜೀವಿ ಕಾಳಜಿ ಅಭಿಯಾನ ಮತ್ತು ಕಾಳ್ಗಿಚ್ಚು ಮುಂಜಾಗೃತಿ ಕ್ರಮಗಳ ಬಗ್ಗೆ ಜಾಗೃತಿ ಅಭಿಯಾನ

ಶಿಶಿಲ : ಶ್ರೀ ಕ್ಷೇತ್ರ ಧರ್ಮಸ್ಥಳ ಶೌರ್ಯವಿಪತ್ತು ನಿರ್ವಹಣಾ ಘಟಕ ಅರಸಿನಮಕ್ಕಿ ಶಿಶಿಲ ಮತ್ತು ಕರ್ನಾಟಕ ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯ ಜಂಟಿ ಸಹಭಾಗಿತ್ವದಲ್ಲಿ ವನ್ಯಜೀವಿ ಕಾಳಜಿ ಅಭಿಯಾನ ಮತ್ತು ಕಾಳ್ಗಿಚ್ಚು ಮುಂಜಾಗೃತಿ ಕ್ರಮಗಳ ಬಗ್ಗೆ ಜಾಗೃತಿ ಅಭಿಯಾನ ಮಾ.6ರಂದು ನಡೆಸಲಾಯಿತು.

ಉಪ್ಪಿನಂಗಡಿ ಅರಣ್ಯ ವಲಯದ ಕಾಡಂಚಿನ ಶಾಲೆಗಳಾದ ಶ್ರೀ ಗೋಪಾಲಕೃಷ್ಣ ಅನುದಾನಿತ ಶಾಲೆ ಅರಸಿನಮಕ್ಕಿ, ಸರಕಾರಿ ಪ್ರೌಢಶಾಲೆ ಅರಸಿನಮಕ್ಕಿ,ಶಿಶಿಲ ಶಾಲೆ ,ಕೊಳಕ್ಕೆಬೈಲು ಶಾಲಾ ವಿದ್ಯಾರ್ಥಿಗಳಿಗೆ ಪರಿಸರದೊಂದಿಗೆ ವನ್ಯಜೀವಿ ಸಂರಕ್ಷಣೆ ಮತ್ತು ಕಾಡ್ಗಿಚ್ಚು ಸಂಭವಿಸದಂತೆ ಅನುಸರಿಸುವ ಮುಂಜಾಗೃತಾ ಕ್ರಮಗಳು ಮತ್ತು ಕಾಡ್ಗಿಚ್ಚು ಕಂಡುಬಂದಲ್ಲಿ ಯಾವ ರೀತಿಯಾಗಿ ಅರಣ್ಯ ಇಲಾಖೆಯ ಸಂಪರ್ಕದೊಂದಿಗೆ ಸೇರಿಕೊಂಡು ಅದನ್ನು ಹತೋಟಿಗೆ ತರಬಹುದು ಎಂಬುದರ ಬಗ್ಗೆ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯ ಸುರೇಶ್ ಶಿಬಾಜೆ ವಿವರಿಸಿದರು.

ಅರಣ್ಯಾಧಿಕಾರಿ ನಾಗಲಿಂಗ ಮತ್ತು ಸಚಿನ್ ಇವರು ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ಉಂಟಾಗುವ ನೀರಿನ ಕೊರತೆಗೆ ನಾಗರಿಕ ಸಮಾಜದಿಂದ ಯಾವ ರೀತಿಯ ಸಹಾಯ ಮಾಡಬಹುದೆಂದು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಈ ಎಲ್ಲ ವಿಷಯಗಳ ಬಗ್ಗೆ ಜಾಗೃತಿಗಾಗಿ ಕರಪತ್ರಗಳನ್ನು ಹಂಚಲಾಯಿತು. ವಿಪತ್ತು ನಿರ್ವಹಣಾ ಘಟಕದ ಸಂಯೋಜಕಿ ರಶ್ಮಿತಾ ಶಿಶಿಲ, ಘಟಕ ಪ್ರತಿನಿಧಿ ಆನಂದ ನಾಯ್ಕ,ರಮೇಶ್ ಭೈರಕಟ್ಟ,ಅವಿನಾಶ್ ಭಿಡೆ,ಶೀನಪ್ಪ ಶಿಶಿಲ ಅಭಿಯಾನದಲ್ಲಿ ಸಹಕಾರ ನೀಡಿದರು. ಶಿಶಿಲ ಶಾಲೆಯಲ್ಲಿ ಅಭಿಯಾನದ ಸಮಯದಲ್ಲಿ ಕಳೆದ ವರ್ಷ ಕಾಡ್ಗಿಚ್ಚು ಉಂಟಾದ ಸಮಯದಲ್ಲಿ ಅರಣ್ಯಾಧಿಕಾರಿಗಳಿಗೆ ಸಹಕಾರ ನೀಡಿದ ಮನೀಷ್ ಎಂಬ ಬಾಲಕನನ್ನು ಅರಣ್ಯಾಧಿಕಾರಿ ಸಚಿನ್ ಶ್ಲಾಘಿಸಿದರು.

Related posts

ಸುಳ್ಯೋಡಿ: ಮಾತೃಭೋಜನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಅಟೋ ರಿಕ್ಷಾ ಮತ್ತು ಬೈಕ್ ಢಿಕ್ಕಿ: ಪ್ರಯಾಣಿಕರಿಗೆ ಗಂಭೀರ ಗಾಯ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಒರಿಂಟೇಷನ್ ಕಾರ್ಯಕ್ರಮ

Suddi Udaya

ಕಬಡ್ಡಿ ಪಂದ್ಯಾಟ: ಬೆಳ್ತಂಗಡಿ ಸ. ಪ್ರೌ. ಶಾಲೆ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಭಾರತೀಯ ಜನತಾ ಪಾರ್ಟಿಯ ಗರ್ಡಾಡಿ ಶಕ್ತಿ ಕೇಂದ್ರದ ನೂತನ‌ ಬೂತ್ ಸಮಿತಿ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

Suddi Udaya

ರಾಜ್ಯದ ರೈತರ, ಮಠ ಮಂದಿರಗಳ ಜಾಗದ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ದಾಖಲು ಮಾಡಿರುವುದನ್ನು ವಿರೋಧಿಸಿ ಬಿಜೆಪಿ ಮಂಡಲದ ವತಿಯಿಂದ ಆಡಳಿತ ಸೌಧದ ಎದುರು ಬೃಹತ್ ಪ್ರತಿಭಟನೆ

Suddi Udaya
error: Content is protected !!