24.8 C
ಪುತ್ತೂರು, ಬೆಳ್ತಂಗಡಿ
April 30, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಟರ್ಮ್ ಇನ್ಶೂರೆನ್ಸ್ ” ಕುರಿತು ಮಾಹಿತಿ ಕಾರ್ಯಾಗಾರ

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ (ರಿ) ನಡೆಸುತ್ತಿರುವ ಎಲ್ ಸಿ ಆರ್ ಇಂಡಿಯನ್ ಪದವಿ ಕಾಲೇಜು ಇಲ್ಲಿನ ಬಿ.ಕಾಂ ವಿಭಾಗದ ವಿದ್ಯಾರ್ಥಿಗಳಿಗೆ ನಿಗದಿತ ಅವಧಿಗೆ ಆರ್ಥಿಕ ರಕ್ಷಣೆಯನ್ನು ನೀಡುವ ಟರ್ಮ್ ಇನ್ಶೂರೆನ್ಸ್ ನ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಬೇಕು ಎಂಬ ನಿಟ್ಟಿನಲ್ಲಿ ” ಟರ್ಮ್ ಇನ್ಶೂರೆನ್ಸ್” ಕುರಿತು ಮಾಹಿತಿ ಕಾರ್ಯಗಾರವು ಮಾ.05 ರಂದು ನಡೆಯಿತು.

ಕಾರ್ಯಗಾರದಲ್ಲಿ ಟರ್ಮ್ ಇನ್ಶೂರೆನ್ಸ್ ನ ಮಹತ್ವ , ವಿಮೆಯ ಉಪಯೋಗ , ಟರ್ಮ್ ವಿಮಾ ವಯಸ್ಸಿನ ಮಿತಿ ಮತ್ತು ಇತರ ಅವಶ್ಯಕತೆಗಳ ಪ್ರಾಮುಖ್ಯತೆ, ವಿಭಿನ್ನ ರೀತಿಯ ನೀತಿಗಳು , ತೀವ್ರ ಅನಾರೋಗ್ಯ ಮತ್ತು ಇತರ ಪ್ರಯೋಜನಗಳನ್ನು ಒಳಗೊಂಡಿತ್ತು. ಅದರೊಂದಿಗೆ ಪಾಲಿಸಿ ಬಜಾರ್ ಮತ್ತು ಇತರ ವೆಬ್‌ಸೈಟ್‌ಗಳಲ್ಲಿ ವಿಮೆಯನ್ನು ಖರೀದಿಸುವ ಲೈವ್ ಸೆಷನ್ ವಿದ್ಯಾರ್ಥಿಗಳಿಗೆ ತಿಳಿಸಿಕೊಡಲಾಯಿತು.

ಸಂಸ್ಥೆಯ ಸಂಯೋಜಕರಾದ ಯಶವಂತ ಜಿ ನಾಯಕ್ ಮಾಹಿತಿ ಕಾರ್ಯಗಾರ ನಡೆಸಿಕೊಟ್ಟರು.
ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೊ, ಪದವಿ ವಿಭಾಗದ ಮುಖ್ಯಸ್ಥರಾದ ದೀಕ್ಷಿತಾ.ಎ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ವಿಂದ್ಯಾಶ್ರೀ. ಎ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳ ಉಪಸ್ಥಿತಿಯಲ್ಲಿ ಕಾರ್ಯಾಗಾರವು ಯಶಸ್ವಿಯಾಗಿ ನಡೆಯಿತು.

Related posts

ಬೆಳ್ತಂಗಡಿ : ಪಟಾಕಿ ಅಂಗಡಿಗಳಿಗೆ ಅಧಿಕಾರಿಗಳಿಂದ ಪರಿಶೀಲನೆ: ಪಟಾಕಿ ದಾಸ್ತಾನು ಮಾಡಿದ್ದ ಮೂರು ಗೋದಾಮಿಗೆ ಬೀಗ

Suddi Udaya

ಕೊಯ್ಯೂರು ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿಯಿಂದ ಸಮಲೋಚನಾ ಸಭೆ

Suddi Udaya

ಶಿಶಿಲ: ಚಿಕನ್ ಸೆಂಟರ್ ಶುಭಾರಂಭ

Suddi Udaya

ಪಡ್ಲಾಡಿ ಸ.ಹಿ.ಪ್ರಾ. ಶಾಲೆಯಲ್ಲಿ ಪರಿಸರ ಮಾಹಿತಿ ಮತ್ತು ಗಿಡನಾಟಿ ಕಾರ್ಯಕ್ರಮ

Suddi Udaya

ಇಂಡೋ ನೇಪಾಳ ಅಂತರಾಷ್ಟ್ರೀಯ ಚಾಂಪಿಯನ್‌ಶಿಪ್ ತ್ರೋಬಾಲ್ ಪಂದ್ಯಾಟ: ಕಣಿಯೂರಿನ ಯೂನಿತ್ ಕೆ. ನಾಯಕತ್ವದ ತಂಡ ಪ್ರಥಮ ಸ್ಥಾನ

Suddi Udaya

ಕಾಂಗ್ರೇಸ್ ಸರ್ಕಾರದಿಂದ ಕಾನೂನುವ್ಯವಸ್ಥೆಯ ಅಪಹಾಸ್ಯ :ಬೆಳ್ತಂಗಡಿ ಬಿಜೆಪಿ ಮಂಡಲ ಆಕ್ರೋಶ

Suddi Udaya
error: Content is protected !!