July 23, 2026
Uncategorized

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಹದಿಹರೆಯದ ಹೆಣ್ಣು ಮಕ್ಕಳಲ್ಲಿ ಕಂಡುಬರುವ ಬದಲಾವಣೆಯ ಕುರಿತು ಮಾಹಿತಿ

ಪಟ್ರಮೆ: ತಾಲೂಕು ಆರೋಗ್ಯ ಕೇಂದ್ರ ಬೆಳ್ತಂಗಡಿ ಹಾಗೂ ಸಮುದಾಯ ಆರೋಗ್ಯ ಕೇಂದ್ರ ಕೊಕ್ಕಡ ಇದರ ವತಿಯಿಂದ ಪಟ್ಟೂರಿನ ಶ್ರೀರಾಮ ವಿದ್ಯಾ ಸಂಸ್ಥೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಹದಿಹರೆಯದ ಹೆಣ್ಣು ಮಕ್ಕಳಲ್ಲಿ ಕಂಡುಬರುವ ಬದಲಾವಣೆಗಳು ಮತ್ತು ಸಮಸ್ಯೆಗಳ ಕುರಿತು ಮಾಹಿತಿ ಹಾಗೂ ಹದಿಹರೆಯದಲ್ಲಿ ಹೆಣ್ಣು ಮಕ್ಕಳು ಕೈಗೊಳ್ಳಬೇಕಾದ ಅಗತ್ಯ ಮುನ್ನೆಚ್ಚರಿಕ ಕ್ರಮಗಳ ಕುರಿತು ಕೊಕ್ಕಡ ಆರೋಗ್ಯ ಕೇಂದ್ರದ ಸಮುದಾಯ ಆರೋಗ್ಯ ಅಧಿಕಾರಿ ಭುವನೇಶ್ವರಿ ಮಾಹಿತಿ ನೀಡಿದರು.

ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ರಕ್ತದ ಪರೀಕ್ಷೆ ಮಾಡಿ ರಕ್ತದಲ್ಲಿರುವ ಹಿಮೋಗ್ಲೋಬಿನ್ ಪ್ರಮಾಣವನ್ನು ಪರೀಕ್ಷಿಸಿದ ಅವರು ಮಕ್ಕಳಿಗೆ ಹಿಮೋಗ್ಲೋಬಿನ್ ಕಡಿಮೆ ಆಗಲು ಕಾರಣ ಮತ್ತು ಹಿಮೋಗ್ಲೋಬಿನ್ ಹೆಚ್ಚಿಸುವ ಆಹಾರ ಪದಾರ್ಥಗಳ ಸೇವನೆ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಕೊಕ್ಕಡ ಪ್ರಾಥಮಿಕ ಆರೋಗ್ಯ ಕೇಂದ್ರದ ಆಶಾ ಕಾರ್ಯಕರ್ತೆಯರಾದ ಚೈತ್ರ ಮತ್ತು ಗಾಯತ್ರಿಹಾಗೂ ಶಾಲಾ ಶಿಕ್ಷಕ ವೃಂದದವರು ಜೊತೆಗಿದ್ದರು. ಶಾಲಾ ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಂಡರು.

Related posts

ದಕ್ಷಿಣ ಕನ್ನಡ ಹಾಗೂ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆ ಉಸ್ತುವಾರಿಯಾಗಿ ಅಬ್ದುಲ್ ರಹಿಮಾನ್ ಪಡ್ಪು

Suddi Udaya

ಬೆಳ್ತಂಗಡಿ: ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ದೇಶಭಕ್ತಿ ಗೀತೆಗಳ ಗೀತ ಗಾಯನ ಸ್ಪರ್ಧೆ

Suddi Udaya

ಉಜಿರೆ ಅನು ಇಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಶುಭಾರಂಭ – ಭಗವಂತನ ಅನುಗ್ರಹದಿಂದ ಸಂಸ್ಥೆಯು ಪ್ರಗತಿ ಪಥದಲ್ಲಿ ಸಾಗಲಿ: ಶರತ್ ಕೃಷ್ಣ ಪಡ್ವೆಟ್ನಾಯ

Suddi Udaya

ಅರಿಕೆಗುಡ್ಡೆಯಲ್ಲಿ ನೂತನ ಸಭಾಭವನ ಉದ್ಘಾಟನೆ : ಸುಬ್ರಹ್ಮಣ್ಯ ಶ್ರೀಗಳಿಂದ ಸಭಾಭವವನ್ನು ದೀಪ ಬೆಳಗಿಸಿ , ಉದ್ಘಾಟಿಸಿ ನಾಮಫಲಕ ಅನಾವರಣ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದದಲ್ಲಿ ಜುಬಿಲಿ ವರ್ಷ ಉದ್ಘಾಟನೆ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ಮಾಸಿಕ ಸಭೆ

Suddi Udaya
error: Content is protected !!