September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸರ್ವರನ್ನೂ ಹಾಗೂ ಸರ್ವ ಕ್ಷೇತ್ರಗಳನ್ನೂ ಒಳಗೊಂಡ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಿದ ಬಜೆಟ್ : ರಕ್ಷಿತ್ ಶಿವರಾಂ

ಬೆಳ್ತಂಗಡಿ: 2025-26ನೇ ಸಾಲಿನ ರಾಜ್ಯ ಬಜೆಟ್ ಮಂಡನೆಯನ್ನು 16ನೇ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡಿಸಿದ್ದಾರೆ ಈ ಮೂಲಕ ದಾಖಲೆ ಸೃಷ್ಟಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜು ಸ್ಥಾಪಿಸುವ ಉದ್ದೇಶ ಹಾಗೂ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ನವೀಕರಣಕ್ಕೆ ಒತ್ತು ಹಾಗೂ ಕರಾವಳಿಯ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಅಂಗನವಾಡಿ ಸಹಾಯಕೀಯರ ಮತ್ತು ಆಶಾ ಕಾರ್ಯಕರ್ತರ ಗೌರವಧನ ಹೆಚ್ಚಿಸಲಾಗಿದೆ.

2025-26ನೇ ಸಾಲಿನ ಈ ಆಯವ್ಯಯವು ಕರ್ನಾಟಕದ ಭವ್ಯ ಭವಿಷ್ಯದ ದಿಕ್ಸೂಚಿಯಾಗಿ ಹೊರಹೊಮ್ಮಿದೆ. ಜನ ಕೇಂದ್ರೀತ ಅಭಿವೃದ್ಧಿಯ ಮಾದರಿಯನ್ನು ಅಳವಡಿಸಿಕೊಂಡಿರುವ ನಮ್ಮ ಸರ್ಕಾರವು ಸಾಮಾಜಿಕ ಬಲವರ್ಧನೆಯ ಮೂಲಕ ಆರ್ಥಿಕ ಸುಸ್ಥಿರತೆಯನ್ನು ಸಾಧಿಸುವಲ್ಲಿ ಮುನ್ನುಗ್ಗುತ್ತಿದೆ.

ಸಾಮಾಜಿಕ ಹಾಗೂ ಆರ್ಥಿಕ ಪ್ರಗತಿಪರತೆಯನ್ನು ಪ್ರತಿಪಾದಿಸುವ ಕರ್ನಾಟಕ ಮಾದರಿಗೆ ದೇಶದಲ್ಲಷ್ಟೇ ಅಲ್ಲ, ಜಾಗತಿಕವಾಗಿಯೂ ಮನ್ನಣೆ ದೊರಕಿದೆ.

ಸರ್ವರನ್ನೂ ಹಾಗೂ ಸರ್ವ ಕ್ಷೇತ್ರಗಳನ್ನೂ ಒಳಗೊಂಡ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಿರುವ ಈ ಬಜೆಟ್ ಕರ್ನಾಟಕದ ಪ್ರಗತಿಗೆ ಕಾರಣವಾಗಲಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತಿಳಿಸಿದ್ದಾರೆ.

Related posts

ಸ್ವಾತಂತ್ರ್ಯ ಸಿಕ್ಕಿ 75 ವರ್ಷ ಕಳೆದರೂ ಹಲವಾರು ಕುಟುಂಬಗಳಿಗೆ ಇನ್ನೂ ವಿದ್ಯುತ್ ಭಾಗ್ಯವಿಲ್ಲ: ವಿದ್ಯುತ್ ವ್ಯವಸ್ಥೆ ಕಲ್ಪಿಸಲು ಅಳದಂಗಡಿ ಗ್ರಾಮ ಸಭೆಯಲ್ಲಿ ಗ್ರಾಮಸ್ಥರ ಒತ್ತಾಯ

Suddi Udaya

ಮಾ.30: ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ಕುಣಿತ ಭಜನಾ ಮಂಡಳಿಯಿಂದ ಬರಾಯ ಭಜನಾ ಕಮ್ಮಟ ಉತ್ಸವ

Suddi Udaya

ವೇಣೂರು ಎಸ್.ಡಿ.ಎಮ್. ಐಟಿಐ ಮತ್ತು ಟೊಯೋಟಾ ಒಡಂಬಡಿಕೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಂದ್ರಾಳ ಸೈಂಟ್ ಸಾವ್ಯೂ ಶಾಲಾ ವಿದ್ಯಾರ್ಥಿ ಅಶ್ರಿಫಾ ಫಾತಿಮಾ ನೆರಿಯ ಅವರಿಗೆ ಅತ್ಯುನ್ನತ್ತ ಅಂಕ

Suddi Udaya

ಕಡಿರುದ್ಯಾವರ: ರಸ್ತೆಗೆ ಬಿದ್ದ ಮರ ; ಸ್ಥಳೀಯರಿಂದ ತೆರವು ಕಾರ್ಯ

Suddi Udaya

ಮೊಗ್ರು: ಶ್ರೀರಾಮ ಶಿಶು ಮಂದಿರದಲ್ಲಿ ವನಮಹೋತ್ಸವ

Suddi Udaya
error: Content is protected !!