25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಕ್ಸಲರಿಗೆ ಶರಣಾದ ಸರ್ಕಾರ ಅಭಿವೃದ್ಧಿಯ ಕನಸು ಹುಸಿಯಾಗಿಸಿದ ಬಜೆಟ್: ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ : ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಇಂದು ಮಂಡಿಸಿದ 2025- 26ರ ಸಾಲಿನ ಮುಂಗಡ ಪತ್ರ ನಕ್ಸಲರಿಗೆ ಶರಣಾಗಿ ಶ್ರೀಸಾಮಾನ್ಯರ ಪಾಲಿಗೆ ಸಂಪೂರ್ಣ ನಿರಾಶದಾಯಕವಾಗಿದೆಯೆಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಬೇಸರ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಸರ್ಕಾರಕ್ಕೆ ನಕ್ಸಲ್ ಚಟುವಟಿಕೆ ಬಗ್ಗೆ ಪೂರ್ಣ ಅರಿವಿದ್ದಂತೆ ಕೇವಲ ಆರು ಜನರ ನಕ್ಸಲರ ಶರಣಗಾತಿಯಿಂದ ನಕ್ಸಲ್ ನಿಗ್ರಹ ಪಡೆಯನ್ನೇ ವಿಸರ್ಜಿಸಿ 10 ಕೋಟಿ ವಿಶೇಷ ಪ್ಯಾಕೇಜ್ ನೀಡಿದ್ದನ್ನು ಗಮನಿಸಿದರೆ ನಕ್ಸಲರು ಸರ್ಕಾರಕ್ಕೆ ಶರಣಾಗಿದ್ದರೋ ಅಥವಾ ಸರ್ಕಾರವೇ ನಕ್ಸಲರಿಗೆ ಶರಣಾಯಿತೋ ಎಂಬಂತಿದೆ.

ಯೋಜನಾಬದ್ಧವಲ್ಲದ ಯೋಚನೆಗಳಿಂದ ಕರ್ನಾಟಕ ರಾಜ್ಯದ ವಿತ್ತೀಯ ಶಿಸ್ತು ಹಳಿತಪ್ಪಿ ಮೂಲ ಸೌಕರ್ಯಗಳ ಅಭಿವೃದ್ಧಿ ಕುಂಠಿತದೊಂದಿಗೆ ರಾಜ್ಯದ ಜನತೆ ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸುತ್ತಿದ್ದಾರೆ. ಕಳೆದ ಸಾಲಿನ ಮುಂಗಡ ಪತ್ರದಲ್ಲಿ ವಿವಿಧ ಇಲಾಖೆಗಳಿಗೆ ಘೋಷಿಸಿದ ಅನುದಾನ ಅನುಷ್ಠಾನವಾಗದೆ ದುರುಪಯೋಗವಾಗಿದ್ದು ಈ ಬಾರಿಯೂ ಮುಖ್ಯಮಂತ್ರಿಗಳ ಬಜೆಟ್ ಭಾಷಣದಲ್ಲಿ ಎಂದಿನಂತೆ ಅಲ್ಪ ಸಂಖ್ಯಾತರ ತುಷ್ಟೀಕರಣ, ಮೂಲ ಸೌಕರ್ಯ, ಶಿಕ್ಷಣ, ಆರೋಗ್ಯ, ಇಂಧನ ಕೃಷಿ ಇಲಾಖೆಗಳ ಕಡೆಗಣನೆ ಎದ್ದು ಕಾಣುತ್ತಿದೆ. ಒಟ್ಟಾರೆಯಾಗಿ ರಾಜ್ಯದ ಆರ್ಥಿಕ ಪ್ರಗತಿ ಕುಂಠಿತವಾಗುತ್ತಿರುವುದರ ಬಗ್ಗೆ ತೀವ್ರವಾದ ಕಳವಳವನ್ನು ಶಾಸಕ ಹರೀಶ್ ಪೂಂಜ ಪ್ರಕಟಣೆ ಮೂಲಕ ವ್ಯಕ್ತಪಡಿಸಿದ್ದಾರೆ.

Related posts

ವೇಣೂರು ವಿ.ಹಿಂ.ಪ. ಬಜರಂಗದಳ ಹಾಗೂ ಹಿಂದೂ ಜಾಗರಣ ವೇದಿಕೆ ಆಶ್ರಯದಲ್ಲಿ ಅಖಂಡ ಭಾರತ ಸಂಕಲ್ಪ ದಿನ ಮತ್ತು ಪಂಜಿನ ಮೆರವಣಿಗೆ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯಿಂದ ಇಫ್ತಾರ್ ಸ್ನೇಹ ಸಮ್ಮಿಲನ ಕಾರ್ಯಕ್ರಮ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಪೋಷಕ ಮತ್ತು ಶಿಕ್ಷಕ ಸಭೆ

Suddi Udaya

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಫಿತ್ರ್

Suddi Udaya

ಗರ್ಡಾಡಿ: ಭೋಜ ಬಂಗೇರ ಕಾಣೇಲು ನಿಧನ

Suddi Udaya

ಬಿಜೆಪಿ ಶಿಶಿಲ ಶಕ್ತಿಕೇಂದ್ರದ ಕಾರ್ಯಕರ್ತರ ಸಭೆ

Suddi Udaya
error: Content is protected !!