26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ವಕೀಲರ ಸಂಘದಿಂದ ನ್ಯಾಯಾಲಯದ ಕಟ್ಟಡ ಮಂಜೂರುಗೊಳಿಸುವಂತೆ ಬೆಂಗಳೂರಿನಲ್ಲಿ ಸಚಿವರುಗಳ ಭೇಟಿ

ಬೆಳ್ತಂಗಡಿ : ಇತ್ತೀಚೆಗೆ ಬೆಳ್ತಂಗಡಿಯಲ್ಲಿ ನಡೆದ ಅಪರ ಸರ್ಕಾರಿ ವಕೀಲರ ಕಛೇರಿ ಉದ್ಘಾಟನೆ ಮತ್ತು ವಕೀಲರ ಸಂಘದಲ್ಲಿ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿಧಾನ ಪರಿಷತ್ ಶಾಸಕ ಐವನ್ ಡಿ ಸೋಜಾ ರವರು ಬೆಳ್ತಂಗಡಿಯ 60 ವರ್ಷ ಹಳೆಯದಾದ ನ್ಯಾಯಾಲಯದ ಕಟ್ಟಡವನ್ನು ವೀಕ್ಷಿಸಿ ಸರ್ಕಾರದ ಮಟ್ಟದಲ್ಲಿ ಹೊಸ ನ್ಯಾಯಾಲಯದ ಕಟ್ಟಡ ಮಂಜೂರಾತಿಗೆ ಬಜೆಟ್ ನಲ್ಲಿ ಅನುದಾನ ನೀಡಲು ಒತ್ತಡ ತರುವ ಬಗ್ಗೆ ವಕೀಲರ ನಿಯೋಗವನ್ನು ಸಂಬಂಧಪಟ್ಟ ಸಚಿವರ ಬಳಿ ಕರೆದೊಯ್ಯುವ ಭರವಸೆ ನೀಡಿದ್ದರು.

ಅದರಂತೆ ಮಾರ್ಚ್ 06 ರಂದು ಬೆಂಗಳೂರಿನ ಬಜೆಟ್ ಅಧಿವೇಶನದ ಸಂದರ್ಭ ವಿಧಾನ ಪರಿಷತ್ ಶಾಸಕರಾದ ಐವನ್ ಡಿ ಸೋಜಾ ರವರ ನೇತೃತ್ವದಲ್ಲಿ ಕಾನೂನು ಸಚಿವರಾದ ಎಚ್. ಕೆ ಪಾಟೀಲ್, ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಯವರುಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ, ಪ್ರಧಾನ ಕಾರ್ಯದರ್ಶಿ ನವೀನ್, ಬೀ ಕೆ, ಹಿರಿಯ ವಕೀಲರ ಸಮಿತಿ ಚೇರ್ಮನ್ ಅಲೋಶಿಯಸ್ ಎಸ್ ಲೋಬೋ, ಅಪರ ಸರ್ಕಾರಿ ವಕೀಲ ಮನೋಹರ ಕುಮಾರ್, ಎ ಮತ್ತು ಮಾಜಿ ಅಧ್ಯ್ಷರಾದ ಶಿವ ಕುಮಾರ್ ಎಸ್.ಎಂ ಜೊತೆಗಿದ್ದರು.

Related posts

ಕೂತ್ಲೂರು ಬಿಲ್ಲವ ಮಹಿಳಾ ವೇದಿಕೆಯ ಅಧ್ಯಕ್ಷರಾಗಿ ಶ್ರೀಮತಿ ಉಷಾ ಆಯ್ಕೆ

Suddi Udaya

ಎಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ನಾಯಕರ ಸೆಕ್ಟರ್ ಭೇಟಿ

Suddi Udaya

ಉಜಿರೆ: ಸಿಡಿಲು ಬಡಿದು ಮನೆ ವಿದ್ಯುತ್ ವಯರಿಂಗ್ ಹಾನಿ

Suddi Udaya

ಜೆಸಿಐ ಬೆಳ್ತಂಗಡಿಯ ಪೂರ್ವ ಅಧ್ಯಕ್ಷ ಪೃಥ್ವಿರಂಜನ್ ರಾವ್ ರವರಿಗೆ ನುಡಿ ನಮನ

Suddi Udaya

ಕಾಶಿಪಟ್ಣ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 16ನೇ ವರ್ಷದ ಪಟ್ಟಾಭಿಷೇಕದ ವರ್ಧಂತ್ಯುತ್ಸವ

Suddi Udaya
error: Content is protected !!