July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿ ಶ್ರೀ ಕ್ಷೇ.ಧ.ಶೌ.ವಿ.ನಿ. ಘಟಕ ಮತ್ತು ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯ ಸಹಭಾಗಿತ್ವದಲ್ಲಿ ವನ್ಯಜೀವಿ ಕಾಳಜಿ ಅಭಿಯಾನ ಮತ್ತು ಕಾಳ್ಗಿಚ್ಚು ಮುಂಜಾಗೃತಿ ಕ್ರಮಗಳ ಬಗ್ಗೆ ಜಾಗೃತಿ ಅಭಿಯಾನ

ಶಿಶಿಲ : ಶ್ರೀ ಕ್ಷೇತ್ರ ಧರ್ಮಸ್ಥಳ ಶೌರ್ಯವಿಪತ್ತು ನಿರ್ವಹಣಾ ಘಟಕ ಅರಸಿನಮಕ್ಕಿ ಶಿಶಿಲ ಮತ್ತು ಕರ್ನಾಟಕ ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯ ಜಂಟಿ ಸಹಭಾಗಿತ್ವದಲ್ಲಿ ವನ್ಯಜೀವಿ ಕಾಳಜಿ ಅಭಿಯಾನ ಮತ್ತು ಕಾಳ್ಗಿಚ್ಚು ಮುಂಜಾಗೃತಿ ಕ್ರಮಗಳ ಬಗ್ಗೆ ಜಾಗೃತಿ ಅಭಿಯಾನ ಮಾ.6ರಂದು ನಡೆಸಲಾಯಿತು.

ಉಪ್ಪಿನಂಗಡಿ ಅರಣ್ಯ ವಲಯದ ಕಾಡಂಚಿನ ಶಾಲೆಗಳಾದ ಶ್ರೀ ಗೋಪಾಲಕೃಷ್ಣ ಅನುದಾನಿತ ಶಾಲೆ ಅರಸಿನಮಕ್ಕಿ, ಸರಕಾರಿ ಪ್ರೌಢಶಾಲೆ ಅರಸಿನಮಕ್ಕಿ,ಶಿಶಿಲ ಶಾಲೆ ,ಕೊಳಕ್ಕೆಬೈಲು ಶಾಲಾ ವಿದ್ಯಾರ್ಥಿಗಳಿಗೆ ಪರಿಸರದೊಂದಿಗೆ ವನ್ಯಜೀವಿ ಸಂರಕ್ಷಣೆ ಮತ್ತು ಕಾಡ್ಗಿಚ್ಚು ಸಂಭವಿಸದಂತೆ ಅನುಸರಿಸುವ ಮುಂಜಾಗೃತಾ ಕ್ರಮಗಳು ಮತ್ತು ಕಾಡ್ಗಿಚ್ಚು ಕಂಡುಬಂದಲ್ಲಿ ಯಾವ ರೀತಿಯಾಗಿ ಅರಣ್ಯ ಇಲಾಖೆಯ ಸಂಪರ್ಕದೊಂದಿಗೆ ಸೇರಿಕೊಂಡು ಅದನ್ನು ಹತೋಟಿಗೆ ತರಬಹುದು ಎಂಬುದರ ಬಗ್ಗೆ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯ ಸುರೇಶ್ ಶಿಬಾಜೆ ವಿವರಿಸಿದರು.

ಅರಣ್ಯಾಧಿಕಾರಿ ನಾಗಲಿಂಗ ಮತ್ತು ಸಚಿನ್ ಇವರು ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ಉಂಟಾಗುವ ನೀರಿನ ಕೊರತೆಗೆ ನಾಗರಿಕ ಸಮಾಜದಿಂದ ಯಾವ ರೀತಿಯ ಸಹಾಯ ಮಾಡಬಹುದೆಂದು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಈ ಎಲ್ಲ ವಿಷಯಗಳ ಬಗ್ಗೆ ಜಾಗೃತಿಗಾಗಿ ಕರಪತ್ರಗಳನ್ನು ಹಂಚಲಾಯಿತು. ವಿಪತ್ತು ನಿರ್ವಹಣಾ ಘಟಕದ ಸಂಯೋಜಕಿ ರಶ್ಮಿತಾ ಶಿಶಿಲ, ಘಟಕ ಪ್ರತಿನಿಧಿ ಆನಂದ ನಾಯ್ಕ,ರಮೇಶ್ ಭೈರಕಟ್ಟ,ಅವಿನಾಶ್ ಭಿಡೆ,ಶೀನಪ್ಪ ಶಿಶಿಲ ಅಭಿಯಾನದಲ್ಲಿ ಸಹಕಾರ ನೀಡಿದರು. ಶಿಶಿಲ ಶಾಲೆಯಲ್ಲಿ ಅಭಿಯಾನದ ಸಮಯದಲ್ಲಿ ಕಳೆದ ವರ್ಷ ಕಾಡ್ಗಿಚ್ಚು ಉಂಟಾದ ಸಮಯದಲ್ಲಿ ಅರಣ್ಯಾಧಿಕಾರಿಗಳಿಗೆ ಸಹಕಾರ ನೀಡಿದ ಮನೀಷ್ ಎಂಬ ಬಾಲಕನನ್ನು ಅರಣ್ಯಾಧಿಕಾರಿ ಸಚಿನ್ ಶ್ಲಾಘಿಸಿದರು.

Related posts

ಬೆಳಾಲು: ಓಡಿಪ್ರೊಟ್ಟು ನಿವಾಸಿ ಉಮಾನಾಥ ಕೋಟ್ಯಾನ್ ನಿಧನ

Suddi Udaya

ಉಜಿರೆ: ಸ್ಕೂಟರ್ ಮತ್ತು ಬೈಕ್ ನಡುವೆ ಅಪಘಾತ; ಸ್ಕೂಟರ್ ಸವಾರ ಮೃತ್ಯು

Suddi Udaya

ಸೇವಾಭಾರತಿಯಿಂದ ಬ್ಯಾಂಕ್ ನೋಟ್ ಪೇಪರ್ ಮಿಲ್ ಪ್ರೈವೇಟ್ ಲಿಮಿಟೆಡ್ ಗೆ ಭೇಟಿ

Suddi Udaya

ಕುತ್ಲೂರು: ಮಳೆಗೆ ಕುಸಿದ ಸೇತುವೆ ಪರೀಶಿಲನೆ ನಡೆಸಿದ ಜಿಲ್ಲಾಧಿಕಾರಿ

Suddi Udaya

ಕೆಎಸ್ ಆರ್ಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು ಪ್ರಕರಣ: ಬಸ್ ಚಾಲಕನಿಗೆ ಶಿಕ್ಷೆ ಹಾಗೂ ದಂಡ ಪ್ರಕಟ

Suddi Udaya

ಖೋ- ಖೋ ಪಂದ್ಯಾಟ: ನಡ ಪದವಿ ಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!