September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಟರ್ಮ್ ಇನ್ಶೂರೆನ್ಸ್ ” ಕುರಿತು ಮಾಹಿತಿ ಕಾರ್ಯಾಗಾರ

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ (ರಿ) ನಡೆಸುತ್ತಿರುವ ಎಲ್ ಸಿ ಆರ್ ಇಂಡಿಯನ್ ಪದವಿ ಕಾಲೇಜು ಇಲ್ಲಿನ ಬಿ.ಕಾಂ ವಿಭಾಗದ ವಿದ್ಯಾರ್ಥಿಗಳಿಗೆ ನಿಗದಿತ ಅವಧಿಗೆ ಆರ್ಥಿಕ ರಕ್ಷಣೆಯನ್ನು ನೀಡುವ ಟರ್ಮ್ ಇನ್ಶೂರೆನ್ಸ್ ನ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಬೇಕು ಎಂಬ ನಿಟ್ಟಿನಲ್ಲಿ ” ಟರ್ಮ್ ಇನ್ಶೂರೆನ್ಸ್” ಕುರಿತು ಮಾಹಿತಿ ಕಾರ್ಯಗಾರವು ಮಾ.05 ರಂದು ನಡೆಯಿತು.

ಕಾರ್ಯಗಾರದಲ್ಲಿ ಟರ್ಮ್ ಇನ್ಶೂರೆನ್ಸ್ ನ ಮಹತ್ವ , ವಿಮೆಯ ಉಪಯೋಗ , ಟರ್ಮ್ ವಿಮಾ ವಯಸ್ಸಿನ ಮಿತಿ ಮತ್ತು ಇತರ ಅವಶ್ಯಕತೆಗಳ ಪ್ರಾಮುಖ್ಯತೆ, ವಿಭಿನ್ನ ರೀತಿಯ ನೀತಿಗಳು , ತೀವ್ರ ಅನಾರೋಗ್ಯ ಮತ್ತು ಇತರ ಪ್ರಯೋಜನಗಳನ್ನು ಒಳಗೊಂಡಿತ್ತು. ಅದರೊಂದಿಗೆ ಪಾಲಿಸಿ ಬಜಾರ್ ಮತ್ತು ಇತರ ವೆಬ್‌ಸೈಟ್‌ಗಳಲ್ಲಿ ವಿಮೆಯನ್ನು ಖರೀದಿಸುವ ಲೈವ್ ಸೆಷನ್ ವಿದ್ಯಾರ್ಥಿಗಳಿಗೆ ತಿಳಿಸಿಕೊಡಲಾಯಿತು.

ಸಂಸ್ಥೆಯ ಸಂಯೋಜಕರಾದ ಯಶವಂತ ಜಿ ನಾಯಕ್ ಮಾಹಿತಿ ಕಾರ್ಯಗಾರ ನಡೆಸಿಕೊಟ್ಟರು.
ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೊ, ಪದವಿ ವಿಭಾಗದ ಮುಖ್ಯಸ್ಥರಾದ ದೀಕ್ಷಿತಾ.ಎ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ವಿಂದ್ಯಾಶ್ರೀ. ಎ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳ ಉಪಸ್ಥಿತಿಯಲ್ಲಿ ಕಾರ್ಯಾಗಾರವು ಯಶಸ್ವಿಯಾಗಿ ನಡೆಯಿತು.

Related posts

ಬೆಳ್ತಂಗಡಿ ಧರ್ಮ ಪ್ರಾಂತ್ಯದ ವಂ| ಸಿ| ಟೆಸಿ ಮಾನುವೆಲ್ ಎಸ್ ಎಚ್ ರವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪ್ರದಾನ

Suddi Udaya

ಚಾತುರ್ಮಾಸ್ಯ ವೃತಾಚರಣೆಯಲ್ಲಿರುವ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಭೇಟಿ ಮಾಡಿದ ಉಡುಪಿ -ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ

Suddi Udaya

ಬಜಿರೆ: ಚಿರತೆ ಓಡಾಟ-ಜನರಲ್ಲಿ ಆತಂಕ

Suddi Udaya

ತಿಮ್ಮಣಬೆಟ್ಟು ಸ.ಉ.ಪ್ರಾ.ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲಾ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಅಂಡಿಂಜೆ ಗ್ರಾಮ ಪಂಚಾಯತ್ ಹಾಗೂ ಒಕ್ಕೂಟದ ವತಿಯಿಂದ ರೈತ ತರಬೇತಿ ಕಾರ್ಯಕ್ರಮ

Suddi Udaya
error: Content is protected !!