25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಟರ್ಮ್ ಇನ್ಶೂರೆನ್ಸ್ ” ಕುರಿತು ಮಾಹಿತಿ ಕಾರ್ಯಾಗಾರ

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ (ರಿ) ನಡೆಸುತ್ತಿರುವ ಎಲ್ ಸಿ ಆರ್ ಇಂಡಿಯನ್ ಪದವಿ ಕಾಲೇಜು ಇಲ್ಲಿನ ಬಿ.ಕಾಂ ವಿಭಾಗದ ವಿದ್ಯಾರ್ಥಿಗಳಿಗೆ ನಿಗದಿತ ಅವಧಿಗೆ ಆರ್ಥಿಕ ರಕ್ಷಣೆಯನ್ನು ನೀಡುವ ಟರ್ಮ್ ಇನ್ಶೂರೆನ್ಸ್ ನ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಬೇಕು ಎಂಬ ನಿಟ್ಟಿನಲ್ಲಿ ” ಟರ್ಮ್ ಇನ್ಶೂರೆನ್ಸ್” ಕುರಿತು ಮಾಹಿತಿ ಕಾರ್ಯಗಾರವು ಮಾ.05 ರಂದು ನಡೆಯಿತು.

ಕಾರ್ಯಗಾರದಲ್ಲಿ ಟರ್ಮ್ ಇನ್ಶೂರೆನ್ಸ್ ನ ಮಹತ್ವ , ವಿಮೆಯ ಉಪಯೋಗ , ಟರ್ಮ್ ವಿಮಾ ವಯಸ್ಸಿನ ಮಿತಿ ಮತ್ತು ಇತರ ಅವಶ್ಯಕತೆಗಳ ಪ್ರಾಮುಖ್ಯತೆ, ವಿಭಿನ್ನ ರೀತಿಯ ನೀತಿಗಳು , ತೀವ್ರ ಅನಾರೋಗ್ಯ ಮತ್ತು ಇತರ ಪ್ರಯೋಜನಗಳನ್ನು ಒಳಗೊಂಡಿತ್ತು. ಅದರೊಂದಿಗೆ ಪಾಲಿಸಿ ಬಜಾರ್ ಮತ್ತು ಇತರ ವೆಬ್‌ಸೈಟ್‌ಗಳಲ್ಲಿ ವಿಮೆಯನ್ನು ಖರೀದಿಸುವ ಲೈವ್ ಸೆಷನ್ ವಿದ್ಯಾರ್ಥಿಗಳಿಗೆ ತಿಳಿಸಿಕೊಡಲಾಯಿತು.

ಸಂಸ್ಥೆಯ ಸಂಯೋಜಕರಾದ ಯಶವಂತ ಜಿ ನಾಯಕ್ ಮಾಹಿತಿ ಕಾರ್ಯಗಾರ ನಡೆಸಿಕೊಟ್ಟರು.
ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೊ, ಪದವಿ ವಿಭಾಗದ ಮುಖ್ಯಸ್ಥರಾದ ದೀಕ್ಷಿತಾ.ಎ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ವಿಂದ್ಯಾಶ್ರೀ. ಎ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳ ಉಪಸ್ಥಿತಿಯಲ್ಲಿ ಕಾರ್ಯಾಗಾರವು ಯಶಸ್ವಿಯಾಗಿ ನಡೆಯಿತು.

Related posts

ಗುರುವಾಯನಕೆರೆ: ಸುಧಾಕರ ನಾಯಕ್ ನಿಧನ

Suddi Udaya

ಇಳಂತಿಲ ಶಾಲೆಗೆ ನುಗ್ಗಿದ ಕಳ್ಳರು: ಕಪಾಟಿನಲ್ಲಿ ಇಟ್ಟಿದ್ದ ನಗದು ಕಳವು

Suddi Udaya

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಅಮಾನವೀಯ ದಾಳಿಯನ್ನು ಖಂಡಿಸಿ ಧರ್ಮಪ್ರೇಮಿಗಳು ಮತ್ತು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಮೌನ ಪ್ರತಿಭಟನೆ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ ಹಸ್ತಾಂತರ

Suddi Udaya

ಬೆಳ್ತಂಗಡಿ ಶ್ರೀ ಧ. ಆಂ.ಮಾ. ಶಾಲೆಗೆ ರಾಷ್ಟ್ರೀಯ ಸಂಸ್ಥೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ನಿರ್ದೇಶಕ ಡಾ. ಕೆ. ಶರ್ಮ ಭೇಟಿ

Suddi Udaya

ತಾಲೂಕು ಹಬ್ಬಗಳ ಆಚರಣೆ ಸಮಿತಿಯಿಂದ ಡಾ|| ಬಿ.ಆರ್.ಅಂಬೇಡ್ಕರ್ ಜನ್ಮದಿನಾಚರಣೆ

Suddi Udaya
error: Content is protected !!