38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿ ಶ್ರೀ ಕ್ಷೇ.ಧ.ಶೌ.ವಿ.ನಿ. ಘಟಕ ಮತ್ತು ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯ ಸಹಭಾಗಿತ್ವದಲ್ಲಿ ವನ್ಯಜೀವಿ ಕಾಳಜಿ ಅಭಿಯಾನ ಮತ್ತು ಕಾಳ್ಗಿಚ್ಚು ಮುಂಜಾಗೃತಿ ಕ್ರಮಗಳ ಬಗ್ಗೆ ಜಾಗೃತಿ ಅಭಿಯಾನ

ಶಿಶಿಲ : ಶ್ರೀ ಕ್ಷೇತ್ರ ಧರ್ಮಸ್ಥಳ ಶೌರ್ಯವಿಪತ್ತು ನಿರ್ವಹಣಾ ಘಟಕ ಅರಸಿನಮಕ್ಕಿ ಶಿಶಿಲ ಮತ್ತು ಕರ್ನಾಟಕ ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯ ಜಂಟಿ ಸಹಭಾಗಿತ್ವದಲ್ಲಿ ವನ್ಯಜೀವಿ ಕಾಳಜಿ ಅಭಿಯಾನ ಮತ್ತು ಕಾಳ್ಗಿಚ್ಚು ಮುಂಜಾಗೃತಿ ಕ್ರಮಗಳ ಬಗ್ಗೆ ಜಾಗೃತಿ ಅಭಿಯಾನ ಮಾ.6ರಂದು ನಡೆಸಲಾಯಿತು.

ಉಪ್ಪಿನಂಗಡಿ ಅರಣ್ಯ ವಲಯದ ಕಾಡಂಚಿನ ಶಾಲೆಗಳಾದ ಶ್ರೀ ಗೋಪಾಲಕೃಷ್ಣ ಅನುದಾನಿತ ಶಾಲೆ ಅರಸಿನಮಕ್ಕಿ, ಸರಕಾರಿ ಪ್ರೌಢಶಾಲೆ ಅರಸಿನಮಕ್ಕಿ,ಶಿಶಿಲ ಶಾಲೆ ,ಕೊಳಕ್ಕೆಬೈಲು ಶಾಲಾ ವಿದ್ಯಾರ್ಥಿಗಳಿಗೆ ಪರಿಸರದೊಂದಿಗೆ ವನ್ಯಜೀವಿ ಸಂರಕ್ಷಣೆ ಮತ್ತು ಕಾಡ್ಗಿಚ್ಚು ಸಂಭವಿಸದಂತೆ ಅನುಸರಿಸುವ ಮುಂಜಾಗೃತಾ ಕ್ರಮಗಳು ಮತ್ತು ಕಾಡ್ಗಿಚ್ಚು ಕಂಡುಬಂದಲ್ಲಿ ಯಾವ ರೀತಿಯಾಗಿ ಅರಣ್ಯ ಇಲಾಖೆಯ ಸಂಪರ್ಕದೊಂದಿಗೆ ಸೇರಿಕೊಂಡು ಅದನ್ನು ಹತೋಟಿಗೆ ತರಬಹುದು ಎಂಬುದರ ಬಗ್ಗೆ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯ ಸುರೇಶ್ ಶಿಬಾಜೆ ವಿವರಿಸಿದರು.

ಅರಣ್ಯಾಧಿಕಾರಿ ನಾಗಲಿಂಗ ಮತ್ತು ಸಚಿನ್ ಇವರು ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ಉಂಟಾಗುವ ನೀರಿನ ಕೊರತೆಗೆ ನಾಗರಿಕ ಸಮಾಜದಿಂದ ಯಾವ ರೀತಿಯ ಸಹಾಯ ಮಾಡಬಹುದೆಂದು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಈ ಎಲ್ಲ ವಿಷಯಗಳ ಬಗ್ಗೆ ಜಾಗೃತಿಗಾಗಿ ಕರಪತ್ರಗಳನ್ನು ಹಂಚಲಾಯಿತು. ವಿಪತ್ತು ನಿರ್ವಹಣಾ ಘಟಕದ ಸಂಯೋಜಕಿ ರಶ್ಮಿತಾ ಶಿಶಿಲ, ಘಟಕ ಪ್ರತಿನಿಧಿ ಆನಂದ ನಾಯ್ಕ,ರಮೇಶ್ ಭೈರಕಟ್ಟ,ಅವಿನಾಶ್ ಭಿಡೆ,ಶೀನಪ್ಪ ಶಿಶಿಲ ಅಭಿಯಾನದಲ್ಲಿ ಸಹಕಾರ ನೀಡಿದರು. ಶಿಶಿಲ ಶಾಲೆಯಲ್ಲಿ ಅಭಿಯಾನದ ಸಮಯದಲ್ಲಿ ಕಳೆದ ವರ್ಷ ಕಾಡ್ಗಿಚ್ಚು ಉಂಟಾದ ಸಮಯದಲ್ಲಿ ಅರಣ್ಯಾಧಿಕಾರಿಗಳಿಗೆ ಸಹಕಾರ ನೀಡಿದ ಮನೀಷ್ ಎಂಬ ಬಾಲಕನನ್ನು ಅರಣ್ಯಾಧಿಕಾರಿ ಸಚಿನ್ ಶ್ಲಾಘಿಸಿದರು.

Related posts

ಕಲ್ಮಂಜ: 18ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮ

Suddi Udaya

ಮುಂಡಾಜೆ ಸೋಮಂತಡ್ಕದಲ್ಲಿ ಕಾಂಗ್ರೆಸ್ ಪ್ರಚಾರ ಸಭೆ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ, ಮಾನಹಾನಿಕಾರಕ ಸುದ್ದಿ ಹರಡಿ ತೇಜೋವಧೆ ಆರೋಪ:ಶೇಖರ್ ಲಾಯಿಲ ವಿರುದ್ಧ ಬ್ಲಾಕ್ ಕಾಂಗ್ರೆಸ್ ಉಭಯ ಘಟಕಗಳ ಅಧ್ಯಕ್ಷರು ಹಾಗೂ ಯೂತ್‌ಕಾಂಗ್ರೆಸ್ ಜಿಲ್ಲಾ ಸಮಿತಿ ಕಾರ್ಯದರ್ಶಿಯಿಂದ ಪೊಲೀಸರಿಗೆ ದೂರು

Suddi Udaya

ಬೆಳ್ತಂಗಡಿ ಮುಗೇರ ಹಿತಚಿಂತನ ವೇದಿಕೆಯ ವತಿಯಿಂದ ಧನಸಹಾಯ ಹಸ್ತಾಂತರ

Suddi Udaya

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡರಿಗೆ ಗಡಿನಾಡ ಕನ್ನಡ ಸೇವಾ ರತ್ನ ಪ್ರಶಸ್ತಿ

Suddi Udaya

ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದ ಪ್ರಕರಣ: ಚಿಕಿತ್ಸೆ ಫಲಿಸದೆ ಕಾಲೇಜು ವಿದ್ಯಾರ್ಥಿ ಸಾವು

Suddi Udaya
error: Content is protected !!