20.8 C
ಪುತ್ತೂರು, ಬೆಳ್ತಂಗಡಿ
March 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿ ಶ್ರೀ ಕ್ಷೇ.ಧ.ಶೌ.ವಿ.ನಿ. ಘಟಕ ಮತ್ತು ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯ ಸಹಭಾಗಿತ್ವದಲ್ಲಿ ವನ್ಯಜೀವಿ ಕಾಳಜಿ ಅಭಿಯಾನ ಮತ್ತು ಕಾಳ್ಗಿಚ್ಚು ಮುಂಜಾಗೃತಿ ಕ್ರಮಗಳ ಬಗ್ಗೆ ಜಾಗೃತಿ ಅಭಿಯಾನ

ಶಿಶಿಲ : ಶ್ರೀ ಕ್ಷೇತ್ರ ಧರ್ಮಸ್ಥಳ ಶೌರ್ಯವಿಪತ್ತು ನಿರ್ವಹಣಾ ಘಟಕ ಅರಸಿನಮಕ್ಕಿ ಶಿಶಿಲ ಮತ್ತು ಕರ್ನಾಟಕ ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯ ಜಂಟಿ ಸಹಭಾಗಿತ್ವದಲ್ಲಿ ವನ್ಯಜೀವಿ ಕಾಳಜಿ ಅಭಿಯಾನ ಮತ್ತು ಕಾಳ್ಗಿಚ್ಚು ಮುಂಜಾಗೃತಿ ಕ್ರಮಗಳ ಬಗ್ಗೆ ಜಾಗೃತಿ ಅಭಿಯಾನ ಮಾ.6ರಂದು ನಡೆಸಲಾಯಿತು.

ಉಪ್ಪಿನಂಗಡಿ ಅರಣ್ಯ ವಲಯದ ಕಾಡಂಚಿನ ಶಾಲೆಗಳಾದ ಶ್ರೀ ಗೋಪಾಲಕೃಷ್ಣ ಅನುದಾನಿತ ಶಾಲೆ ಅರಸಿನಮಕ್ಕಿ, ಸರಕಾರಿ ಪ್ರೌಢಶಾಲೆ ಅರಸಿನಮಕ್ಕಿ,ಶಿಶಿಲ ಶಾಲೆ ,ಕೊಳಕ್ಕೆಬೈಲು ಶಾಲಾ ವಿದ್ಯಾರ್ಥಿಗಳಿಗೆ ಪರಿಸರದೊಂದಿಗೆ ವನ್ಯಜೀವಿ ಸಂರಕ್ಷಣೆ ಮತ್ತು ಕಾಡ್ಗಿಚ್ಚು ಸಂಭವಿಸದಂತೆ ಅನುಸರಿಸುವ ಮುಂಜಾಗೃತಾ ಕ್ರಮಗಳು ಮತ್ತು ಕಾಡ್ಗಿಚ್ಚು ಕಂಡುಬಂದಲ್ಲಿ ಯಾವ ರೀತಿಯಾಗಿ ಅರಣ್ಯ ಇಲಾಖೆಯ ಸಂಪರ್ಕದೊಂದಿಗೆ ಸೇರಿಕೊಂಡು ಅದನ್ನು ಹತೋಟಿಗೆ ತರಬಹುದು ಎಂಬುದರ ಬಗ್ಗೆ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯ ಸುರೇಶ್ ಶಿಬಾಜೆ ವಿವರಿಸಿದರು.

ಅರಣ್ಯಾಧಿಕಾರಿ ನಾಗಲಿಂಗ ಮತ್ತು ಸಚಿನ್ ಇವರು ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ಉಂಟಾಗುವ ನೀರಿನ ಕೊರತೆಗೆ ನಾಗರಿಕ ಸಮಾಜದಿಂದ ಯಾವ ರೀತಿಯ ಸಹಾಯ ಮಾಡಬಹುದೆಂದು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಈ ಎಲ್ಲ ವಿಷಯಗಳ ಬಗ್ಗೆ ಜಾಗೃತಿಗಾಗಿ ಕರಪತ್ರಗಳನ್ನು ಹಂಚಲಾಯಿತು. ವಿಪತ್ತು ನಿರ್ವಹಣಾ ಘಟಕದ ಸಂಯೋಜಕಿ ರಶ್ಮಿತಾ ಶಿಶಿಲ, ಘಟಕ ಪ್ರತಿನಿಧಿ ಆನಂದ ನಾಯ್ಕ,ರಮೇಶ್ ಭೈರಕಟ್ಟ,ಅವಿನಾಶ್ ಭಿಡೆ,ಶೀನಪ್ಪ ಶಿಶಿಲ ಅಭಿಯಾನದಲ್ಲಿ ಸಹಕಾರ ನೀಡಿದರು. ಶಿಶಿಲ ಶಾಲೆಯಲ್ಲಿ ಅಭಿಯಾನದ ಸಮಯದಲ್ಲಿ ಕಳೆದ ವರ್ಷ ಕಾಡ್ಗಿಚ್ಚು ಉಂಟಾದ ಸಮಯದಲ್ಲಿ ಅರಣ್ಯಾಧಿಕಾರಿಗಳಿಗೆ ಸಹಕಾರ ನೀಡಿದ ಮನೀಷ್ ಎಂಬ ಬಾಲಕನನ್ನು ಅರಣ್ಯಾಧಿಕಾರಿ ಸಚಿನ್ ಶ್ಲಾಘಿಸಿದರು.

Related posts

ಬಳಂಜ: ಅಟ್ಲಾಜೆ ಸರ್ವೋದಯ ಫ್ರೆಂಡ್ಸ್ ಕ್ಲಬ್ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವಿಪರೀತ ಮಳೆ ಕಾರಣ ಕಾಶಿಪಟ್ಣ ಸ.ಹಿ.ಪ್ರಾ. ಶಾಲೆಯ ಮೇಲ್ಚಾವಣಿ ಕುಸಿತ: ಶಾಸಕ ಹರೀಶ್ ಪೂಂಜರಿಂದ ತಕ್ಷಣ ಸ್ಪಂದನೆ

Suddi Udaya

ಗುರುವಾಯನಕೆರೆ: ಎಕ್ಸೆಲ್‌ ಪ.ಪೂ. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಗುರು ನಮನ ಹಾಗೂ 272 ಶಿಕ್ಷಕರಿಗೆ ಗೌರವಾರ್ಪಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಅಕೊಲೆಡ್ಸ್ ತರಗತಿಗಳಿಗೆ ಚಾಲನೆ

Suddi Udaya

ಭಾರತೀಯ ಜನತಾ ಪಾರ್ಟಿಯ ಮೂವರು ಪಕ್ಷದ ಸದಸ್ಯತ್ವದಿಂದ ಅಮಾನತು: ನೆರಿಯ ಗ್ರಾ.ಪಂ ಅಧ್ಯಕ್ಷೆ ಸೇರಿ ಇಬ್ಬರು ಸದಸ್ಯರಿಗೆ ಗೆಟ್ ಪಾಸ್ ನೀಡಿದ ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷರು

Suddi Udaya

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿ

Suddi Udaya
error: Content is protected !!