25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಕ್ಸಲರಿಗೆ ಶರಣಾದ ಸರ್ಕಾರ ಅಭಿವೃದ್ಧಿಯ ಕನಸು ಹುಸಿಯಾಗಿಸಿದ ಬಜೆಟ್: ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ : ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಇಂದು ಮಂಡಿಸಿದ 2025- 26ರ ಸಾಲಿನ ಮುಂಗಡ ಪತ್ರ ನಕ್ಸಲರಿಗೆ ಶರಣಾಗಿ ಶ್ರೀಸಾಮಾನ್ಯರ ಪಾಲಿಗೆ ಸಂಪೂರ್ಣ ನಿರಾಶದಾಯಕವಾಗಿದೆಯೆಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಬೇಸರ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಸರ್ಕಾರಕ್ಕೆ ನಕ್ಸಲ್ ಚಟುವಟಿಕೆ ಬಗ್ಗೆ ಪೂರ್ಣ ಅರಿವಿದ್ದಂತೆ ಕೇವಲ ಆರು ಜನರ ನಕ್ಸಲರ ಶರಣಗಾತಿಯಿಂದ ನಕ್ಸಲ್ ನಿಗ್ರಹ ಪಡೆಯನ್ನೇ ವಿಸರ್ಜಿಸಿ 10 ಕೋಟಿ ವಿಶೇಷ ಪ್ಯಾಕೇಜ್ ನೀಡಿದ್ದನ್ನು ಗಮನಿಸಿದರೆ ನಕ್ಸಲರು ಸರ್ಕಾರಕ್ಕೆ ಶರಣಾಗಿದ್ದರೋ ಅಥವಾ ಸರ್ಕಾರವೇ ನಕ್ಸಲರಿಗೆ ಶರಣಾಯಿತೋ ಎಂಬಂತಿದೆ.

ಯೋಜನಾಬದ್ಧವಲ್ಲದ ಯೋಚನೆಗಳಿಂದ ಕರ್ನಾಟಕ ರಾಜ್ಯದ ವಿತ್ತೀಯ ಶಿಸ್ತು ಹಳಿತಪ್ಪಿ ಮೂಲ ಸೌಕರ್ಯಗಳ ಅಭಿವೃದ್ಧಿ ಕುಂಠಿತದೊಂದಿಗೆ ರಾಜ್ಯದ ಜನತೆ ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸುತ್ತಿದ್ದಾರೆ. ಕಳೆದ ಸಾಲಿನ ಮುಂಗಡ ಪತ್ರದಲ್ಲಿ ವಿವಿಧ ಇಲಾಖೆಗಳಿಗೆ ಘೋಷಿಸಿದ ಅನುದಾನ ಅನುಷ್ಠಾನವಾಗದೆ ದುರುಪಯೋಗವಾಗಿದ್ದು ಈ ಬಾರಿಯೂ ಮುಖ್ಯಮಂತ್ರಿಗಳ ಬಜೆಟ್ ಭಾಷಣದಲ್ಲಿ ಎಂದಿನಂತೆ ಅಲ್ಪ ಸಂಖ್ಯಾತರ ತುಷ್ಟೀಕರಣ, ಮೂಲ ಸೌಕರ್ಯ, ಶಿಕ್ಷಣ, ಆರೋಗ್ಯ, ಇಂಧನ ಕೃಷಿ ಇಲಾಖೆಗಳ ಕಡೆಗಣನೆ ಎದ್ದು ಕಾಣುತ್ತಿದೆ. ಒಟ್ಟಾರೆಯಾಗಿ ರಾಜ್ಯದ ಆರ್ಥಿಕ ಪ್ರಗತಿ ಕುಂಠಿತವಾಗುತ್ತಿರುವುದರ ಬಗ್ಗೆ ತೀವ್ರವಾದ ಕಳವಳವನ್ನು ಶಾಸಕ ಹರೀಶ್ ಪೂಂಜ ಪ್ರಕಟಣೆ ಮೂಲಕ ವ್ಯಕ್ತಪಡಿಸಿದ್ದಾರೆ.

Related posts

ಉಜಿರೆ ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ಸಮಿತಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಬೆನ್ನುಹುರಿ ಅಪಘಾತಕ್ಕೊಳಗಾದ ರಾಣೆಬೆನ್ನೂರಿನ ಚೈತ್ರಾರಿಗೆ ಗಾಲಿಕುರ್ಚಿ ವಿತರಣೆ

Suddi Udaya

ಪತಂಜಲಿ ಯೋಗ ಕೇಂದ್ರ: ಪರಶುರಾಮ ಜಯಂತಿ ಮತ್ತು ಮಹಾಭಾರತ ರಸಪ್ರಶ್ನೆ

Suddi Udaya

ಬೆಳ್ತಂಗಡಿ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೇವಸ್ಥಾನಕ್ಕೆ ಧಾರ್ಮಿಕ ಮುಂದಾಳು, ಉದ್ಯಮಿ ಶಶಿಧರ ಶೆಟ್ಟಿ ಭೇಟಿ

Suddi Udaya

ಬೆಳ್ತಂಗಡಿ ಜೆಸಿಐ, ಮಂಜುಶ್ರೀ ವತಿಯಿಂದ ಶ್ರಾವಣ ತರಬೇತಿ ಕಾರ್ಯಕ್ರಮ

Suddi Udaya
error: Content is protected !!