July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ವಕೀಲರ ಸಂಘದಿಂದ ನ್ಯಾಯಾಲಯದ ಕಟ್ಟಡ ಮಂಜೂರುಗೊಳಿಸುವಂತೆ ಬೆಂಗಳೂರಿನಲ್ಲಿ ಸಚಿವರುಗಳ ಭೇಟಿ

ಬೆಳ್ತಂಗಡಿ : ಇತ್ತೀಚೆಗೆ ಬೆಳ್ತಂಗಡಿಯಲ್ಲಿ ನಡೆದ ಅಪರ ಸರ್ಕಾರಿ ವಕೀಲರ ಕಛೇರಿ ಉದ್ಘಾಟನೆ ಮತ್ತು ವಕೀಲರ ಸಂಘದಲ್ಲಿ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿಧಾನ ಪರಿಷತ್ ಶಾಸಕ ಐವನ್ ಡಿ ಸೋಜಾ ರವರು ಬೆಳ್ತಂಗಡಿಯ 60 ವರ್ಷ ಹಳೆಯದಾದ ನ್ಯಾಯಾಲಯದ ಕಟ್ಟಡವನ್ನು ವೀಕ್ಷಿಸಿ ಸರ್ಕಾರದ ಮಟ್ಟದಲ್ಲಿ ಹೊಸ ನ್ಯಾಯಾಲಯದ ಕಟ್ಟಡ ಮಂಜೂರಾತಿಗೆ ಬಜೆಟ್ ನಲ್ಲಿ ಅನುದಾನ ನೀಡಲು ಒತ್ತಡ ತರುವ ಬಗ್ಗೆ ವಕೀಲರ ನಿಯೋಗವನ್ನು ಸಂಬಂಧಪಟ್ಟ ಸಚಿವರ ಬಳಿ ಕರೆದೊಯ್ಯುವ ಭರವಸೆ ನೀಡಿದ್ದರು.

ಅದರಂತೆ ಮಾರ್ಚ್ 06 ರಂದು ಬೆಂಗಳೂರಿನ ಬಜೆಟ್ ಅಧಿವೇಶನದ ಸಂದರ್ಭ ವಿಧಾನ ಪರಿಷತ್ ಶಾಸಕರಾದ ಐವನ್ ಡಿ ಸೋಜಾ ರವರ ನೇತೃತ್ವದಲ್ಲಿ ಕಾನೂನು ಸಚಿವರಾದ ಎಚ್. ಕೆ ಪಾಟೀಲ್, ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಯವರುಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ, ಪ್ರಧಾನ ಕಾರ್ಯದರ್ಶಿ ನವೀನ್, ಬೀ ಕೆ, ಹಿರಿಯ ವಕೀಲರ ಸಮಿತಿ ಚೇರ್ಮನ್ ಅಲೋಶಿಯಸ್ ಎಸ್ ಲೋಬೋ, ಅಪರ ಸರ್ಕಾರಿ ವಕೀಲ ಮನೋಹರ ಕುಮಾರ್, ಎ ಮತ್ತು ಮಾಜಿ ಅಧ್ಯ್ಷರಾದ ಶಿವ ಕುಮಾರ್ ಎಸ್.ಎಂ ಜೊತೆಗಿದ್ದರು.

Related posts

ಕು. ಸೌಜನ್ಯಳ ಕೊಲೆ ಪ್ರಕರಣ: ಆರೋಪಿಗಳ ಪತ್ತೆಗಾಗಿ ಪುದುವೆಟ್ಟು ವಿ. ಹಿಂ. ಪ. ಭಜರಂಗದಳ ವತಿಯಿಂದ ಶ್ರೀ ವನದುರ್ಗ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರ ಭಾರತಿ ಅಭ್ಯರ್ಥಿಗಳ ಆಯ್ಕೆ

Suddi Udaya

ಉಜಿರೆ: ರುಡ್‌ಸೆಟ್ ನಲ್ಲಿ FLC-CRP ತರಬೇತಿ ಸಮಾರೋಪ

Suddi Udaya

ಅನೈತಿಕ ಚಟುವಟಿಕೆ ನಡೆಯುತ್ತಿರುವ ದೂರುಗಳ ಹಿನ್ನಲೆ: ಉಜಿರೆಯ ಲಾಡ್ಜ್‌ ಗಳ ಮೇಲೆ ಡಿವೈಎಸ್ಪಿ ನೇತೃತ್ವದಲ್ಲಿ ಪೊಲೀಸ್ ದಾಳಿ

Suddi Udaya

ಉಜಿರೆ ಎಸ್ ಡಿ ಎಂ ಕಾಲೇಜಿಗೆ ಡಾ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ರಾಜ್ಯ ಮಟ್ಟದ ಮುಕ್ತ ಕರಾಟೆ ಪಂದ್ಯಾಟ: ಗೇರುಕಟ್ಟೆಯ ಅದೀಲ್ ರವರಿಗೆ ಕುಮಿತೆಯಲ್ಲಿ ಚಿನ್ನದ ಪದಕ

Suddi Udaya
error: Content is protected !!