24 C
ಪುತ್ತೂರು, ಬೆಳ್ತಂಗಡಿ
June 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ವಕೀಲರ ಸಂಘದಿಂದ ನ್ಯಾಯಾಲಯದ ಕಟ್ಟಡ ಮಂಜೂರುಗೊಳಿಸುವಂತೆ ಬೆಂಗಳೂರಿನಲ್ಲಿ ಸಚಿವರುಗಳ ಭೇಟಿ

ಬೆಳ್ತಂಗಡಿ : ಇತ್ತೀಚೆಗೆ ಬೆಳ್ತಂಗಡಿಯಲ್ಲಿ ನಡೆದ ಅಪರ ಸರ್ಕಾರಿ ವಕೀಲರ ಕಛೇರಿ ಉದ್ಘಾಟನೆ ಮತ್ತು ವಕೀಲರ ಸಂಘದಲ್ಲಿ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿಧಾನ ಪರಿಷತ್ ಶಾಸಕ ಐವನ್ ಡಿ ಸೋಜಾ ರವರು ಬೆಳ್ತಂಗಡಿಯ 60 ವರ್ಷ ಹಳೆಯದಾದ ನ್ಯಾಯಾಲಯದ ಕಟ್ಟಡವನ್ನು ವೀಕ್ಷಿಸಿ ಸರ್ಕಾರದ ಮಟ್ಟದಲ್ಲಿ ಹೊಸ ನ್ಯಾಯಾಲಯದ ಕಟ್ಟಡ ಮಂಜೂರಾತಿಗೆ ಬಜೆಟ್ ನಲ್ಲಿ ಅನುದಾನ ನೀಡಲು ಒತ್ತಡ ತರುವ ಬಗ್ಗೆ ವಕೀಲರ ನಿಯೋಗವನ್ನು ಸಂಬಂಧಪಟ್ಟ ಸಚಿವರ ಬಳಿ ಕರೆದೊಯ್ಯುವ ಭರವಸೆ ನೀಡಿದ್ದರು.

ಅದರಂತೆ ಮಾರ್ಚ್ 06 ರಂದು ಬೆಂಗಳೂರಿನ ಬಜೆಟ್ ಅಧಿವೇಶನದ ಸಂದರ್ಭ ವಿಧಾನ ಪರಿಷತ್ ಶಾಸಕರಾದ ಐವನ್ ಡಿ ಸೋಜಾ ರವರ ನೇತೃತ್ವದಲ್ಲಿ ಕಾನೂನು ಸಚಿವರಾದ ಎಚ್. ಕೆ ಪಾಟೀಲ್, ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಯವರುಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ, ಪ್ರಧಾನ ಕಾರ್ಯದರ್ಶಿ ನವೀನ್, ಬೀ ಕೆ, ಹಿರಿಯ ವಕೀಲರ ಸಮಿತಿ ಚೇರ್ಮನ್ ಅಲೋಶಿಯಸ್ ಎಸ್ ಲೋಬೋ, ಅಪರ ಸರ್ಕಾರಿ ವಕೀಲ ಮನೋಹರ ಕುಮಾರ್, ಎ ಮತ್ತು ಮಾಜಿ ಅಧ್ಯ್ಷರಾದ ಶಿವ ಕುಮಾರ್ ಎಸ್.ಎಂ ಜೊತೆಗಿದ್ದರು.

Related posts

ಅಮೇರಿಕಾದಲ್ಲಿ ನೆಲೆಸಿದರೂ ಭಾರತೀಯ ಸಂಸ್ಕಾರದ ಧಾರ್ಮಿಕ ವಿಧಿ ವಿಧಾನಗಳನ್ನು ಬಳಸಿ ಗೃಹ ಪ್ರವೇಶ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಹೆಗ್ಗಡೆಯವರಿಗೆ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಗೌರವ ಪ್ರಶಸ್ತಿ: ಸಿರಿ ಸಿಬ್ಬಂದಿಗಳಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಮೋಹನ್ ಕುಮಾರ್ ನೇತೃತ್ವದಲ್ಲಿ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್, ವಿವಿಧ ಸಂಘ ಸಂಸ್ಥೆಗಳ ನೇತೃತ್ವದಲ್ಲಿ “ಯಶೋ-ವಿಜಯ”ಬದುಕು-ನೆನೆಪು-ಸ್ಮರಣೆ ವಿಶೇಷ ಕಾರ್ಯಕ್ರಮ

Suddi Udaya

ಬರೆಂಗಾಯ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ: ಪಂಚಾಯತ್ ಸದಸ್ಯರ ಪೂರ್ವಭಾವಿ ಸಭೆ: ಮಹಾತ್ಮಾ ಗಾಂಧಿಯವರ ‘ಗ್ರಾಮ ಸ್ವರಾಜ್ಯ’ ಕನಸು ಸಾಕಾರಗೊಳಿಸಿದ್ದು ‘ಪಂಚಾಯತ್ ರಾಜ್’ ವ್ಯವಸ್ಥೆ: ರಕ್ಷಿತ್ ಶಿವರಾಂ

Suddi Udaya

ಗುರುವಾಯನಕೆರೆ: ಶಕ್ತಿನಗರದಲ್ಲಿ ಚರಂಡಿ ವ್ಯವಸ್ಥೆಯಿಲ್ಲದೆ ರಸ್ತೆಯಲ್ಲೇ ಹರಿದ ನೀರು

Suddi Udaya
error: Content is protected !!