July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ವಕೀಲರ ಸಂಘದಿಂದ ನ್ಯಾಯಾಲಯದ ಕಟ್ಟಡ ಮಂಜೂರುಗೊಳಿಸುವಂತೆ ಬೆಂಗಳೂರಿನಲ್ಲಿ ಸಚಿವರುಗಳ ಭೇಟಿ

ಬೆಳ್ತಂಗಡಿ : ಇತ್ತೀಚೆಗೆ ಬೆಳ್ತಂಗಡಿಯಲ್ಲಿ ನಡೆದ ಅಪರ ಸರ್ಕಾರಿ ವಕೀಲರ ಕಛೇರಿ ಉದ್ಘಾಟನೆ ಮತ್ತು ವಕೀಲರ ಸಂಘದಲ್ಲಿ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿಧಾನ ಪರಿಷತ್ ಶಾಸಕ ಐವನ್ ಡಿ ಸೋಜಾ ರವರು ಬೆಳ್ತಂಗಡಿಯ 60 ವರ್ಷ ಹಳೆಯದಾದ ನ್ಯಾಯಾಲಯದ ಕಟ್ಟಡವನ್ನು ವೀಕ್ಷಿಸಿ ಸರ್ಕಾರದ ಮಟ್ಟದಲ್ಲಿ ಹೊಸ ನ್ಯಾಯಾಲಯದ ಕಟ್ಟಡ ಮಂಜೂರಾತಿಗೆ ಬಜೆಟ್ ನಲ್ಲಿ ಅನುದಾನ ನೀಡಲು ಒತ್ತಡ ತರುವ ಬಗ್ಗೆ ವಕೀಲರ ನಿಯೋಗವನ್ನು ಸಂಬಂಧಪಟ್ಟ ಸಚಿವರ ಬಳಿ ಕರೆದೊಯ್ಯುವ ಭರವಸೆ ನೀಡಿದ್ದರು.

ಅದರಂತೆ ಮಾರ್ಚ್ 06 ರಂದು ಬೆಂಗಳೂರಿನ ಬಜೆಟ್ ಅಧಿವೇಶನದ ಸಂದರ್ಭ ವಿಧಾನ ಪರಿಷತ್ ಶಾಸಕರಾದ ಐವನ್ ಡಿ ಸೋಜಾ ರವರ ನೇತೃತ್ವದಲ್ಲಿ ಕಾನೂನು ಸಚಿವರಾದ ಎಚ್. ಕೆ ಪಾಟೀಲ್, ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಯವರುಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ, ಪ್ರಧಾನ ಕಾರ್ಯದರ್ಶಿ ನವೀನ್, ಬೀ ಕೆ, ಹಿರಿಯ ವಕೀಲರ ಸಮಿತಿ ಚೇರ್ಮನ್ ಅಲೋಶಿಯಸ್ ಎಸ್ ಲೋಬೋ, ಅಪರ ಸರ್ಕಾರಿ ವಕೀಲ ಮನೋಹರ ಕುಮಾರ್, ಎ ಮತ್ತು ಮಾಜಿ ಅಧ್ಯ್ಷರಾದ ಶಿವ ಕುಮಾರ್ ಎಸ್.ಎಂ ಜೊತೆಗಿದ್ದರು.

Related posts

ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ದ.ಕ ಜಿಲ್ಲಾ ಅಧಿಕಾರಿ ಜಿನೇಂದ್ರ ಕೋಟ್ಯಾನ್ ಬೆಳ್ತಂಗಡಿ ತಾಲೂಕಿನ ವಿವಿಧ ಬಸದಿಗಳಿಗೆ ಭೇಟಿ

Suddi Udaya

ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ಡಿ.ಎ ರಹಿಮಾನ್ ಅವರಿಗೆ ಪತ್ನಿ‌ ವಿಯೋಗ

Suddi Udaya

ಅಂಡಿಂಜೆಯಲ್ಲಿ ಬೈಕ್ ಅಪಘಾತ: ಅಂಡಿಂಜೆ ನಿವಾಸಿ ಮಂಗಳಾದೇವಿ ಮೇಳದ ಭಾಗವತ ಸತೀಶ್ ಆಚಾರ್ಯ ಮೃತ್ಯು

Suddi Udaya

ಧರ್ಮಸ್ಥಳ: ಕಾಲೇಜು ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ ಯಲ್ಲಿ ಡಾ| ರಂಜನ್ ಕುಮಾರ್ ಅವರ ಅನುಗ್ರಹ ಕ್ಲಿನಿಕ್ ಶುಭಾರಂಭ     

Suddi Udaya

ಎಸ್‌ಡಿಟಿಯು ಬೆಳ್ತಂಗಡಿ ತಾಲೂಕು ಸಮಿತಿ ವತಿಯಿಂದ ಮಾಸಿಕ ಸಭೆ.

Suddi Udaya
error: Content is protected !!