24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ವಕೀಲರ ಸಂಘದಿಂದ ನ್ಯಾಯಾಲಯದ ಕಟ್ಟಡ ಮಂಜೂರುಗೊಳಿಸುವಂತೆ ಬೆಂಗಳೂರಿನಲ್ಲಿ ಸಚಿವರುಗಳ ಭೇಟಿ

ಬೆಳ್ತಂಗಡಿ : ಇತ್ತೀಚೆಗೆ ಬೆಳ್ತಂಗಡಿಯಲ್ಲಿ ನಡೆದ ಅಪರ ಸರ್ಕಾರಿ ವಕೀಲರ ಕಛೇರಿ ಉದ್ಘಾಟನೆ ಮತ್ತು ವಕೀಲರ ಸಂಘದಲ್ಲಿ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿಧಾನ ಪರಿಷತ್ ಶಾಸಕ ಐವನ್ ಡಿ ಸೋಜಾ ರವರು ಬೆಳ್ತಂಗಡಿಯ 60 ವರ್ಷ ಹಳೆಯದಾದ ನ್ಯಾಯಾಲಯದ ಕಟ್ಟಡವನ್ನು ವೀಕ್ಷಿಸಿ ಸರ್ಕಾರದ ಮಟ್ಟದಲ್ಲಿ ಹೊಸ ನ್ಯಾಯಾಲಯದ ಕಟ್ಟಡ ಮಂಜೂರಾತಿಗೆ ಬಜೆಟ್ ನಲ್ಲಿ ಅನುದಾನ ನೀಡಲು ಒತ್ತಡ ತರುವ ಬಗ್ಗೆ ವಕೀಲರ ನಿಯೋಗವನ್ನು ಸಂಬಂಧಪಟ್ಟ ಸಚಿವರ ಬಳಿ ಕರೆದೊಯ್ಯುವ ಭರವಸೆ ನೀಡಿದ್ದರು.

ಅದರಂತೆ ಮಾರ್ಚ್ 06 ರಂದು ಬೆಂಗಳೂರಿನ ಬಜೆಟ್ ಅಧಿವೇಶನದ ಸಂದರ್ಭ ವಿಧಾನ ಪರಿಷತ್ ಶಾಸಕರಾದ ಐವನ್ ಡಿ ಸೋಜಾ ರವರ ನೇತೃತ್ವದಲ್ಲಿ ಕಾನೂನು ಸಚಿವರಾದ ಎಚ್. ಕೆ ಪಾಟೀಲ್, ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಯವರುಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ, ಪ್ರಧಾನ ಕಾರ್ಯದರ್ಶಿ ನವೀನ್, ಬೀ ಕೆ, ಹಿರಿಯ ವಕೀಲರ ಸಮಿತಿ ಚೇರ್ಮನ್ ಅಲೋಶಿಯಸ್ ಎಸ್ ಲೋಬೋ, ಅಪರ ಸರ್ಕಾರಿ ವಕೀಲ ಮನೋಹರ ಕುಮಾರ್, ಎ ಮತ್ತು ಮಾಜಿ ಅಧ್ಯ್ಷರಾದ ಶಿವ ಕುಮಾರ್ ಎಸ್.ಎಂ ಜೊತೆಗಿದ್ದರು.

Related posts

ಬೆಳ್ತಂಗಡಿ: ಪೃಥ್ವಿ ಜುವೆಲ್ಸ್ ಮಹಾ ಪರ್ವದಲ್ಲಿ ಬಂಪರ್ ಬಹುಮಾನಗಳ ಅದೃಷ್ಟ ಲಕ್ಕಿ ಡ್ರಾ ವಿಜೇತರು

Suddi Udaya

ಹದಗೆಟ್ಟಿರುವ ಮಲ್ಲೊಟ್ಟು – ಹರ್ಪಳ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಡಿಕೆಶಿ ಮುಖ್ಯಮಂತ್ರಿ-ಪಕ್ಷದ ನಿಷ್ಠಾವಂತ ಕಾರ್ಯಕರ್ತನಿಗೆ ಸಂದ ಜಯ: ಕೆ.ಹರೀಶ್ ಕುಮಾರ್

Suddi Udaya

ಜುಲೈ 12: ಬೆಳ್ತಂಗಡಿಯಲ್ಲಿ ರಾಷ್ಟ್ರೀಯ ಲೋಕ್ ಅದಾಲತ್‌,: ರಾಜಿ ಸಂದಾನದ ಮೂಲಕ ವ್ಯಾಜ್ಯಗಳನ್ನು ಬಗೆಹರಿಸಿಕೊಳ್ಳಲು ಉತ್ತಮ ಅವಕಾಶ

Suddi Udaya

ಅನಾರೋಗ್ಯದಿಂದ ಬಳಲುತ್ತಿರುವ ಚೈತ್ರೇಶ್ ಮೊಗ್ರು ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯ ವಿಚಾರಣೆಗೆ ಹಾಜರಾದ ಸಮೀರ್ ಎಂ.ಡಿ

Suddi Udaya
error: Content is protected !!