September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿ ಶ್ರೀ ಕ್ಷೇ.ಧ.ಶೌ.ವಿ.ನಿ. ಘಟಕ ಮತ್ತು ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯ ಸಹಭಾಗಿತ್ವದಲ್ಲಿ ವನ್ಯಜೀವಿ ಕಾಳಜಿ ಅಭಿಯಾನ ಮತ್ತು ಕಾಳ್ಗಿಚ್ಚು ಮುಂಜಾಗೃತಿ ಕ್ರಮಗಳ ಬಗ್ಗೆ ಜಾಗೃತಿ ಅಭಿಯಾನ

ಶಿಶಿಲ : ಶ್ರೀ ಕ್ಷೇತ್ರ ಧರ್ಮಸ್ಥಳ ಶೌರ್ಯವಿಪತ್ತು ನಿರ್ವಹಣಾ ಘಟಕ ಅರಸಿನಮಕ್ಕಿ ಶಿಶಿಲ ಮತ್ತು ಕರ್ನಾಟಕ ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯ ಜಂಟಿ ಸಹಭಾಗಿತ್ವದಲ್ಲಿ ವನ್ಯಜೀವಿ ಕಾಳಜಿ ಅಭಿಯಾನ ಮತ್ತು ಕಾಳ್ಗಿಚ್ಚು ಮುಂಜಾಗೃತಿ ಕ್ರಮಗಳ ಬಗ್ಗೆ ಜಾಗೃತಿ ಅಭಿಯಾನ ಮಾ.6ರಂದು ನಡೆಸಲಾಯಿತು.

ಉಪ್ಪಿನಂಗಡಿ ಅರಣ್ಯ ವಲಯದ ಕಾಡಂಚಿನ ಶಾಲೆಗಳಾದ ಶ್ರೀ ಗೋಪಾಲಕೃಷ್ಣ ಅನುದಾನಿತ ಶಾಲೆ ಅರಸಿನಮಕ್ಕಿ, ಸರಕಾರಿ ಪ್ರೌಢಶಾಲೆ ಅರಸಿನಮಕ್ಕಿ,ಶಿಶಿಲ ಶಾಲೆ ,ಕೊಳಕ್ಕೆಬೈಲು ಶಾಲಾ ವಿದ್ಯಾರ್ಥಿಗಳಿಗೆ ಪರಿಸರದೊಂದಿಗೆ ವನ್ಯಜೀವಿ ಸಂರಕ್ಷಣೆ ಮತ್ತು ಕಾಡ್ಗಿಚ್ಚು ಸಂಭವಿಸದಂತೆ ಅನುಸರಿಸುವ ಮುಂಜಾಗೃತಾ ಕ್ರಮಗಳು ಮತ್ತು ಕಾಡ್ಗಿಚ್ಚು ಕಂಡುಬಂದಲ್ಲಿ ಯಾವ ರೀತಿಯಾಗಿ ಅರಣ್ಯ ಇಲಾಖೆಯ ಸಂಪರ್ಕದೊಂದಿಗೆ ಸೇರಿಕೊಂಡು ಅದನ್ನು ಹತೋಟಿಗೆ ತರಬಹುದು ಎಂಬುದರ ಬಗ್ಗೆ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯ ಸುರೇಶ್ ಶಿಬಾಜೆ ವಿವರಿಸಿದರು.

ಅರಣ್ಯಾಧಿಕಾರಿ ನಾಗಲಿಂಗ ಮತ್ತು ಸಚಿನ್ ಇವರು ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ಉಂಟಾಗುವ ನೀರಿನ ಕೊರತೆಗೆ ನಾಗರಿಕ ಸಮಾಜದಿಂದ ಯಾವ ರೀತಿಯ ಸಹಾಯ ಮಾಡಬಹುದೆಂದು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಈ ಎಲ್ಲ ವಿಷಯಗಳ ಬಗ್ಗೆ ಜಾಗೃತಿಗಾಗಿ ಕರಪತ್ರಗಳನ್ನು ಹಂಚಲಾಯಿತು. ವಿಪತ್ತು ನಿರ್ವಹಣಾ ಘಟಕದ ಸಂಯೋಜಕಿ ರಶ್ಮಿತಾ ಶಿಶಿಲ, ಘಟಕ ಪ್ರತಿನಿಧಿ ಆನಂದ ನಾಯ್ಕ,ರಮೇಶ್ ಭೈರಕಟ್ಟ,ಅವಿನಾಶ್ ಭಿಡೆ,ಶೀನಪ್ಪ ಶಿಶಿಲ ಅಭಿಯಾನದಲ್ಲಿ ಸಹಕಾರ ನೀಡಿದರು. ಶಿಶಿಲ ಶಾಲೆಯಲ್ಲಿ ಅಭಿಯಾನದ ಸಮಯದಲ್ಲಿ ಕಳೆದ ವರ್ಷ ಕಾಡ್ಗಿಚ್ಚು ಉಂಟಾದ ಸಮಯದಲ್ಲಿ ಅರಣ್ಯಾಧಿಕಾರಿಗಳಿಗೆ ಸಹಕಾರ ನೀಡಿದ ಮನೀಷ್ ಎಂಬ ಬಾಲಕನನ್ನು ಅರಣ್ಯಾಧಿಕಾರಿ ಸಚಿನ್ ಶ್ಲಾಘಿಸಿದರು.

Related posts

ಧರ್ಮಸ್ಥಳ: ದೊಂಡೋಲೆ ಪರಶುರಾಮ ದೇವಸ್ಥಾನಕ್ಕೆ ಮುಖ್ಯಮಂತ್ರಿಯವರ ಕಾರ್ಯದರ್ಶಿ ಗೋಪಾಲ್ ಪಿ. ಎ ಭೇಟಿ

Suddi Udaya

ತೆಕ್ಕಾರು : ಸರಳಿಕಟ್ಟೆ ನದಿ ಬಳಿ ಕಾಡಾನೆ ಪ್ರತ್ಯಕ್ಷ

Suddi Udaya

ಶ್ರೀ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಭಕ್ತಾದಿಗಳ ಸಭೆ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಮಾಜಿ ಸಚಿವ ಅಭಯಚಂದ್ರ ಜೈನ್

Suddi Udaya

ಕು.ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಮರುತನಿಖೆಗೆ ಒಪ್ಪಿಗೆ : ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್

Suddi Udaya

ಮಂಗಳೂರಿನಲ್ಲಿ ವಿ.ಪ. ಶಾಸಕ ಕಿಶೋರ್ ಕುಮಾರ್ ಪುತ್ತೂರು ರವರ ಕಚೇರಿ ಉದ್ಘಾಟನೆ

Suddi Udaya
error: Content is protected !!