Uncategorized

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಹದಿಹರೆಯದ ಹೆಣ್ಣು ಮಕ್ಕಳಲ್ಲಿ ಕಂಡುಬರುವ ಬದಲಾವಣೆಯ ಕುರಿತು ಮಾಹಿತಿ

ಪಟ್ರಮೆ: ತಾಲೂಕು ಆರೋಗ್ಯ ಕೇಂದ್ರ ಬೆಳ್ತಂಗಡಿ ಹಾಗೂ ಸಮುದಾಯ ಆರೋಗ್ಯ ಕೇಂದ್ರ ಕೊಕ್ಕಡ ಇದರ ವತಿಯಿಂದ ಪಟ್ಟೂರಿನ ಶ್ರೀರಾಮ ವಿದ್ಯಾ ಸಂಸ್ಥೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಹದಿಹರೆಯದ ಹೆಣ್ಣು ಮಕ್ಕಳಲ್ಲಿ ಕಂಡುಬರುವ ಬದಲಾವಣೆಗಳು ಮತ್ತು ಸಮಸ್ಯೆಗಳ ಕುರಿತು ಮಾಹಿತಿ ಹಾಗೂ ಹದಿಹರೆಯದಲ್ಲಿ ಹೆಣ್ಣು ಮಕ್ಕಳು ಕೈಗೊಳ್ಳಬೇಕಾದ ಅಗತ್ಯ ಮುನ್ನೆಚ್ಚರಿಕ ಕ್ರಮಗಳ ಕುರಿತು ಕೊಕ್ಕಡ ಆರೋಗ್ಯ ಕೇಂದ್ರದ ಸಮುದಾಯ ಆರೋಗ್ಯ ಅಧಿಕಾರಿ ಭುವನೇಶ್ವರಿ ಮಾಹಿತಿ ನೀಡಿದರು.

ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ರಕ್ತದ ಪರೀಕ್ಷೆ ಮಾಡಿ ರಕ್ತದಲ್ಲಿರುವ ಹಿಮೋಗ್ಲೋಬಿನ್ ಪ್ರಮಾಣವನ್ನು ಪರೀಕ್ಷಿಸಿದ ಅವರು ಮಕ್ಕಳಿಗೆ ಹಿಮೋಗ್ಲೋಬಿನ್ ಕಡಿಮೆ ಆಗಲು ಕಾರಣ ಮತ್ತು ಹಿಮೋಗ್ಲೋಬಿನ್ ಹೆಚ್ಚಿಸುವ ಆಹಾರ ಪದಾರ್ಥಗಳ ಸೇವನೆ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಕೊಕ್ಕಡ ಪ್ರಾಥಮಿಕ ಆರೋಗ್ಯ ಕೇಂದ್ರದ ಆಶಾ ಕಾರ್ಯಕರ್ತೆಯರಾದ ಚೈತ್ರ ಮತ್ತು ಗಾಯತ್ರಿಹಾಗೂ ಶಾಲಾ ಶಿಕ್ಷಕ ವೃಂದದವರು ಜೊತೆಗಿದ್ದರು. ಶಾಲಾ ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಂಡರು.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ವತಿಯಿಂದ ‘ಯೋಗ ರತ್ನ ಪ್ರಶಸ್ತಿ’ಗೆ ಚಿನ್ಮಯಿ ಎ. ಬೆಂಗಳೂರು ಆಯ್ಕೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಮೇಲಂತಬೆಟ್ಟು ವಲಯದಲ್ಲಿ ವಾತ್ಸಲ್ಯ ಮನೆ ನಿರ್ಮಾಣಕ್ಕೆ ಶಿಲಾನ್ಯಾಸ

Suddi Udaya

ಕೊಕ್ಕಡ:ಮನೆಯೊಂದರ ಅಂಗಳದಲ್ಲಿ ಕಾರೊಂದನ್ನು ಹಿಂದಕ್ಕೆ ಚಲಾಯಿಸುತ್ತಿದ್ದ ವೇಳೆ ಬಾಲಕನೋರ್ವ ಕಾರಿನಡಿಗೆ ಬಿದ್ದು ಮೃತಪಟ್ಟ ಘಟನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ: ದಿ ಹಾರ್ಟ್ ಆಫ್ ಧರ್ಮ ಕೃತಿ ಲೋಕಾರ್ಪಣೆ

Suddi Udaya

ವಾಣಿ ಪ.ಪೂ. ಕಾಲೇಜಿನಲ್ಲಿ ಪ್ರಥಮ ವರ್ಷದ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಮುಸ್ತಾಕ್ ಅನುಮಾನಸ್ಪದ ಸಾವು ಪ್ರಕರಣ: ಪ್ರಕರಣಕ್ಕೆ ತಿರುವು ಪಡೆದ ಮತ್ತೊಂದು ಪ್ರಕರಣ

Suddi Udaya
error: Content is protected !!