23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ವಕೀಲರ ಸಂಘದಿಂದ ನ್ಯಾಯಾಲಯದ ಕಟ್ಟಡ ಮಂಜೂರುಗೊಳಿಸುವಂತೆ ಬೆಂಗಳೂರಿನಲ್ಲಿ ಸಚಿವರುಗಳ ಭೇಟಿ

ಬೆಳ್ತಂಗಡಿ : ಇತ್ತೀಚೆಗೆ ಬೆಳ್ತಂಗಡಿಯಲ್ಲಿ ನಡೆದ ಅಪರ ಸರ್ಕಾರಿ ವಕೀಲರ ಕಛೇರಿ ಉದ್ಘಾಟನೆ ಮತ್ತು ವಕೀಲರ ಸಂಘದಲ್ಲಿ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿಧಾನ ಪರಿಷತ್ ಶಾಸಕ ಐವನ್ ಡಿ ಸೋಜಾ ರವರು ಬೆಳ್ತಂಗಡಿಯ 60 ವರ್ಷ ಹಳೆಯದಾದ ನ್ಯಾಯಾಲಯದ ಕಟ್ಟಡವನ್ನು ವೀಕ್ಷಿಸಿ ಸರ್ಕಾರದ ಮಟ್ಟದಲ್ಲಿ ಹೊಸ ನ್ಯಾಯಾಲಯದ ಕಟ್ಟಡ ಮಂಜೂರಾತಿಗೆ ಬಜೆಟ್ ನಲ್ಲಿ ಅನುದಾನ ನೀಡಲು ಒತ್ತಡ ತರುವ ಬಗ್ಗೆ ವಕೀಲರ ನಿಯೋಗವನ್ನು ಸಂಬಂಧಪಟ್ಟ ಸಚಿವರ ಬಳಿ ಕರೆದೊಯ್ಯುವ ಭರವಸೆ ನೀಡಿದ್ದರು.

ಅದರಂತೆ ಮಾರ್ಚ್ 06 ರಂದು ಬೆಂಗಳೂರಿನ ಬಜೆಟ್ ಅಧಿವೇಶನದ ಸಂದರ್ಭ ವಿಧಾನ ಪರಿಷತ್ ಶಾಸಕರಾದ ಐವನ್ ಡಿ ಸೋಜಾ ರವರ ನೇತೃತ್ವದಲ್ಲಿ ಕಾನೂನು ಸಚಿವರಾದ ಎಚ್. ಕೆ ಪಾಟೀಲ್, ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಯವರುಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ, ಪ್ರಧಾನ ಕಾರ್ಯದರ್ಶಿ ನವೀನ್, ಬೀ ಕೆ, ಹಿರಿಯ ವಕೀಲರ ಸಮಿತಿ ಚೇರ್ಮನ್ ಅಲೋಶಿಯಸ್ ಎಸ್ ಲೋಬೋ, ಅಪರ ಸರ್ಕಾರಿ ವಕೀಲ ಮನೋಹರ ಕುಮಾರ್, ಎ ಮತ್ತು ಮಾಜಿ ಅಧ್ಯ್ಷರಾದ ಶಿವ ಕುಮಾರ್ ಎಸ್.ಎಂ ಜೊತೆಗಿದ್ದರು.

Related posts

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ

Suddi Udaya

ಉಜಿರೆಯ ಎಸ್.ಡಿ.ಎಂ ಕಾಲೇಜಿನಲ್ಲಿ ‘ಭಾಸ್ಕರ ಪರ್ವ’: ಮೂರು ದಶಕಗಳ ವೃತ್ತಿ ಬದುಕಿಗೆ ಗೌರವದ ಬೀಳ್ಕೊಡುಗೆ

Suddi Udaya

ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1ಕೋಟಿ ಅನುದಾನ–ಶಾಸಕ ಹರೀಶ್ ಪೂಂಜ

Suddi Udaya

ಧರ್ಮಸ್ಥಳ ನೇರ್ತನೆಯಲ್ಲಿ ಕಾಡಾನೆ ದಾಳಿ :ಕೃಷಿಗೆ ಹಾನಿ   

Suddi Udaya

ಅಕ್ರಮ ಗೋಹತ್ಯೆ ಪ್ರಕರಣದಲ್ಲಿ ತಕ್ಷಿರು ನಡೆಸಲು ಉದ್ದೇಶಿಸಿದ್ದ ಸ್ಥಳಗಳ ಜಪ್ತಿ

Suddi Udaya

ಕಣಿಯೂರು: ವಿದ್ಯುತ್ ತಂತಿ ಸ್ಪರ್ಶಿಸಿ ನವಿಲು ಸಾವು

Suddi Udaya
error: Content is protected !!